<p><strong>ನವದೆಹಲಿ:</strong> ದೇಶದ ನೈಸರ್ಗಿಕ ಸಂಪನ್ಮೂಲಗಳನ್ನು ವರ್ಗಾವಣೆ ಮಾಡುವ ಸಂದರ್ಭದಲ್ಲಿ ಸರ್ಕಾರಗಳು ಹರಾಜು ಪ್ರಕ್ರಿಯೆಯನ್ನೇ ಅನುಸರಿಸಬೇಕು ಎಂದು 2012ರಲ್ಲಿ 2ಜಿ ತರಂಗಾಂತರ ಪ್ರಕರಣದಲ್ಲಿ ನೀಡಿದ್ದ ತೀರ್ಪಿನಲ್ಲಿ ಬದಲಾವಣೆ ತರುವಂತೆ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸ್ವೀಕರಿಸಲು ಕೋರ್ಟ್ನ ರಿಜಿಸ್ಟ್ರಿ ಒಪ್ಪಿಲ್ಲ ಎಂದು ಗೊತ್ತಾಗಿದೆ.</p>.<p>ಕೇಂದ್ರವು ಅಪಾರ್ಥಕ್ಕೆ ಒಳಗಾಗಿ ಅರ್ಜಿಯನ್ನು ಸಲ್ಲಿಸಿದೆ, ಸ್ಪಷ್ಟೀಕರಣ ಕೇಳುವ ನೆಪದಲ್ಲಿ ತೀರ್ಪಿನ ಪುನರ್ಪರಿಶೀಲನೆಗೆ ಕೋರುತ್ತಿದೆ ಎಂದು ರಿಜಿಸ್ಟ್ರಿ ಹೇಳಿದೆ ಎನ್ನಲಾಗಿದೆ.</p>.<p>ಎ.ರಾಜಾ ಅವರು ದೂರಸಂಪರ್ಕ ಸಚಿವರಾಗಿದ್ದ ಅವಧಿಯಲ್ಲಿ, 2008ರ ಜನವರಿಯಲ್ಲಿ ಬೇರೆ ಬೇರೆ ಕಂಪನಿಗಳಿಗೆ ಹಂಚಿಕೆ ಮಾಡಿದ್ದ 2ಜಿ ತರಂಗಾಂತರ ಪರವಾನಗಿಗಳನ್ನು 2012ರ ಫೆಬ್ರುವರಿ 2ರಂದು ನೀಡಿದ ತೀರ್ಪಿನಲ್ಲಿ ರದ್ದುಪಡಿಸಿತ್ತು.</p>.<p>2ಜಿ ತರಂಗಾಂತರಗಳನ್ನು ವಾಣಿಜ್ಯೇತರ ಉದ್ದೇಶಗಳಿಗೆ ನೀಡುವಾಗ ಹರಾಜು ಪ್ರಕ್ರಿಯೆಯಿಂದ ವಿನಾಯಿತಿ ನೀಡಬೇಕು ಎಂದು ಕೇಂದ್ರವು ಅರ್ಜಿಯಲ್ಲಿ ಕೋರಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೇಶದ ನೈಸರ್ಗಿಕ ಸಂಪನ್ಮೂಲಗಳನ್ನು ವರ್ಗಾವಣೆ ಮಾಡುವ ಸಂದರ್ಭದಲ್ಲಿ ಸರ್ಕಾರಗಳು ಹರಾಜು ಪ್ರಕ್ರಿಯೆಯನ್ನೇ ಅನುಸರಿಸಬೇಕು ಎಂದು 2012ರಲ್ಲಿ 2ಜಿ ತರಂಗಾಂತರ ಪ್ರಕರಣದಲ್ಲಿ ನೀಡಿದ್ದ ತೀರ್ಪಿನಲ್ಲಿ ಬದಲಾವಣೆ ತರುವಂತೆ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸ್ವೀಕರಿಸಲು ಕೋರ್ಟ್ನ ರಿಜಿಸ್ಟ್ರಿ ಒಪ್ಪಿಲ್ಲ ಎಂದು ಗೊತ್ತಾಗಿದೆ.</p>.<p>ಕೇಂದ್ರವು ಅಪಾರ್ಥಕ್ಕೆ ಒಳಗಾಗಿ ಅರ್ಜಿಯನ್ನು ಸಲ್ಲಿಸಿದೆ, ಸ್ಪಷ್ಟೀಕರಣ ಕೇಳುವ ನೆಪದಲ್ಲಿ ತೀರ್ಪಿನ ಪುನರ್ಪರಿಶೀಲನೆಗೆ ಕೋರುತ್ತಿದೆ ಎಂದು ರಿಜಿಸ್ಟ್ರಿ ಹೇಳಿದೆ ಎನ್ನಲಾಗಿದೆ.</p>.<p>ಎ.ರಾಜಾ ಅವರು ದೂರಸಂಪರ್ಕ ಸಚಿವರಾಗಿದ್ದ ಅವಧಿಯಲ್ಲಿ, 2008ರ ಜನವರಿಯಲ್ಲಿ ಬೇರೆ ಬೇರೆ ಕಂಪನಿಗಳಿಗೆ ಹಂಚಿಕೆ ಮಾಡಿದ್ದ 2ಜಿ ತರಂಗಾಂತರ ಪರವಾನಗಿಗಳನ್ನು 2012ರ ಫೆಬ್ರುವರಿ 2ರಂದು ನೀಡಿದ ತೀರ್ಪಿನಲ್ಲಿ ರದ್ದುಪಡಿಸಿತ್ತು.</p>.<p>2ಜಿ ತರಂಗಾಂತರಗಳನ್ನು ವಾಣಿಜ್ಯೇತರ ಉದ್ದೇಶಗಳಿಗೆ ನೀಡುವಾಗ ಹರಾಜು ಪ್ರಕ್ರಿಯೆಯಿಂದ ವಿನಾಯಿತಿ ನೀಡಬೇಕು ಎಂದು ಕೇಂದ್ರವು ಅರ್ಜಿಯಲ್ಲಿ ಕೋರಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>