<p class="title"><strong>ನವದೆಹಲಿ:</strong> ಪಶ್ಚಿಮ ಬಂಗಾಳದ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಅವಿರೋಧವಾಗಿಆಯ್ಕೆಯಾದ 20,000ಕ್ಕೂ ಹೆಚ್ಚು ಸ್ಥಾನಗಳ ಚುನಾವಣೆ ಫಲಿತಾಂಶ ರದ್ದುಪಡಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದ್ದು, ಇದರಿಂದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಳರಾಗಿದ್ದಾರೆ.</p>.<p class="title">ಪ್ರತಿಸ್ಪರ್ಧಿಗಳು ಇಲ್ಲದ ಹಿನ್ನೆಲೆಯಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದರು. ತಮ್ಮ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವುದಕ್ಕೆ ತಡೆಯೊಡ್ಡಲಾಗಿತ್ತು ಎಂದು ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಸಿಪಿಐ(ಎಂ) ಆರೋಪಿಸಿದ್ದವು.</p>.<p class="title">ಅಸಮಾಧಾನಗೊಂಡಿರುವ ಅಭ್ಯರ್ಥಿಗಳು ಚುನಾವಣೆಗೆ ಸಂಬಂಧಿಸಿದ ದೂರನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಬಹುದು ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.</p>.<p class="title">ಚುನಾವಣಾ ಸಂಬಂಧಿತ ಪ್ರಕರಣಗಳನ್ನು 30 ದಿನಗಳ ಕಾಲಮಿತಿಯಲ್ಲಿ ವಿಚಾರಣೆ ನಡೆಸಿ ತೀರ್ಪು ನೀಡಬೇಕು. ಈ ಪ್ರಕರಣದಲ್ಲಿ ಕಾಲಮಿತಿ ಮುಕ್ತಾಯಗೊಂಡಿದ್ದರಿಂದಸುಪ್ರೀಂಕೋರ್ಟ್ ಮುಖ್ಯನ್ಯಾಯಾಧೀಶ ದೀಪಕ್ ಮಿಶ್ರಾ ಹಾಗೂ ಎ.ಎಂ. ಖನ್ವಿಲ್ಕರ್, ಡಿ. ವೈ. ಚಂದ್ರಚೂಡ್ ಅವರಿದ್ದ ನ್ಯಾಯಪೀಠ ಸಂವಿಧಾನದ 142 ನೇ ಪರಿಚ್ಛೇದದ ಅಡಿಯಲ್ಲಿ ವಿಶೇಷ ಅಧಿಕಾರಬಳಸಿ ವಿಚಾರಣೆ ನಡೆಸಿ ತೀರ್ಪು ಪ್ರಕಟಿಸಿತು.</p>.<p class="title">ಕಳೆದ ಮೇ ತಿಂಗಳಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ58,692 ಸ್ಥಾನಗಳ ಪೈಕಿ 20,159 ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆ ಮಾಡಲಾಗಿತ್ತು. ಇದಕ್ಕೆ ಸಿಪಿಐ (ಎಂ) ಹಾಗೂ ಬಿಜೆಪಿಯಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ:</strong> ಪಶ್ಚಿಮ ಬಂಗಾಳದ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಅವಿರೋಧವಾಗಿಆಯ್ಕೆಯಾದ 20,000ಕ್ಕೂ ಹೆಚ್ಚು ಸ್ಥಾನಗಳ ಚುನಾವಣೆ ಫಲಿತಾಂಶ ರದ್ದುಪಡಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದ್ದು, ಇದರಿಂದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಳರಾಗಿದ್ದಾರೆ.</p>.<p class="title">ಪ್ರತಿಸ್ಪರ್ಧಿಗಳು ಇಲ್ಲದ ಹಿನ್ನೆಲೆಯಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದರು. ತಮ್ಮ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವುದಕ್ಕೆ ತಡೆಯೊಡ್ಡಲಾಗಿತ್ತು ಎಂದು ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಸಿಪಿಐ(ಎಂ) ಆರೋಪಿಸಿದ್ದವು.</p>.<p class="title">ಅಸಮಾಧಾನಗೊಂಡಿರುವ ಅಭ್ಯರ್ಥಿಗಳು ಚುನಾವಣೆಗೆ ಸಂಬಂಧಿಸಿದ ದೂರನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಬಹುದು ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.</p>.<p class="title">ಚುನಾವಣಾ ಸಂಬಂಧಿತ ಪ್ರಕರಣಗಳನ್ನು 30 ದಿನಗಳ ಕಾಲಮಿತಿಯಲ್ಲಿ ವಿಚಾರಣೆ ನಡೆಸಿ ತೀರ್ಪು ನೀಡಬೇಕು. ಈ ಪ್ರಕರಣದಲ್ಲಿ ಕಾಲಮಿತಿ ಮುಕ್ತಾಯಗೊಂಡಿದ್ದರಿಂದಸುಪ್ರೀಂಕೋರ್ಟ್ ಮುಖ್ಯನ್ಯಾಯಾಧೀಶ ದೀಪಕ್ ಮಿಶ್ರಾ ಹಾಗೂ ಎ.ಎಂ. ಖನ್ವಿಲ್ಕರ್, ಡಿ. ವೈ. ಚಂದ್ರಚೂಡ್ ಅವರಿದ್ದ ನ್ಯಾಯಪೀಠ ಸಂವಿಧಾನದ 142 ನೇ ಪರಿಚ್ಛೇದದ ಅಡಿಯಲ್ಲಿ ವಿಶೇಷ ಅಧಿಕಾರಬಳಸಿ ವಿಚಾರಣೆ ನಡೆಸಿ ತೀರ್ಪು ಪ್ರಕಟಿಸಿತು.</p>.<p class="title">ಕಳೆದ ಮೇ ತಿಂಗಳಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ58,692 ಸ್ಥಾನಗಳ ಪೈಕಿ 20,159 ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆ ಮಾಡಲಾಗಿತ್ತು. ಇದಕ್ಕೆ ಸಿಪಿಐ (ಎಂ) ಹಾಗೂ ಬಿಜೆಪಿಯಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>