<p class="title"><strong>ನವದೆಹಲಿ</strong>: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ(ಪಿಎಫ್ಐ) ವಿದ್ಯಾರ್ಥಿ ಘಟಕದ ನಾಯಕ ಕೆ.ಎ.ರೌಫ್ ಷರೀಫ್ ಅವರು ತಮ್ಮ ವಿರುದ್ಧ ದಾಖಲಾಗಿರುವ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್ಎ) ಪ್ರಕರಣವನ್ನು ಲಖನೌನಿಂದ ಕೇರಳದ ಎರ್ನಾಕುಲಂಗೆ ವರ್ಗಾಯಿಸುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ. </p>.<p class="title">‘ವರ್ಗಾವಣೆ ಆದೇಶ ನೀಡಲು ಯಾವುದೇ ಕಾನೂನು ಮಾನ್ಯತೆ ಮತ್ತು ಸಮರ್ಥನೀಯವಾದ ಆಧಾರಗಳು ಇಲ್ಲದಿರುವ ಕಾರಣ ಅರ್ಜಿಯನ್ನು ವಜಾಗೊಳಿಸಲಾಗಿದೆ’ ಎಂದು ವಿ.ರಾಮಸುಬ್ರಮಣಿಯನ್ ಮತ್ತು ಪಂಕಜ್ ಮಿಥಲ್ ಅವರನ್ನು ಒಳಗೊಂಡ ನ್ಯಾಯಪೀಠ ತಿಳಿಸಿದೆ.</p>.<p class="title">‘ನ್ಯಾಯಾಲಯದ ವ್ಯಾಪ್ತಿಗೆ ಒಳಪಡುವುದಿಲ್ಲ ಎಂಬ ನೆಲೆಯಲ್ಲಿ ಆರೋಪಿಯ ಪ್ರಕರಣವನ್ನು ಬೇರೆಡೆಗೆ ವರ್ಗಾಯಿಸಬೇಕು ಎಂಬುದಕ್ಕೆ ಯಾವುದೇ ಆಧಾರವಿಲ್ಲ. ಒಂದು ವೇಳೆ ಇಂಥ ಸಾಧ್ಯತೆ ಇದ್ದರೂ ಅದು ಆರೋಪಿಯ ನೆರವಿಗೆ ಬರುವ ಕಾರಣ ಆರೋಪಿಯ ಬೇಡಿಕೆಗೆ ಸಮ್ಮತಿ ಸೂಚಿಸಬೇಕಾಗಿಲ್ಲ’ ಎಂದು ನ್ಯಾಯಪೀಠ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ</strong>: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ(ಪಿಎಫ್ಐ) ವಿದ್ಯಾರ್ಥಿ ಘಟಕದ ನಾಯಕ ಕೆ.ಎ.ರೌಫ್ ಷರೀಫ್ ಅವರು ತಮ್ಮ ವಿರುದ್ಧ ದಾಖಲಾಗಿರುವ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್ಎ) ಪ್ರಕರಣವನ್ನು ಲಖನೌನಿಂದ ಕೇರಳದ ಎರ್ನಾಕುಲಂಗೆ ವರ್ಗಾಯಿಸುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ. </p>.<p class="title">‘ವರ್ಗಾವಣೆ ಆದೇಶ ನೀಡಲು ಯಾವುದೇ ಕಾನೂನು ಮಾನ್ಯತೆ ಮತ್ತು ಸಮರ್ಥನೀಯವಾದ ಆಧಾರಗಳು ಇಲ್ಲದಿರುವ ಕಾರಣ ಅರ್ಜಿಯನ್ನು ವಜಾಗೊಳಿಸಲಾಗಿದೆ’ ಎಂದು ವಿ.ರಾಮಸುಬ್ರಮಣಿಯನ್ ಮತ್ತು ಪಂಕಜ್ ಮಿಥಲ್ ಅವರನ್ನು ಒಳಗೊಂಡ ನ್ಯಾಯಪೀಠ ತಿಳಿಸಿದೆ.</p>.<p class="title">‘ನ್ಯಾಯಾಲಯದ ವ್ಯಾಪ್ತಿಗೆ ಒಳಪಡುವುದಿಲ್ಲ ಎಂಬ ನೆಲೆಯಲ್ಲಿ ಆರೋಪಿಯ ಪ್ರಕರಣವನ್ನು ಬೇರೆಡೆಗೆ ವರ್ಗಾಯಿಸಬೇಕು ಎಂಬುದಕ್ಕೆ ಯಾವುದೇ ಆಧಾರವಿಲ್ಲ. ಒಂದು ವೇಳೆ ಇಂಥ ಸಾಧ್ಯತೆ ಇದ್ದರೂ ಅದು ಆರೋಪಿಯ ನೆರವಿಗೆ ಬರುವ ಕಾರಣ ಆರೋಪಿಯ ಬೇಡಿಕೆಗೆ ಸಮ್ಮತಿ ಸೂಚಿಸಬೇಕಾಗಿಲ್ಲ’ ಎಂದು ನ್ಯಾಯಪೀಠ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>