<p><strong>ನವದೆಹಲಿ:</strong> ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್ಎಸ್ಎ) ಡಾ.ಕಫೀಲ್ ಖಾನ್ ಅವರ ಮೇಲಿದ್ದ ಪ್ರಕರಣ ರದ್ದುಗೊಳಿಸಿ, ತಕ್ಷಣವೇ ಅವರ ಬಿಡುಗಡೆಗೆ ಆದೇಶಿಸಿದ್ದ ಅಲಹಾಬಾದ್ ಹೈಕೋರ್ಟ್ ಆದೇಶ ಕುರಿತಂತೆ ಮಧ್ಯಪ್ರವೇಶಿಸುವುದನ್ನು ಸುಪ್ರೀಂ ಕೋರ್ಟ್ ಗುರುವಾರ ತಳ್ಳಿಹಾಕಿದೆ.</p>.<p>ಅಲಹಾಬಾದ್ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಉತ್ತರ ಪ್ರದೇಶ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬಡೆ, ನ್ಯಾಯಮೂರ್ತಿಗಳಾದ ಎ.ಎಸ್.ಭೋಪಣ್ಣ, ವಿ.ರಾಮಸುಬ್ರಮಣಿಯನ್ ಅವರಿದ್ದ ಪೀಠವು, ‘ಇದೊಂದು ಉತ್ತಮ ತೀರ್ಪು’ ಎಂದು ತಿಳಿಸಿದೆ.</p>.<p>ರಾಜ್ಯ ಸರ್ಕಾರದ ಪರ ವಾದಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ‘ತೀರ್ಪು ಅಪರಾಧ ಪ್ರಕ್ರಿಯೆಯಲ್ಲಿ ಖಾನ್ ಅವರನ್ನು ನಿರಪರಾಧಿಯನ್ನಾಗಿಸುತ್ತಿದೆ’ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಪೀಠವು, ‘ಕ್ರಿಮಿನಲ್ ಪ್ರಕರಣಗಳನ್ನು ಅವುಗಳ ವಾಸ್ತವಿಕ ಸರಿತಪ್ಪುಗಳ ಆಧಾರದಲ್ಲಿಯೇ ನಿರ್ಧರಿಸಲಾಗುತ್ತದೆ’ ಎಂದು ಹೇಳಿತು.</p>.<p>ಅಲಿಗಡ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (ಎಎಂಯು) ಪೌರತ್ವ (ತಿದ್ದುಪಡಿ) ಕಾಯ್ದೆ ಕುರಿತು ಪ್ರಚೋದನಾತ್ಮಕ ಭಾಷಣವನ್ನು ಮಾಡಿದ್ದಾರೆ ಎಂಬ ಆರೋಪದಡಿ ಕಫೀಲ್ ಅವರನ್ನು ಮುಂಬೈನಲ್ಲಿ ಕಳೆದ ಜನವರಿಯಲ್ಲಿ ಬಂಧಿಸಲಾಗಿತ್ತು.</p>.<p>‘ಖಾನ್ ಅವರ ಭಾಷಣದ ಕೆಲ ಅಂಶಗಳನ್ನಷ್ಟೇ ಓದಿ, ಅವರ ಮಾತಿನ ಉದ್ದೇಶ ನಿರ್ಲಕ್ಷಿಸಿ ಅಲಿಗಡ ಜಿಲ್ಲಾ ಮ್ಯಾಜಿಸ್ಟ್ರೇಟ್ ಖಾನ್ ಬಂಧನಕ್ಕೆ ಆದೇಶಿಸಿದ್ದರು. ಅವರ ಮಾತಿನಲ್ಲಿ ದ್ವೇಷ, ಹಿಂಸೆ ಪ್ರಚೋದಿಸುವ ಅಂಶಗಳು ಇರಲಿಲ್ಲ’ ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪಿನಲ್ಲಿ ಉಲ್ಲೇಖಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್ಎಸ್ಎ) ಡಾ.ಕಫೀಲ್ ಖಾನ್ ಅವರ ಮೇಲಿದ್ದ ಪ್ರಕರಣ ರದ್ದುಗೊಳಿಸಿ, ತಕ್ಷಣವೇ ಅವರ ಬಿಡುಗಡೆಗೆ ಆದೇಶಿಸಿದ್ದ ಅಲಹಾಬಾದ್ ಹೈಕೋರ್ಟ್ ಆದೇಶ ಕುರಿತಂತೆ ಮಧ್ಯಪ್ರವೇಶಿಸುವುದನ್ನು ಸುಪ್ರೀಂ ಕೋರ್ಟ್ ಗುರುವಾರ ತಳ್ಳಿಹಾಕಿದೆ.</p>.<p>ಅಲಹಾಬಾದ್ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಉತ್ತರ ಪ್ರದೇಶ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬಡೆ, ನ್ಯಾಯಮೂರ್ತಿಗಳಾದ ಎ.ಎಸ್.ಭೋಪಣ್ಣ, ವಿ.ರಾಮಸುಬ್ರಮಣಿಯನ್ ಅವರಿದ್ದ ಪೀಠವು, ‘ಇದೊಂದು ಉತ್ತಮ ತೀರ್ಪು’ ಎಂದು ತಿಳಿಸಿದೆ.</p>.<p>ರಾಜ್ಯ ಸರ್ಕಾರದ ಪರ ವಾದಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ‘ತೀರ್ಪು ಅಪರಾಧ ಪ್ರಕ್ರಿಯೆಯಲ್ಲಿ ಖಾನ್ ಅವರನ್ನು ನಿರಪರಾಧಿಯನ್ನಾಗಿಸುತ್ತಿದೆ’ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಪೀಠವು, ‘ಕ್ರಿಮಿನಲ್ ಪ್ರಕರಣಗಳನ್ನು ಅವುಗಳ ವಾಸ್ತವಿಕ ಸರಿತಪ್ಪುಗಳ ಆಧಾರದಲ್ಲಿಯೇ ನಿರ್ಧರಿಸಲಾಗುತ್ತದೆ’ ಎಂದು ಹೇಳಿತು.</p>.<p>ಅಲಿಗಡ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (ಎಎಂಯು) ಪೌರತ್ವ (ತಿದ್ದುಪಡಿ) ಕಾಯ್ದೆ ಕುರಿತು ಪ್ರಚೋದನಾತ್ಮಕ ಭಾಷಣವನ್ನು ಮಾಡಿದ್ದಾರೆ ಎಂಬ ಆರೋಪದಡಿ ಕಫೀಲ್ ಅವರನ್ನು ಮುಂಬೈನಲ್ಲಿ ಕಳೆದ ಜನವರಿಯಲ್ಲಿ ಬಂಧಿಸಲಾಗಿತ್ತು.</p>.<p>‘ಖಾನ್ ಅವರ ಭಾಷಣದ ಕೆಲ ಅಂಶಗಳನ್ನಷ್ಟೇ ಓದಿ, ಅವರ ಮಾತಿನ ಉದ್ದೇಶ ನಿರ್ಲಕ್ಷಿಸಿ ಅಲಿಗಡ ಜಿಲ್ಲಾ ಮ್ಯಾಜಿಸ್ಟ್ರೇಟ್ ಖಾನ್ ಬಂಧನಕ್ಕೆ ಆದೇಶಿಸಿದ್ದರು. ಅವರ ಮಾತಿನಲ್ಲಿ ದ್ವೇಷ, ಹಿಂಸೆ ಪ್ರಚೋದಿಸುವ ಅಂಶಗಳು ಇರಲಿಲ್ಲ’ ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪಿನಲ್ಲಿ ಉಲ್ಲೇಖಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>