ನ್ಯಾಯಮೂರ್ತಿಗಳಾದ ಡಿ.ವೈ. ಚಂದ್ರಚೂಡ್, ವಿಕ್ರಂ ನಾಥ್ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ನ್ಯಾಯಪೀಠವು, ‘ಅರ್ಜಿದಾರರು ಹೈಕೋರ್ಟ್ ಮೊರೆ ಹೋಗಲು ಸ್ವತಂತ್ರರು. ಪ್ರತಿಭಟಿಸುವ ಸ್ವಾತಂತ್ರ್ಯ ಮತ್ತು ಮೂಲಸೌಕರ್ಯಗಳ ಪ್ರವೇಶ ಕುರಿತಂತೆ ರಾಜ್ಯದ ಆಡಳಿತಗಳಿಗೆ ನಿರ್ದೇಶನ ನೀಡಲು ಹೈಕೋರ್ಟ್ ಸಶಕ್ತವಾಗಿದೆ’ ಎಂದು ತಿಳಿಸಿತು.