ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸಲ್ಲಿಸಲಾದ ವಿಶೇಷ ಮೇಲ್ಮನವಿಯ ವಿಚಾರಣೆ ನಡೆಸಿ 2017ರ ಫೆಬ್ರುವರಿ 14ರಂದು ತೀರ್ಪು ನೀಡಿದ್ದ ಸುಪ್ರೀಂ ಕೋರ್ಟ್, ಶಶಿಕಲಾ ನಟರಾಜನ್, ಇಳವರಸಿ ಮತ್ತು ಸುಧಾಕರನ್ ಅವರಿಗೆ ಶಿಕ್ಷೆ ವಿಧಿಸಿತ್ತು. 2016ರ ಡಿಸೆಂಬರ್ 5ರಂದು ಜಯಲಲಿತಾ ಅವರು ಮೃತಪಟ್ಟಿದ್ದರಿಂದ ಅವರನ್ನು ದೋಷಮುಕ್ತಗೊಳಿಸಿತ್ತು. ಜಯಲಲಿತಾ ಅವರಿಗೆ ವಿಧಿಸಲಾಗಿರುವ ₹100 ಕೋಟಿ ದಂಡ ವಸೂಲಿ ಮಾಡಬೇಕಿದ್ದು, ‘ದೋಷಿ’ ಎಂದು ಪರಿಗಣಿಸುವಂತೆ ಕೋರಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಮರು ಪರಿಶೀಲನಾ ಅರ್ಜಿಯೂ ತಿರಸ್ಕೃತವಾಗಿತ್ತು.