<p><strong>ನವದೆಹಲಿ: </strong>ಹರಿಯಾಣದ ಖೋರಿ ಗ್ರಾಮದ ಅರಾವಳಿ ಅರಣ್ಯ ಪ್ರದೇಶದಲ್ಲಿ ಸುಮಾರು 10,000 ವಸತಿ ನಿರ್ಮಾಣಗಳು ಸೇರಿದಂತೆ ಎಲ್ಲಾ ಅತಿಕ್ರಮಣಗಳನ್ನು ತೆರವುಗೊಳಿಸುವಂತೆ ಹರಿಯಾಣ ಮತ್ತು ಫರೀದಾಬಾದ್ ಮುನ್ಸಿಪಲ್ ಕಾರ್ಪೊರೇಷನ್ಗೆ ನಿರ್ದೇಶನ ನೀಡಿರುವ ಆದೇಶಕ್ಕೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ಗುರುವಾರ ನಿರಾಕರಿಸಿದೆ.</p>.<p>‘ಅರಣ್ಯ ಪ್ರದೇಶದಿಂದ ಎಲ್ಲಾ ಅತಿಕ್ರಮಣಗಳನ್ನು ತೆರವುಗೊಳಿಸಬೇಕು’ ಎಂದು ಸುಪ್ರೀಂಕೋರ್ಟ್ ಹೇಳಿದೆ.</p>.<p>ಅರಣ್ಯ ಪ್ರದೇಶದಲ್ಲಿರುವ ವಸತಿ ನಿರ್ಮಾಣಗಳನ್ನು ತೆರವುಗೊಳಿಸಲು ನೀಡಲಾಗಿರುವ ಆದೇಶಕ್ಕೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಅರ್ಜಿ ಸಲ್ಲಿಸಲಾಗಿತ್ತು.</p>.<p>ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎ.ಎಂ ಖಾನ್ವಿಲ್ಕರ್ ಮತ್ತು ದಿನೇಶ್ ಮಹೇಶ್ವರಿ ಅವರ ಪೀಠವು ತಡೆಯಾಜ್ಞೆ ನೀಡಲು ನಿರಾಕರಿಸಿದೆ. ಅಲ್ಲದೆ ತೆರವು ಕಾಮಗಾರಿಯನ್ನು ಮುಂದುವರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದೆ.</p>.<p>ಅರಾವಳಿ ಅರಣ್ಯ ಪ್ರದೇಶದಲ್ಲಿರುವ ಎಲ್ಲಾ ಅತಿಕ್ರಮಣಗಳನ್ನು ತೆರವುಗೊಳಿಸುವಂತೆ ಹರಿಯಾಣ ಮತ್ತು ಫರೀದಾಬಾದ್ ಮುನ್ಸಿಪಲ್ ಕಾರ್ಪೊರೇಷನ್ಗೆ ಸುಪ್ರೀಂಕೋರ್ಟ್ ಜೂನ್ 7ರಂದು ನಿರ್ದೇಶನ ನೀಡಿತ್ತು. ಅಲ್ಲದೆ ಈ ಸಂಬಂಧ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರದ ಅಧಿಕಾರಿಗಳಿಗೆ ಸೂಚಿಸಿತ್ತು.</p>.<p>‘ಭೂಗಳ್ಳರು ಯಾವುದೇ ಕಾರಣಕ್ಕೂ ಕಾನೂನಿನ ಆಶ್ರಯ ಪಡೆಯಲು ಸಾಧ್ಯವಿಲ್ಲ’ ಎಂದು ಸುಪ್ರೀಂಕೋರ್ಟ್ ಹೇಳಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಹರಿಯಾಣದ ಖೋರಿ ಗ್ರಾಮದ ಅರಾವಳಿ ಅರಣ್ಯ ಪ್ರದೇಶದಲ್ಲಿ ಸುಮಾರು 10,000 ವಸತಿ ನಿರ್ಮಾಣಗಳು ಸೇರಿದಂತೆ ಎಲ್ಲಾ ಅತಿಕ್ರಮಣಗಳನ್ನು ತೆರವುಗೊಳಿಸುವಂತೆ ಹರಿಯಾಣ ಮತ್ತು ಫರೀದಾಬಾದ್ ಮುನ್ಸಿಪಲ್ ಕಾರ್ಪೊರೇಷನ್ಗೆ ನಿರ್ದೇಶನ ನೀಡಿರುವ ಆದೇಶಕ್ಕೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ಗುರುವಾರ ನಿರಾಕರಿಸಿದೆ.</p>.<p>‘ಅರಣ್ಯ ಪ್ರದೇಶದಿಂದ ಎಲ್ಲಾ ಅತಿಕ್ರಮಣಗಳನ್ನು ತೆರವುಗೊಳಿಸಬೇಕು’ ಎಂದು ಸುಪ್ರೀಂಕೋರ್ಟ್ ಹೇಳಿದೆ.</p>.<p>ಅರಣ್ಯ ಪ್ರದೇಶದಲ್ಲಿರುವ ವಸತಿ ನಿರ್ಮಾಣಗಳನ್ನು ತೆರವುಗೊಳಿಸಲು ನೀಡಲಾಗಿರುವ ಆದೇಶಕ್ಕೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಅರ್ಜಿ ಸಲ್ಲಿಸಲಾಗಿತ್ತು.</p>.<p>ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎ.ಎಂ ಖಾನ್ವಿಲ್ಕರ್ ಮತ್ತು ದಿನೇಶ್ ಮಹೇಶ್ವರಿ ಅವರ ಪೀಠವು ತಡೆಯಾಜ್ಞೆ ನೀಡಲು ನಿರಾಕರಿಸಿದೆ. ಅಲ್ಲದೆ ತೆರವು ಕಾಮಗಾರಿಯನ್ನು ಮುಂದುವರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದೆ.</p>.<p>ಅರಾವಳಿ ಅರಣ್ಯ ಪ್ರದೇಶದಲ್ಲಿರುವ ಎಲ್ಲಾ ಅತಿಕ್ರಮಣಗಳನ್ನು ತೆರವುಗೊಳಿಸುವಂತೆ ಹರಿಯಾಣ ಮತ್ತು ಫರೀದಾಬಾದ್ ಮುನ್ಸಿಪಲ್ ಕಾರ್ಪೊರೇಷನ್ಗೆ ಸುಪ್ರೀಂಕೋರ್ಟ್ ಜೂನ್ 7ರಂದು ನಿರ್ದೇಶನ ನೀಡಿತ್ತು. ಅಲ್ಲದೆ ಈ ಸಂಬಂಧ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರದ ಅಧಿಕಾರಿಗಳಿಗೆ ಸೂಚಿಸಿತ್ತು.</p>.<p>‘ಭೂಗಳ್ಳರು ಯಾವುದೇ ಕಾರಣಕ್ಕೂ ಕಾನೂನಿನ ಆಶ್ರಯ ಪಡೆಯಲು ಸಾಧ್ಯವಿಲ್ಲ’ ಎಂದು ಸುಪ್ರೀಂಕೋರ್ಟ್ ಹೇಳಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>