<p><strong>ನವದೆಹಲಿ:</strong> ಬಿಹಾರದ ಬುದ್ಧ ಗಯಾ ಮಂದಿರ ಟ್ರಸ್ಟ್ ಕಾಯ್ದೆ–1949 ಅನ್ನು ಪ್ರಶ್ನಿಸಿ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಲು ನಿರಾಕರಿಸಿದ ಸುಪ್ರೀಂಕೋರ್ಟ್, ಸಂಬಂಧಿಸಿದ ಹೈಕೋರ್ಟ್ನಲ್ಲಿಯೇ ಅರ್ಜಿ ಸಲ್ಲಿಸುವಂತೆ ಸೋಮವಾರ ಸೂಚನೆ ನೀಡಿದೆ.</p>.<p>‘ಕಾಯ್ದೆಯಲ್ಲಿ ಕೆಲವು ಅತಿರೇಕದ ಅಂಶಗಳಿದ್ದು ಅವುಗಳನ್ನು ರದ್ದುಗೊಳಿಸಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ ಎಂದು ವಕೀಲರು ಪೀಠಕ್ಕೆ ತಿಳಿಸಿದರು.</p>.<p>‘ನೀವೇಕೆ ಇದನ್ನು ಹೈಕೋರ್ಟ್ ಮುಂದೆ ಪ್ರಸ್ತಾಪಿಸಬಾರದು. ಭಾರತದ ಸಂವಿಧಾನದ 32ನೇ ವಿಧಿಯ ಅಡಿಯಲ್ಲಿ ಅರ್ಜಿಯನ್ನು ನಾವು ಪರಿಗಣಿಸಲು ಸಾಧ್ಯವಿಲ್ಲ. ಹೈಕೋರ್ಟ್ಗೆ ಹೋಗುವ ಸ್ವಾತಂತ್ರ್ಯವನ್ನು ಅರ್ಜಿದಾರರಿಗೆ ನೀಡಿದ್ದೇವೆ’ ಎಂದು ಪೀಠ ಹೇಳಿತು.</p>.<p>ಕಳೆದ ಏಪ್ರಿಲ್ನಲ್ಲಿ ರಾಷ್ಟ್ರೀಯ ಲೋಕ ಮೋರ್ಚಾ ಮುಖಂಡ ಹಾಗೂ ಕೇಂದ್ರದ ಮಾಜಿ ಸಚಿವ ಉಪೇಂದ್ರ ಕುಶ್ವಾಹ ಅವರು ಬುದ್ಧ ಗಯಾ ದೇಗುಲ ಕಾಯ್ದೆ–1949ರ ಕೆಲವು ಅಂಶಗಳಿಗೆ ತಿದ್ದುಪಡಿ ತರಬೇಕು. ದೇಗುಲದ ಆಡಳಿತವನ್ನು ಬೌದ್ಧ ಸಮುದಾಯಕ್ಕೆ ನೀಡಲು ಇದು ಅಗತ್ಯ ಎಂದಿದ್ದರು.</p>.<p>ಈ ಕಾಯ್ದೆಯಡಿ ಬಿಹಾರದ ಗಯಾ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಾಲ್ವರು ಬೌದ್ಧರು, ನಾಲ್ವರು ಹಿಂದೂಗಳನ್ನು ಒಳಗೊಂಡಂತೆ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಯು ಬುದ್ಧಗಯಾದ ಮಹಾಬೋಧಿ ಮಹಾವಿಹಾರದ ಆಡಳಿತವನ್ನು ನೋಡಿಕೊಳ್ಳುತ್ತಿದೆ. ಇದರಿಂದ ಬೌದ್ಧರಿಗೆ ಅನ್ಯಾಯವಾಗಿದೆ ಎಂಬ ವಾದ ಹಲವು ದಿನಗಳಿಂದ ನಡೆಯುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಬಿಹಾರದ ಬುದ್ಧ ಗಯಾ ಮಂದಿರ ಟ್ರಸ್ಟ್ ಕಾಯ್ದೆ–1949 ಅನ್ನು ಪ್ರಶ್ನಿಸಿ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಲು ನಿರಾಕರಿಸಿದ ಸುಪ್ರೀಂಕೋರ್ಟ್, ಸಂಬಂಧಿಸಿದ ಹೈಕೋರ್ಟ್ನಲ್ಲಿಯೇ ಅರ್ಜಿ ಸಲ್ಲಿಸುವಂತೆ ಸೋಮವಾರ ಸೂಚನೆ ನೀಡಿದೆ.</p>.<p>‘ಕಾಯ್ದೆಯಲ್ಲಿ ಕೆಲವು ಅತಿರೇಕದ ಅಂಶಗಳಿದ್ದು ಅವುಗಳನ್ನು ರದ್ದುಗೊಳಿಸಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ ಎಂದು ವಕೀಲರು ಪೀಠಕ್ಕೆ ತಿಳಿಸಿದರು.</p>.<p>‘ನೀವೇಕೆ ಇದನ್ನು ಹೈಕೋರ್ಟ್ ಮುಂದೆ ಪ್ರಸ್ತಾಪಿಸಬಾರದು. ಭಾರತದ ಸಂವಿಧಾನದ 32ನೇ ವಿಧಿಯ ಅಡಿಯಲ್ಲಿ ಅರ್ಜಿಯನ್ನು ನಾವು ಪರಿಗಣಿಸಲು ಸಾಧ್ಯವಿಲ್ಲ. ಹೈಕೋರ್ಟ್ಗೆ ಹೋಗುವ ಸ್ವಾತಂತ್ರ್ಯವನ್ನು ಅರ್ಜಿದಾರರಿಗೆ ನೀಡಿದ್ದೇವೆ’ ಎಂದು ಪೀಠ ಹೇಳಿತು.</p>.<p>ಕಳೆದ ಏಪ್ರಿಲ್ನಲ್ಲಿ ರಾಷ್ಟ್ರೀಯ ಲೋಕ ಮೋರ್ಚಾ ಮುಖಂಡ ಹಾಗೂ ಕೇಂದ್ರದ ಮಾಜಿ ಸಚಿವ ಉಪೇಂದ್ರ ಕುಶ್ವಾಹ ಅವರು ಬುದ್ಧ ಗಯಾ ದೇಗುಲ ಕಾಯ್ದೆ–1949ರ ಕೆಲವು ಅಂಶಗಳಿಗೆ ತಿದ್ದುಪಡಿ ತರಬೇಕು. ದೇಗುಲದ ಆಡಳಿತವನ್ನು ಬೌದ್ಧ ಸಮುದಾಯಕ್ಕೆ ನೀಡಲು ಇದು ಅಗತ್ಯ ಎಂದಿದ್ದರು.</p>.<p>ಈ ಕಾಯ್ದೆಯಡಿ ಬಿಹಾರದ ಗಯಾ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಾಲ್ವರು ಬೌದ್ಧರು, ನಾಲ್ವರು ಹಿಂದೂಗಳನ್ನು ಒಳಗೊಂಡಂತೆ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಯು ಬುದ್ಧಗಯಾದ ಮಹಾಬೋಧಿ ಮಹಾವಿಹಾರದ ಆಡಳಿತವನ್ನು ನೋಡಿಕೊಳ್ಳುತ್ತಿದೆ. ಇದರಿಂದ ಬೌದ್ಧರಿಗೆ ಅನ್ಯಾಯವಾಗಿದೆ ಎಂಬ ವಾದ ಹಲವು ದಿನಗಳಿಂದ ನಡೆಯುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>