‘ಶಿಂದೆ ಬಣವು ಪಕ್ಷದ ಕಚೇರಿ ಹಾಗೂ ಬ್ಯಾಂಕ್ ಖಾತೆಗಳನ್ನು ತನ್ನ ಸುಪರ್ದಿಗೆ ಪಡೆಯುವ ಪ್ರಕ್ರಿಯೆ ಆರಂಭಿಸಿದೆ. ಇದರಿಂದ ಕಾನೂನು ಸುವ್ಯವಸ್ಥೆಯ ಸಮಸ್ಯೆ ತಲೆದೋರಬಹುದು. ಹೀಗಾಗಿ ಆಯೋಗದ ಆದೇಶಕ್ಕೆ ತಡೆ ನೀಡಬೇಕು’ ಎಂದು ಉದ್ಧವ್ ಬಣದ ಪರ ವಕೀಲರಾದ ಕಪಿಲ್ ಸಿಬಲ್, ಅಭಿಷೇಕ್ ಮನು ಸಿಂಘ್ವಿ, ದೇವದತ್ತ ಕಾಮತ್ ಹಾಗೂ ಅಮಿತ್ ಆನಂದ್ ತಿವಾರಿ ಅವರು ಮನವಿ ಮಾಡಿದರು.