ಐಐಟಿಗಳ ಪ್ರಾಧ್ಯಾಪಕರು, ದೆಹಲಿಯ ತಾಂತ್ರಿಕ ವಿಶ್ವವಿದ್ಯಾಲಯ ಹಾಗೂ ರಾಷ್ಟ್ರೀಯ ಭೌತವಿಜ್ಞಾನ ಪ್ರಯೋಗಾಲಯದ (ಎನ್ಪಿಎಲ್) ತಜ್ಞರನ್ನು ಒಳಗೊಂಡ ಸಮಿತಿಯು ಹಿಂದಿಯಲ್ಲಿದ್ದ ಭೌತವಿಜ್ಞಾನದ ಪ್ರಶ್ನೆಪತ್ರಿಕೆಯಲ್ಲಿ ಯಾವುದೇ ದೋಷಗಳು ಇಲ್ಲ ಎಂಬುದಾಗಿ ವರದಿ ನೀಡಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ಗೆ ಮಾಹಿತಿ ಒದಗಿಸಿತ್ತು. ಕೇಂದ್ರ ಸರ್ಕಾರ ಸಲ್ಲಿಸಿರುವ ಈ ಮಾಹಿತಿಯನ್ನು ಪರಿಗಣಿಸಿದ ನ್ಯಾಯಪೀಠ, ಮರುಮೌಲ್ಯಮಾಪನ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ವಜಾಗೊಳಿಸಿತು.