ಮೇಲ್ಮನವಿ ಸ್ವೀಕಾರ: ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೊರ್ಟ್ನ ಮಾರ್ಚ್ 5ರ ಆದೇಶ ಪ್ರಶ್ನಿಸಿ ಮಹಾರಾಷ್ಟ್ರ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಸ್ವೀಕಾರ ಮಾಡಿದೆ. ಆದರೆ, ಮೇಲ್ಮನವಿಯ ವಿಚಾರಣೆಯನ್ನು ಮುಂಚಿತವಾಗಿ ಕೈಗೆತ್ತಿಕೊಳ್ಳುವಂತೆ ಮಹಾರಾಷ್ಟ್ರ ಸರ್ಕಾರದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ.ರಾಜು ಅವರ ಮೌಖಿಕ ಮನವಿಯನ್ನು ನ್ಯಾಯಪೀಠವು ತಳ್ಳಿಹಾಕಿತು.