<p><strong>ನವದೆಹಲಿ</strong>: ಲೋಕಸಭೆ ಮತ್ತು ರಾಜ್ಯಗಳ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದರಷ್ಟು ಮೀಸಲಾತಿ ಕಲ್ಪಿಸುವ 2023ರ ನಾರಿ ಶಕ್ತಿ ವಂದನಾ ಕಾಯ್ದೆಯಲ್ಲಿ ಬರುವ ಕ್ಷೇತ್ರಗಳ ಮರು ವಿಂಗಡಣೆ ನಿಯಮದ ಕುರಿತಂತೆ ಪರಿಶೀಲನೆ ಕೋರಿ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ.</p><p>ಸಂವಿಧಾನದ ಪರಿಚ್ಛೇದ 32ರ ಅಡಿ ಭಾರತೀಯ ಮಹಿಳೆಯರ ರಾಷ್ಟ್ರೀಯ ಒಕ್ಕೂಟ(ಎನ್ಎಫ್ಐಡಬ್ಲ್ಯು) ಮತ್ತು ಜಯಾ ಠಾಕೂರ್ ಸಲ್ಲಿಸಿದ್ದ ಮನವಿಗಳ ವಿಚಾರಣೆಗೆ ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಪಿ.ಬಿ. ವರಾಳೆ ನೇತೃತ್ವದ ಪೀಠ ನಿರಾಕರಿಸಿದೆ.</p><p>ಜಯಾ ಠಾಕೂರ್ ಅವರು ಕಾಯ್ದೆಯ ಜಾರಿಯನ್ನೇ ಪ್ರಶ್ನಿಸಿದ್ದರೆ, ಎನ್ಎಫ್ಐಡಬ್ಲ್ಯು, ಕಾಯ್ದೆಯ ಮರುಹಂಚಿಕೆಯ ನಿಯಮಗಳನ್ನು ಪ್ರಶ್ನಿಸಿತ್ತು.</p><p>ಠಾಕೂರ್ ಅವರ ಮನವಿಯನ್ನು ನಿರುಪಯುಕ್ತವೆಂದು ತಳ್ಳಿಹಾಕಿದ ನ್ಯಾಯಾಲಯವು, ಪರಿಚ್ಛೇದ 32ರ ಅಡಿಯಲ್ಲಿ ಎನ್ಎಫ್ಐಡಬ್ಲ್ಯು ಮನವಿಯನ್ನು ಪರಿಶೀಲಿಸಲು ಒಲವು ತೋರಲಿಲ್ಲ. ಈ ಸಂಬಂಧ ಅರ್ಜಿದಾರರು ಹೈಕೋರ್ಟ್ ಅಥವಾ ಯಾವುದೇ ಸೂಕ್ತ ವೇದಿಕೆಗೆ ಹೋಗಬಹುದು ಎಂದು ಪೀಠ ಹೇಳಿದೆ.</p><p> ಆರ್ಟಿಕಲ್ 334 ಎ (1) ಅಥವಾ 2023ರ ಕಾಯಿದೆಯ ಷರತ್ತು 5ರ ಸಾಂವಿಧಾನಿಕ ಸಿಂಧುತ್ವವನ್ನು ಎನ್ಎಫ್ಐಡಬ್ಲ್ಯು ಪ್ರಶ್ನಿಸಿತ್ತು.</p><p>2023ರ ನವೆಂಬರ್ 3ರಂದು ಜಯಾ ಠಾಕೂರ್ ಅವರ ಮನವಿಯನ್ನು ಆಲಿಸಿದ್ದ ನ್ಯಾಯಾಲಯವು, ಜನಗಣತಿಯ ನಂತರ ಜಾರಿಗೆ ಬರಲಿರುವ ಮಹಿಳಾ ಮೀಸಲಾತಿ ಕಾನೂನಿನ ಒಂದು ಭಾಗವನ್ನು ನ್ಯಾಯಾಲಯವು ರದ್ದುಗೊಳಿಸುವುದು ಬಹಳ ಕಷ್ಟ ಎಂದು ಹೇಳಿತ್ತು.</p><p>ಲೋಕಸಭೆ ಮತ್ತು ರಾಜ್ಯಗಳ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದರಷ್ಟು ಮೀಸಲಾತಿ ಕಲ್ಪಿಸುವ 2023ರ ನಾರಿ ಶಕ್ತಿ ವಂದನಾ ಮಸೂದೆಗೆ 2023ರ ಸೆಪ್ಟೆಂಬರ್ 21ರಂದು ಸಂಸತ್ತಿನ ಅಂಗೀಕಾರ ಪಡೆದಿತ್ತು. ಮಸೂದೆಗೆ ಲೋಕಸಭೆ ಮತ್ತು ರಾಜ್ಯಸಭೆ ಎರಡರಲ್ಲೂ ಸರ್ವಾನುಮತದಿಂದ ಅಂಗೀಕಾರ ಸಿಕ್ಕಿತ್ತು.</p><p>ಕಾಯ್ದೆಯು ಜಾರಿಗೆ ಬರಬೇಕು ಎಂದಾದರೆ ಕ್ಷೇತ್ರಗಳ ಪುನರ್ ವಿಂಗಡಣೆ ಆಗಬೇಕು ಎಂದು ಕಾಯ್ದೆಯ 5ನೆಯ ಖಂಡದಲ್ಲಿ ಹೇಳಲಾಗಿದೆ. ಈ ಅಂಶವನ್ನು ಎನ್ಎಫ್ಐಡಬ್ಲ್ಯು ಸಲ್ಲಿಸಿದ ಅರ್ಜಿಯಲ್ಲಿ ಪ್ರಶ್ನಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಲೋಕಸಭೆ ಮತ್ತು ರಾಜ್ಯಗಳ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದರಷ್ಟು ಮೀಸಲಾತಿ ಕಲ್ಪಿಸುವ 2023ರ ನಾರಿ ಶಕ್ತಿ ವಂದನಾ ಕಾಯ್ದೆಯಲ್ಲಿ ಬರುವ ಕ್ಷೇತ್ರಗಳ ಮರು ವಿಂಗಡಣೆ ನಿಯಮದ ಕುರಿತಂತೆ ಪರಿಶೀಲನೆ ಕೋರಿ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ.</p><p>ಸಂವಿಧಾನದ ಪರಿಚ್ಛೇದ 32ರ ಅಡಿ ಭಾರತೀಯ ಮಹಿಳೆಯರ ರಾಷ್ಟ್ರೀಯ ಒಕ್ಕೂಟ(ಎನ್ಎಫ್ಐಡಬ್ಲ್ಯು) ಮತ್ತು ಜಯಾ ಠಾಕೂರ್ ಸಲ್ಲಿಸಿದ್ದ ಮನವಿಗಳ ವಿಚಾರಣೆಗೆ ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಪಿ.ಬಿ. ವರಾಳೆ ನೇತೃತ್ವದ ಪೀಠ ನಿರಾಕರಿಸಿದೆ.</p><p>ಜಯಾ ಠಾಕೂರ್ ಅವರು ಕಾಯ್ದೆಯ ಜಾರಿಯನ್ನೇ ಪ್ರಶ್ನಿಸಿದ್ದರೆ, ಎನ್ಎಫ್ಐಡಬ್ಲ್ಯು, ಕಾಯ್ದೆಯ ಮರುಹಂಚಿಕೆಯ ನಿಯಮಗಳನ್ನು ಪ್ರಶ್ನಿಸಿತ್ತು.</p><p>ಠಾಕೂರ್ ಅವರ ಮನವಿಯನ್ನು ನಿರುಪಯುಕ್ತವೆಂದು ತಳ್ಳಿಹಾಕಿದ ನ್ಯಾಯಾಲಯವು, ಪರಿಚ್ಛೇದ 32ರ ಅಡಿಯಲ್ಲಿ ಎನ್ಎಫ್ಐಡಬ್ಲ್ಯು ಮನವಿಯನ್ನು ಪರಿಶೀಲಿಸಲು ಒಲವು ತೋರಲಿಲ್ಲ. ಈ ಸಂಬಂಧ ಅರ್ಜಿದಾರರು ಹೈಕೋರ್ಟ್ ಅಥವಾ ಯಾವುದೇ ಸೂಕ್ತ ವೇದಿಕೆಗೆ ಹೋಗಬಹುದು ಎಂದು ಪೀಠ ಹೇಳಿದೆ.</p><p> ಆರ್ಟಿಕಲ್ 334 ಎ (1) ಅಥವಾ 2023ರ ಕಾಯಿದೆಯ ಷರತ್ತು 5ರ ಸಾಂವಿಧಾನಿಕ ಸಿಂಧುತ್ವವನ್ನು ಎನ್ಎಫ್ಐಡಬ್ಲ್ಯು ಪ್ರಶ್ನಿಸಿತ್ತು.</p><p>2023ರ ನವೆಂಬರ್ 3ರಂದು ಜಯಾ ಠಾಕೂರ್ ಅವರ ಮನವಿಯನ್ನು ಆಲಿಸಿದ್ದ ನ್ಯಾಯಾಲಯವು, ಜನಗಣತಿಯ ನಂತರ ಜಾರಿಗೆ ಬರಲಿರುವ ಮಹಿಳಾ ಮೀಸಲಾತಿ ಕಾನೂನಿನ ಒಂದು ಭಾಗವನ್ನು ನ್ಯಾಯಾಲಯವು ರದ್ದುಗೊಳಿಸುವುದು ಬಹಳ ಕಷ್ಟ ಎಂದು ಹೇಳಿತ್ತು.</p><p>ಲೋಕಸಭೆ ಮತ್ತು ರಾಜ್ಯಗಳ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದರಷ್ಟು ಮೀಸಲಾತಿ ಕಲ್ಪಿಸುವ 2023ರ ನಾರಿ ಶಕ್ತಿ ವಂದನಾ ಮಸೂದೆಗೆ 2023ರ ಸೆಪ್ಟೆಂಬರ್ 21ರಂದು ಸಂಸತ್ತಿನ ಅಂಗೀಕಾರ ಪಡೆದಿತ್ತು. ಮಸೂದೆಗೆ ಲೋಕಸಭೆ ಮತ್ತು ರಾಜ್ಯಸಭೆ ಎರಡರಲ್ಲೂ ಸರ್ವಾನುಮತದಿಂದ ಅಂಗೀಕಾರ ಸಿಕ್ಕಿತ್ತು.</p><p>ಕಾಯ್ದೆಯು ಜಾರಿಗೆ ಬರಬೇಕು ಎಂದಾದರೆ ಕ್ಷೇತ್ರಗಳ ಪುನರ್ ವಿಂಗಡಣೆ ಆಗಬೇಕು ಎಂದು ಕಾಯ್ದೆಯ 5ನೆಯ ಖಂಡದಲ್ಲಿ ಹೇಳಲಾಗಿದೆ. ಈ ಅಂಶವನ್ನು ಎನ್ಎಫ್ಐಡಬ್ಲ್ಯು ಸಲ್ಲಿಸಿದ ಅರ್ಜಿಯಲ್ಲಿ ಪ್ರಶ್ನಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>