<p><strong>ನವದೆಹಲಿ (ಪಿಟಿಐ):</strong> ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಲೋಕಸಭಾ ಸದಸ್ಯತ್ವವನ್ನು ಮರುಸ್ಥಾಪಿಸಿದ 2023ರ ಆಗಸ್ಟ್ 7ರ ಅಧಿಸೂಚನೆಯನ್ನು ರದ್ದು ಮಾಡುವಂತೆ ಕೋರಿದ್ದ ಅರ್ಜಿಯನ್ನು ವಜಾಗೊಳಿಸಿರುವ ಸುಪ್ರೀಂ ಕೋರ್ಟ್, ಅರ್ಜಿದಾರ ಅಶೋಕ್ ಪಾಂಡೆ ಅವರಿಗೆ ₹1 ಲಕ್ಷ ದಂಡ ವಿಧಿಸಿದೆ.</p>.<p>‘ಮೋದಿ’ ಉಪನಾಮ ಬಳಕೆಗೆ ಸಂಬಂಧಿಸಿದ ಮಾನನಷ್ಟ ಪ್ರಕರಣದಲ್ಲಿ ರಾಹುಲ್ ಅವರು ತಪ್ಪಿತಸ್ಥರು ಎಂದು ಗುಜರಾತ್ ಕೋರ್ಟ್ ಹೇಳಿತ್ತು. ರಾಹುಲ್ ಅವರಿಗೆ ಎರಡು ವರ್ಷಗಳ ಜೈಲುಶಿಕ್ಷೆ ವಿಧಿಸಿತ್ತು. ಇದರ ಪರಿಣಾಮವಾಗಿ ರಾಹುಲ್ ಅವರ ಲೋಕಸಭಾ ಸದಸ್ಯತ್ವವು ರದ್ದಾಗಿತ್ತು.</p>.<p>ರಾಹುಲ್ ಅವರಿಗೆ ವಿಧಿಸಿದ್ದ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆ ನೀಡಿತು. ಇದರ ನಂತರ ರಾಹುಲ್ ಅವರ ಸದಸ್ಯತ್ವವನ್ನು ಲೋಕಸಭೆಯ ಅಧಿಸೂಚನೆ ಮೂಲಕ ಮರುಸ್ಥಾಪಿಸಲಾಯಿತು. ರಾಹುಲ್ ಅವರು ವಯನಾಡು ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.</p>.<p>ಪಾಂಡೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಸಂದೀಪ್ ಮೆಹ್ತಾ ಅವರಿದ್ದ ವಿಭಾಗೀಯ ಪೀಠ ನಡೆಸಿತು. ಅರ್ಜಿಯನ್ನು ಎರಡು ಬಾರಿ ವಿಚಾರಣೆಗೆ ಎತ್ತಿಕೊಂಡಿದ್ದಾಗಲೂ ಪಾಂಡೆ ಅವರು ಪೀಠದ ಎದುರು ಹಾಜರಾಗಿರಲಿಲ್ಲ.</p>.<p>ಅಲ್ಲದೆ, ಪಾಂಡೆ ಅವರು ಈ ಹಿಂದೆ ಸಲ್ಲಿಸಿದ್ದ ಎರಡು ಅರ್ಜಿಗಳನ್ನು ತಿರಸ್ಕರಿಸಿದ್ದ ಕೋರ್ಟ್ ಒಂದು ಅರ್ಜಿಗೆ ₹5 ಲಕ್ಷ ಹಾಗೂ ಇನ್ನೊಂದು ಅರ್ಜಿಗೆ ₹1 ಲಕ್ಷ ದಂಡ ವಿಧಿಸಿತ್ತು ಎಂಬುದನ್ನು ಪೀಠವು ಹೇಳಿತು. ‘ಇಂತಹ ಹುರುಳಿಲ್ಲದ ಅರ್ಜಿಗಳನ್ನು ಸಲ್ಲಿಸುವುದರಿಂದ ನ್ಯಾಯಾಲಯದ ಅಮೂಲ್ಯ ಸಮಯವು ವ್ಯರ್ಥವಾಗುತ್ತದೆ’ ಎಂದು ಹೇಳಿದ ಪೀಠವು ರಾಹುಲ್ ಸದಸ್ಯತ್ವಕ್ಕೆ ಸಂಬಂಧಿಸಿದ ಅರ್ಜಿಯನ್ನು ವಜಾಗೊಳಿಸಿತು.</p>.<p>ಅರ್ಜಿದಾರರು ಲೋಕಸಭಾ ಸ್ಪೀಕರ್, ಕೇಂದ್ರ ಸರ್ಕಾರ, ಚುನಾವಣಾ ಆಯೋಗ ಮತ್ತು ರಾಹುಲ್ ಅವರನ್ನು ಪ್ರತಿವಾದಿಯಾಗಿ ಹೆಸರಿಸಿದ್ದರು. </p>.<p>ಬಾಂಬೆ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಪ್ರಮಾಣ ವಚನ ಸ್ವೀಕರಿಸಿದ ರೀತಿಯು ದೋಷಪೂರಿತವಾಗಿತ್ತು ಎಂದು ದೂರಿ ಪಾಂಡೆ ಅವರು ಪಿಐಎಲ್ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ಪಾಂಡೆ ಅವರಿಗೆ ₹5 ಲಕ್ಷ ದಂಡ ವಿಧಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಲೋಕಸಭಾ ಸದಸ್ಯತ್ವವನ್ನು ಮರುಸ್ಥಾಪಿಸಿದ 2023ರ ಆಗಸ್ಟ್ 7ರ ಅಧಿಸೂಚನೆಯನ್ನು ರದ್ದು ಮಾಡುವಂತೆ ಕೋರಿದ್ದ ಅರ್ಜಿಯನ್ನು ವಜಾಗೊಳಿಸಿರುವ ಸುಪ್ರೀಂ ಕೋರ್ಟ್, ಅರ್ಜಿದಾರ ಅಶೋಕ್ ಪಾಂಡೆ ಅವರಿಗೆ ₹1 ಲಕ್ಷ ದಂಡ ವಿಧಿಸಿದೆ.</p>.<p>‘ಮೋದಿ’ ಉಪನಾಮ ಬಳಕೆಗೆ ಸಂಬಂಧಿಸಿದ ಮಾನನಷ್ಟ ಪ್ರಕರಣದಲ್ಲಿ ರಾಹುಲ್ ಅವರು ತಪ್ಪಿತಸ್ಥರು ಎಂದು ಗುಜರಾತ್ ಕೋರ್ಟ್ ಹೇಳಿತ್ತು. ರಾಹುಲ್ ಅವರಿಗೆ ಎರಡು ವರ್ಷಗಳ ಜೈಲುಶಿಕ್ಷೆ ವಿಧಿಸಿತ್ತು. ಇದರ ಪರಿಣಾಮವಾಗಿ ರಾಹುಲ್ ಅವರ ಲೋಕಸಭಾ ಸದಸ್ಯತ್ವವು ರದ್ದಾಗಿತ್ತು.</p>.<p>ರಾಹುಲ್ ಅವರಿಗೆ ವಿಧಿಸಿದ್ದ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆ ನೀಡಿತು. ಇದರ ನಂತರ ರಾಹುಲ್ ಅವರ ಸದಸ್ಯತ್ವವನ್ನು ಲೋಕಸಭೆಯ ಅಧಿಸೂಚನೆ ಮೂಲಕ ಮರುಸ್ಥಾಪಿಸಲಾಯಿತು. ರಾಹುಲ್ ಅವರು ವಯನಾಡು ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.</p>.<p>ಪಾಂಡೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಸಂದೀಪ್ ಮೆಹ್ತಾ ಅವರಿದ್ದ ವಿಭಾಗೀಯ ಪೀಠ ನಡೆಸಿತು. ಅರ್ಜಿಯನ್ನು ಎರಡು ಬಾರಿ ವಿಚಾರಣೆಗೆ ಎತ್ತಿಕೊಂಡಿದ್ದಾಗಲೂ ಪಾಂಡೆ ಅವರು ಪೀಠದ ಎದುರು ಹಾಜರಾಗಿರಲಿಲ್ಲ.</p>.<p>ಅಲ್ಲದೆ, ಪಾಂಡೆ ಅವರು ಈ ಹಿಂದೆ ಸಲ್ಲಿಸಿದ್ದ ಎರಡು ಅರ್ಜಿಗಳನ್ನು ತಿರಸ್ಕರಿಸಿದ್ದ ಕೋರ್ಟ್ ಒಂದು ಅರ್ಜಿಗೆ ₹5 ಲಕ್ಷ ಹಾಗೂ ಇನ್ನೊಂದು ಅರ್ಜಿಗೆ ₹1 ಲಕ್ಷ ದಂಡ ವಿಧಿಸಿತ್ತು ಎಂಬುದನ್ನು ಪೀಠವು ಹೇಳಿತು. ‘ಇಂತಹ ಹುರುಳಿಲ್ಲದ ಅರ್ಜಿಗಳನ್ನು ಸಲ್ಲಿಸುವುದರಿಂದ ನ್ಯಾಯಾಲಯದ ಅಮೂಲ್ಯ ಸಮಯವು ವ್ಯರ್ಥವಾಗುತ್ತದೆ’ ಎಂದು ಹೇಳಿದ ಪೀಠವು ರಾಹುಲ್ ಸದಸ್ಯತ್ವಕ್ಕೆ ಸಂಬಂಧಿಸಿದ ಅರ್ಜಿಯನ್ನು ವಜಾಗೊಳಿಸಿತು.</p>.<p>ಅರ್ಜಿದಾರರು ಲೋಕಸಭಾ ಸ್ಪೀಕರ್, ಕೇಂದ್ರ ಸರ್ಕಾರ, ಚುನಾವಣಾ ಆಯೋಗ ಮತ್ತು ರಾಹುಲ್ ಅವರನ್ನು ಪ್ರತಿವಾದಿಯಾಗಿ ಹೆಸರಿಸಿದ್ದರು. </p>.<p>ಬಾಂಬೆ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಪ್ರಮಾಣ ವಚನ ಸ್ವೀಕರಿಸಿದ ರೀತಿಯು ದೋಷಪೂರಿತವಾಗಿತ್ತು ಎಂದು ದೂರಿ ಪಾಂಡೆ ಅವರು ಪಿಐಎಲ್ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ಪಾಂಡೆ ಅವರಿಗೆ ₹5 ಲಕ್ಷ ದಂಡ ವಿಧಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>