<p class="bodytext"><strong>ನವದೆಹಲಿ: </strong>ಅಥ್ಲೆಟಿಕ್ ಪಟುಗಳಿಗೆ ಅತ್ಯಾಧುನಿಕ ಸೌಲಭ್ಯ ಕಲ್ಪಿಸಬೇಕು ಮತ್ತು ಕ್ರೀಡಾಪಟುಗಳಿಗೆ ಹೆಚ್ಚಿನ ನೆರವು ಒದಗಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಲು ಸುಪ್ರೀಂ ಕೋರ್ಟ್ ಮಂಗಳವಾರ ನಿರಾಕರಿಸಿತು.</p>.<p class="bodytext">‘ತಮಗೆ ಸಮಸ್ಯೆಯ ಅರಿವಿದೆ. ಆದರೆ, ಈ ಸಂಬಂಧ ಸರ್ಕಾರಕ್ಕೆ ಯಾವುದೇ ನಿರ್ದೇಶನ ನೀಡಲಾಗದು’ ಎಂದು ನ್ಯಾಯಮೂರ್ತಿಗಳಾದ ಯು.ಯು.ಲಲಿತ್, ರವೀಂದ್ರ ಭಟ್, ಬೇಲಾ ಎಂ.ತ್ರಿವೇದಿ ಅವರಿದ್ದ ನ್ಯಾಯಪೀಠವು ತಿಳಿಸಿತು.</p>.<p>‘ನೀವು ಕ್ರೀಡಾಕ್ಷೇತ್ರದಲ್ಲಿ ಇದ್ದೀರಾ. ವೈಯಕ್ತಿಕ ಆಸಕ್ತಿ ಇರಬೇಕು. ಮೀರಾಭಾಯ್ ಚಾನು, ಮೇರಿ ಕೋಂ ಅಂತಹವರು ಪ್ರಚಾರವಿಲ್ಲದೆಯೂ ಎತ್ತರಕ್ಕೆ ಬೆಳೆದಿದ್ದಾರೆ. ಪ್ರೋತ್ಸಾಹ ನೀಡಬೇಕು ಎಂಬುದನ್ನು ಕೋರ್ಟ್ ನಿರ್ದೇಶನದಿಂದ ಮಾಡಲಾಗದು. ಅರ್ಜಿಯನ್ನು ವಾಪಸು ಪಡೆಯರಿ, ಇಲ್ಲ ವಜಾ ಮಾಡುತ್ತೇವೆ’ ಎಂದು ಕೋರ್ಟ್ ಅಭಿಪ್ರಾಯಪಟ್ಟಿತು.</p>.<p>‘ನಮಗೆಲ್ಲರಿಗೂ ಅನುಕಂಪವಿದೆ, ಅದೇ ಅಭಿಪ್ರಾಯವನ್ನು ಹೊಂದಿದ್ದೇವೆ. ಆದರೆ ಕ್ಷಮಿಸಿ. ಅರ್ಜಿಯನ್ನು ವಾಪಸು ಪಡೆಯಲು ಅರ್ಜಿದಾರರಿಗೆ ಅವಕಾಶ ಕಲ್ಪಿಸಲಿದ್ದೇವೆ’ ಎಂದು ಪೀಠ ಹೇಳಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="bodytext"><strong>ನವದೆಹಲಿ: </strong>ಅಥ್ಲೆಟಿಕ್ ಪಟುಗಳಿಗೆ ಅತ್ಯಾಧುನಿಕ ಸೌಲಭ್ಯ ಕಲ್ಪಿಸಬೇಕು ಮತ್ತು ಕ್ರೀಡಾಪಟುಗಳಿಗೆ ಹೆಚ್ಚಿನ ನೆರವು ಒದಗಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಲು ಸುಪ್ರೀಂ ಕೋರ್ಟ್ ಮಂಗಳವಾರ ನಿರಾಕರಿಸಿತು.</p>.<p class="bodytext">‘ತಮಗೆ ಸಮಸ್ಯೆಯ ಅರಿವಿದೆ. ಆದರೆ, ಈ ಸಂಬಂಧ ಸರ್ಕಾರಕ್ಕೆ ಯಾವುದೇ ನಿರ್ದೇಶನ ನೀಡಲಾಗದು’ ಎಂದು ನ್ಯಾಯಮೂರ್ತಿಗಳಾದ ಯು.ಯು.ಲಲಿತ್, ರವೀಂದ್ರ ಭಟ್, ಬೇಲಾ ಎಂ.ತ್ರಿವೇದಿ ಅವರಿದ್ದ ನ್ಯಾಯಪೀಠವು ತಿಳಿಸಿತು.</p>.<p>‘ನೀವು ಕ್ರೀಡಾಕ್ಷೇತ್ರದಲ್ಲಿ ಇದ್ದೀರಾ. ವೈಯಕ್ತಿಕ ಆಸಕ್ತಿ ಇರಬೇಕು. ಮೀರಾಭಾಯ್ ಚಾನು, ಮೇರಿ ಕೋಂ ಅಂತಹವರು ಪ್ರಚಾರವಿಲ್ಲದೆಯೂ ಎತ್ತರಕ್ಕೆ ಬೆಳೆದಿದ್ದಾರೆ. ಪ್ರೋತ್ಸಾಹ ನೀಡಬೇಕು ಎಂಬುದನ್ನು ಕೋರ್ಟ್ ನಿರ್ದೇಶನದಿಂದ ಮಾಡಲಾಗದು. ಅರ್ಜಿಯನ್ನು ವಾಪಸು ಪಡೆಯರಿ, ಇಲ್ಲ ವಜಾ ಮಾಡುತ್ತೇವೆ’ ಎಂದು ಕೋರ್ಟ್ ಅಭಿಪ್ರಾಯಪಟ್ಟಿತು.</p>.<p>‘ನಮಗೆಲ್ಲರಿಗೂ ಅನುಕಂಪವಿದೆ, ಅದೇ ಅಭಿಪ್ರಾಯವನ್ನು ಹೊಂದಿದ್ದೇವೆ. ಆದರೆ ಕ್ಷಮಿಸಿ. ಅರ್ಜಿಯನ್ನು ವಾಪಸು ಪಡೆಯಲು ಅರ್ಜಿದಾರರಿಗೆ ಅವಕಾಶ ಕಲ್ಪಿಸಲಿದ್ದೇವೆ’ ಎಂದು ಪೀಠ ಹೇಳಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>