<p><strong>ನವದೆಹಲಿ:</strong> ಕರ್ನಾಟಕದಲ್ಲಿ 2016ರಲ್ಲಿ ನಡೆದ ಪಿಯು ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಮುಖ್ಯ ಆರೋಪಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಶನಿವಾರ ತಿರಸ್ಕರಿಸಿದೆ.</p>.<p>ಜಾಮೀನು ತಿರಸ್ಕರಿಸಿ 2020 ಸೆ.11ರಂದು ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಆರೋಪಿ ಕುಮಾರಸ್ವಾಮಿ, ಸುಪ್ರೀಂ ಕೋರ್ಟ್ಗೆ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬಡೆ ಹಾಗೂ ನ್ಯಾಯಮೂರ್ತಿಗಳಾದ ಎ.ಎಸ್.ಬೋಪಣ್ಣ ಮತ್ತು ವಿ.ಸುಬ್ರಹ್ಮಣಿಯನ್ ಅವರಿದ್ದ ಪೀಠವು ವಿಚಾರಣೆ ನಡೆಸಿತು.</p>.<p>‘ಪ್ರಕರಣದ 18 ಆರೋಪಿಗಳ ಪೈಕಿ 17 ಆರೋಪಿಗಳು ಜಾಮೀನಿನ ಮೇಲೆ ಬಿಡುಗಡೆ ಆಗಿದ್ದಾರೆ. ಪ್ರಕರಣದ ತನಿಖೆಯಲ್ಲೂ ಯಾವುದೇ ಪ್ರಗತಿ ಆಗಿಲ್ಲ’ ಎಂದು ತಿಳಿಸಿದ ಆರೋಪಿ ಪರ ವಕೀಲ ಶಶಿಕಿರಣ್ ಶೆಟ್ಟಿ, ಹೈಕೋರ್ಟ್ ಆದೇಶದ ಮಾನ್ಯತೆಯನ್ನು ಪ್ರಶ್ನಿಸಿದರು.</p>.<p>‘ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಕೆಲ ಆರೋಪಿಗಳು ವಿಚಾರಣಾ ನ್ಯಾಯಾಲಯವು ನಡೆಸುತ್ತಿರುವ ವಿಚಾರಣೆ ಸಂದರ್ಭದಲ್ಲಿ ಗೈರಾಗುತ್ತಿದ್ದಾರೆ ಹಾಗೂ ತಪ್ಪಿಸಿಕೊಳ್ಳುತ್ತಿದ್ದಾರೆ’ ಎನ್ನುವ ಕಾರಣವನ್ನು ನೀಡಿ ಕರ್ನಾಟಕ ಹೈಕೋರ್ಟ್ ಜಾಮೀನು ಅರ್ಜಿ ತಿರಸ್ಕರಿಸಿತ್ತು.</p>.<p>‘ಆರೋಪಿ ಪ್ರಕರಣದ ಸೂತ್ರದಾರನಾಗಿದ್ದು, ಹಾನಗಲ್ನಲ್ಲಿರುವ ಸ್ಟ್ರಾಂಗ್ರೂಂ ಪ್ರವೇಶಿಸಿ ಪ್ರಶ್ನೆಪತ್ರಿಕೆಯ ಫೋಟೊ ತೆಗೆದಿದ್ದಾರೆ. ಹೀಗಾಗಿ ಇತರೆ ಆರೋಪಿಗಳಿಗೆ ಅರ್ಜಿದಾರರನ್ನು ಹೋಲಿಸಲು ಸಾಧ್ಯವಿಲ್ಲ’ ಎಂದು ಹೈಕೋರ್ಟ್ ಉಲ್ಲೇಖಿಸಿತ್ತು.</p>.<p>ರಸಾಯನಶಾಸ್ತ್ರ ಪ್ರಶ್ನೆಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಭಾರತೀಯ ದಂಡ ಸಂಹಿತೆ, ಕರ್ನಾಟಕ ಶಿಕ್ಷಣ ಕಾಯ್ದೆಯಡಿ 2016 ಮಾ.21ರಂದು ಪ್ರಕರಣ ದಾಖಲಿಸಲಾಗಿತ್ತು. ಹಣಕ್ಕಾಗಿ ಸೋರಿಕೆಯಾದ ಪ್ರಶ್ನೆಪತ್ರಿಕೆಯನ್ನು ಹಂಚುತ್ತಿದ್ದ ಆರೋಪದಡಿ 2016 ಏ.17ರಂದು ಕುಮಾರಸ್ವಾಮಿ ಅವರನ್ನು ಬಂಧಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕರ್ನಾಟಕದಲ್ಲಿ 2016ರಲ್ಲಿ ನಡೆದ ಪಿಯು ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಮುಖ್ಯ ಆರೋಪಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಶನಿವಾರ ತಿರಸ್ಕರಿಸಿದೆ.</p>.<p>ಜಾಮೀನು ತಿರಸ್ಕರಿಸಿ 2020 ಸೆ.11ರಂದು ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಆರೋಪಿ ಕುಮಾರಸ್ವಾಮಿ, ಸುಪ್ರೀಂ ಕೋರ್ಟ್ಗೆ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬಡೆ ಹಾಗೂ ನ್ಯಾಯಮೂರ್ತಿಗಳಾದ ಎ.ಎಸ್.ಬೋಪಣ್ಣ ಮತ್ತು ವಿ.ಸುಬ್ರಹ್ಮಣಿಯನ್ ಅವರಿದ್ದ ಪೀಠವು ವಿಚಾರಣೆ ನಡೆಸಿತು.</p>.<p>‘ಪ್ರಕರಣದ 18 ಆರೋಪಿಗಳ ಪೈಕಿ 17 ಆರೋಪಿಗಳು ಜಾಮೀನಿನ ಮೇಲೆ ಬಿಡುಗಡೆ ಆಗಿದ್ದಾರೆ. ಪ್ರಕರಣದ ತನಿಖೆಯಲ್ಲೂ ಯಾವುದೇ ಪ್ರಗತಿ ಆಗಿಲ್ಲ’ ಎಂದು ತಿಳಿಸಿದ ಆರೋಪಿ ಪರ ವಕೀಲ ಶಶಿಕಿರಣ್ ಶೆಟ್ಟಿ, ಹೈಕೋರ್ಟ್ ಆದೇಶದ ಮಾನ್ಯತೆಯನ್ನು ಪ್ರಶ್ನಿಸಿದರು.</p>.<p>‘ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಕೆಲ ಆರೋಪಿಗಳು ವಿಚಾರಣಾ ನ್ಯಾಯಾಲಯವು ನಡೆಸುತ್ತಿರುವ ವಿಚಾರಣೆ ಸಂದರ್ಭದಲ್ಲಿ ಗೈರಾಗುತ್ತಿದ್ದಾರೆ ಹಾಗೂ ತಪ್ಪಿಸಿಕೊಳ್ಳುತ್ತಿದ್ದಾರೆ’ ಎನ್ನುವ ಕಾರಣವನ್ನು ನೀಡಿ ಕರ್ನಾಟಕ ಹೈಕೋರ್ಟ್ ಜಾಮೀನು ಅರ್ಜಿ ತಿರಸ್ಕರಿಸಿತ್ತು.</p>.<p>‘ಆರೋಪಿ ಪ್ರಕರಣದ ಸೂತ್ರದಾರನಾಗಿದ್ದು, ಹಾನಗಲ್ನಲ್ಲಿರುವ ಸ್ಟ್ರಾಂಗ್ರೂಂ ಪ್ರವೇಶಿಸಿ ಪ್ರಶ್ನೆಪತ್ರಿಕೆಯ ಫೋಟೊ ತೆಗೆದಿದ್ದಾರೆ. ಹೀಗಾಗಿ ಇತರೆ ಆರೋಪಿಗಳಿಗೆ ಅರ್ಜಿದಾರರನ್ನು ಹೋಲಿಸಲು ಸಾಧ್ಯವಿಲ್ಲ’ ಎಂದು ಹೈಕೋರ್ಟ್ ಉಲ್ಲೇಖಿಸಿತ್ತು.</p>.<p>ರಸಾಯನಶಾಸ್ತ್ರ ಪ್ರಶ್ನೆಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಭಾರತೀಯ ದಂಡ ಸಂಹಿತೆ, ಕರ್ನಾಟಕ ಶಿಕ್ಷಣ ಕಾಯ್ದೆಯಡಿ 2016 ಮಾ.21ರಂದು ಪ್ರಕರಣ ದಾಖಲಿಸಲಾಗಿತ್ತು. ಹಣಕ್ಕಾಗಿ ಸೋರಿಕೆಯಾದ ಪ್ರಶ್ನೆಪತ್ರಿಕೆಯನ್ನು ಹಂಚುತ್ತಿದ್ದ ಆರೋಪದಡಿ 2016 ಏ.17ರಂದು ಕುಮಾರಸ್ವಾಮಿ ಅವರನ್ನು ಬಂಧಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>