<p><strong>ನವದೆಹಲಿ:</strong> ಜನಗಣತಿ ಸಂದರ್ಭದಲ್ಲಿ ಅಂತರ್ಲಿಂಗಿ (ಇಂಟರ್ಸೆಕ್ಸ್) ವ್ಯಕ್ತಿಗಳ ಜನನ ಮತ್ತು ಮರಣ ಕುರಿತು ಮಾಹಿತಿ ದಾಖಲಿಸುವುದಕ್ಕೆ ಅವಕಾಶ ಕಲ್ಪಿಸಬೇಕು ಎಂದು ಕೋರಿ ಸಲ್ಲಿಕೆಯಾಗಿರುವ ಅರ್ಜಿಯನ್ನು ಮೂವರು ಸದಸ್ಯರು ಇರುವ ಪೀಠಕ್ಕೆ ವರ್ಗಾಯಿಸಿ ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ.</p>.<p>ಈ ಕುರಿತ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಪೀಠವು, ‘ಇದು ಅತ್ಯುತ್ತಮ ಮೇಲ್ಮನವಿ’ ಎಂದರು.</p>.<p>ಇಂತಹ ಅವಕಾಶ ಕಲ್ಪಿಸುವಂತೆ ಕೋರಿ 34 ವರ್ಷದ ಅಂತರ್ ಲಿಂಗಿ ವ್ಯಕ್ತಿ ಶಂಕರ್ ಎಂಬುವವರು ಅರ್ಜಿ ಸಲ್ಲಿಸಿದ್ದಾರೆ.</p>.<p>ವಿಚಾರಣೆ ವೇಳೆ, ಕೇಂದ್ರದ ಪರ ಹಾಜರಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಈ ಅರ್ಜಿಗೆ ವಿರೋಧ ವ್ಯಕ್ತಪಡಿಸಲಿಲ್ಲ. </p>.<p>ಅಂತರ್ಲಿಂಗಿಗಳ ಲಿಂಗತ್ವ ಕುರಿತ ವಿವರಗಳನ್ನು ಒಳಗೊಂಡ ಗುರುತಿನ ಚೀಟಿಗಳನ್ನು ನೀಡಬೇಕು, ಅಂತರ್ಲಿಂಗಿ ಶಿಶುಗಳು ಹಾಗೂ ಮಕ್ಕಳಿಗೆ ವೈದ್ಯಕೀಯ ನೆರವು ನೀಡುವ ಸಂಬಂಧ ಕಾನೂನು ರೂಪಿಸಬೇಕು ಎಂಬುದು ಸೇರಿ ಹಲವು ಬೇಡಿಕೆಗಳನ್ನು ಈಡೇರಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿದಾರ ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಜನಗಣತಿ ಸಂದರ್ಭದಲ್ಲಿ ಅಂತರ್ಲಿಂಗಿ (ಇಂಟರ್ಸೆಕ್ಸ್) ವ್ಯಕ್ತಿಗಳ ಜನನ ಮತ್ತು ಮರಣ ಕುರಿತು ಮಾಹಿತಿ ದಾಖಲಿಸುವುದಕ್ಕೆ ಅವಕಾಶ ಕಲ್ಪಿಸಬೇಕು ಎಂದು ಕೋರಿ ಸಲ್ಲಿಕೆಯಾಗಿರುವ ಅರ್ಜಿಯನ್ನು ಮೂವರು ಸದಸ್ಯರು ಇರುವ ಪೀಠಕ್ಕೆ ವರ್ಗಾಯಿಸಿ ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ.</p>.<p>ಈ ಕುರಿತ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಪೀಠವು, ‘ಇದು ಅತ್ಯುತ್ತಮ ಮೇಲ್ಮನವಿ’ ಎಂದರು.</p>.<p>ಇಂತಹ ಅವಕಾಶ ಕಲ್ಪಿಸುವಂತೆ ಕೋರಿ 34 ವರ್ಷದ ಅಂತರ್ ಲಿಂಗಿ ವ್ಯಕ್ತಿ ಶಂಕರ್ ಎಂಬುವವರು ಅರ್ಜಿ ಸಲ್ಲಿಸಿದ್ದಾರೆ.</p>.<p>ವಿಚಾರಣೆ ವೇಳೆ, ಕೇಂದ್ರದ ಪರ ಹಾಜರಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಈ ಅರ್ಜಿಗೆ ವಿರೋಧ ವ್ಯಕ್ತಪಡಿಸಲಿಲ್ಲ. </p>.<p>ಅಂತರ್ಲಿಂಗಿಗಳ ಲಿಂಗತ್ವ ಕುರಿತ ವಿವರಗಳನ್ನು ಒಳಗೊಂಡ ಗುರುತಿನ ಚೀಟಿಗಳನ್ನು ನೀಡಬೇಕು, ಅಂತರ್ಲಿಂಗಿ ಶಿಶುಗಳು ಹಾಗೂ ಮಕ್ಕಳಿಗೆ ವೈದ್ಯಕೀಯ ನೆರವು ನೀಡುವ ಸಂಬಂಧ ಕಾನೂನು ರೂಪಿಸಬೇಕು ಎಂಬುದು ಸೇರಿ ಹಲವು ಬೇಡಿಕೆಗಳನ್ನು ಈಡೇರಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿದಾರ ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>