ರಾಜಸ್ಥಾನದಲ್ಲಿ ಹತ್ತನೇತರಗತಿಯ ಎರಡು ವಿಷಯಗಳಿಗೆ ಜೂನ್ 29 ಮತ್ತು 30ರಂದು ಪರೀಕ್ಷೆ ನಡೆಯಲಿದೆ. ಇದಕ್ಕೆ ತಡೆ ನೀಡಬೇಕು ಎಂದು ಕೋರಿ ಎಸ್ಸೆಸ್ಸೆಲ್ಸಿಯ ವಿದ್ಯಾರ್ಥಿಯ ತಾಯಿ ದೇವಿ ಎಂಬುವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ವಿಡಿಯೊ ಸಂವಾದದ ಮೂಲಕ ನಡೆಸಿದ ನ್ಯಾಯಮೂರ್ತಿ ಎ.ಎಂ. ಖಾನ್ವಿಲ್ಕರ್, ದಿನೇಶ್ ಮಹೇಶ್ವರಿ ಮತ್ತು ಸಂಜೀವ್ ಖನ್ನಾ ಅವರಿದ್ದ ಪೀಠ, ಅರ್ಜಿಯನ್ನು ವಜಾಗೊಳಿಸಿತು ಎಂದು ರಾಜ್ಯ ಸರ್ಕಾರದ ಪರ ವಕೀಲ ಮನೀಷ್ ಸಿಂಘ್ವಿ ತಿಳಿಸಿದ್ದಾರೆ.