<p><strong>ನವದೆಹಲಿ:</strong> ವಿನಾಯಕ ದಾಮೋದರ ಸಾವರ್ಕರ್ ಅವರ ಕುರಿತಾಗಿ ಕೆಲವು ‘ಸಂಗತಿಗಳನ್ನು ಸಾಬೀತು ಮಾಡಲು’ ನಿರ್ದೇಶನ ನೀಡಬೇಕು, ಅವರ ಹೆಸರಿನ ದುರ್ಬಳಕೆ ತಡೆಯಬೇಕು ಎಂಬ ಕೋರಿಕೆ ಇರುವ ಅರ್ಜಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ಮಂಗಳವಾರ ನಿರಾಕರಿಸಿದೆ.</p><p>ತಾವು ಸಲ್ಲಿಸಿದ್ದ ಅರ್ಜಿಯ ಪರವಾಗಿ ತಾವೇ ವಾದ ಮಂಡಿಸಲು ಅರ್ಜಿದಾರ ಪಂಕಜ್ ಫಡ್ನಿಸ್ ಬಂದಿದ್ದರು. ತಾವು ಹಲವು ವರ್ಷಗಳಿಂದ ಸಾವರ್ಕರ್ ಬಗ್ಗೆ ಸಂಶೋಧನೆ ನಡೆಸುತ್ತಿರುವುದಾಗಿ ಅವರು ಹೇಳಿಕೊಂಡಿದ್ದರು. ಈ ಅರ್ಜಿಯು ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ಆರ್. ಗವಾಯಿ ಮತ್ತು ಆಗಸ್ಟೀನ್ ಜಾರ್ಜ್ ಮಸೀಹ್ ಅವರು ಇರುವ ವಿಭಾಗೀಯ ಪೀಠದ ಮುಂದೆ ಬಂದಿತ್ತು.</p><p>ಲಾಂಛನ ಮತ್ತು ಹೆಸರುಗಳ (ಅಸಮರ್ಪಕ ಬಳಕೆ ತಡೆ) ಕಾಯ್ದೆ–1956ರ ಪರಿಚ್ಛೇದದಲ್ಲಿ ಸಾವರ್ಕರ್ ಅವರ ಹೆಸರನ್ನು ಸೇರಿಸಬೇಕು ಎಂಬ ಕೋರಿಕೆಯನ್ನೂ ಈ ಅರ್ಜಿಯ ಹೊಂದಿತ್ತು. ಅರ್ಜಿದಾರರ ಮೂಲಭೂತ ಹಕ್ಕುಗಳಿಗೆ ಧಕ್ಕೆ ಆಗಿಲ್ಲ, ಹೀಗಿರುವಾಗ ಅರ್ಜಿಯ ವಿಚಾರವಾಗಿ ಮಧ್ಯಪ್ರವೇಶ ಮಾಡಲು ನ್ಯಾಯಾಲಯಕ್ಕೆ ಸಾಧ್ಯವಿಲ್ಲ ಎಂದು ಪೀಠವು ಹೇಳಿತು.</p>.ಆಕ್ಷೇಪಾರ್ಹ ಹೇಳಿಕೆ | ಕೋರ್ಟ್ಗೆ ಹಾಜರಾಗದ ರಾಹುಲ್: ಸಾವರ್ಕರ್ ಮೊಮ್ಮಗ ದೂರು.<p>ಸಾವರ್ಕರ್ ಅವರ ಬಗ್ಗೆ ಕೆಲವು ಹೇಳಿಕೆಗಳನ್ನು ನೀಡುವ ಮೂಲಕ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮೂಲಭೂತ ಕರ್ತವ್ಯಗಳಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಫಡ್ನಿಸ್ ದೂರಿದ್ದರು.</p><p>‘ಇಲ್ಲಿ ನಿಮ್ಮ ಯಾವ ಮೂಲಭೂತ ಹಕ್ಕಿನ ಉಲ್ಲಂಘನೆ ಆಗಿದೆ? ಅರ್ಜಿಯನ್ನು ನಾವು ಪರಿಗಣಿಸಲು ಆಗುವುದಿಲ್ಲ’ ಎಂದು ಪೀಠವು ಹೇಳಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ವಿನಾಯಕ ದಾಮೋದರ ಸಾವರ್ಕರ್ ಅವರ ಕುರಿತಾಗಿ ಕೆಲವು ‘ಸಂಗತಿಗಳನ್ನು ಸಾಬೀತು ಮಾಡಲು’ ನಿರ್ದೇಶನ ನೀಡಬೇಕು, ಅವರ ಹೆಸರಿನ ದುರ್ಬಳಕೆ ತಡೆಯಬೇಕು ಎಂಬ ಕೋರಿಕೆ ಇರುವ ಅರ್ಜಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ಮಂಗಳವಾರ ನಿರಾಕರಿಸಿದೆ.</p><p>ತಾವು ಸಲ್ಲಿಸಿದ್ದ ಅರ್ಜಿಯ ಪರವಾಗಿ ತಾವೇ ವಾದ ಮಂಡಿಸಲು ಅರ್ಜಿದಾರ ಪಂಕಜ್ ಫಡ್ನಿಸ್ ಬಂದಿದ್ದರು. ತಾವು ಹಲವು ವರ್ಷಗಳಿಂದ ಸಾವರ್ಕರ್ ಬಗ್ಗೆ ಸಂಶೋಧನೆ ನಡೆಸುತ್ತಿರುವುದಾಗಿ ಅವರು ಹೇಳಿಕೊಂಡಿದ್ದರು. ಈ ಅರ್ಜಿಯು ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ಆರ್. ಗವಾಯಿ ಮತ್ತು ಆಗಸ್ಟೀನ್ ಜಾರ್ಜ್ ಮಸೀಹ್ ಅವರು ಇರುವ ವಿಭಾಗೀಯ ಪೀಠದ ಮುಂದೆ ಬಂದಿತ್ತು.</p><p>ಲಾಂಛನ ಮತ್ತು ಹೆಸರುಗಳ (ಅಸಮರ್ಪಕ ಬಳಕೆ ತಡೆ) ಕಾಯ್ದೆ–1956ರ ಪರಿಚ್ಛೇದದಲ್ಲಿ ಸಾವರ್ಕರ್ ಅವರ ಹೆಸರನ್ನು ಸೇರಿಸಬೇಕು ಎಂಬ ಕೋರಿಕೆಯನ್ನೂ ಈ ಅರ್ಜಿಯ ಹೊಂದಿತ್ತು. ಅರ್ಜಿದಾರರ ಮೂಲಭೂತ ಹಕ್ಕುಗಳಿಗೆ ಧಕ್ಕೆ ಆಗಿಲ್ಲ, ಹೀಗಿರುವಾಗ ಅರ್ಜಿಯ ವಿಚಾರವಾಗಿ ಮಧ್ಯಪ್ರವೇಶ ಮಾಡಲು ನ್ಯಾಯಾಲಯಕ್ಕೆ ಸಾಧ್ಯವಿಲ್ಲ ಎಂದು ಪೀಠವು ಹೇಳಿತು.</p>.ಆಕ್ಷೇಪಾರ್ಹ ಹೇಳಿಕೆ | ಕೋರ್ಟ್ಗೆ ಹಾಜರಾಗದ ರಾಹುಲ್: ಸಾವರ್ಕರ್ ಮೊಮ್ಮಗ ದೂರು.<p>ಸಾವರ್ಕರ್ ಅವರ ಬಗ್ಗೆ ಕೆಲವು ಹೇಳಿಕೆಗಳನ್ನು ನೀಡುವ ಮೂಲಕ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮೂಲಭೂತ ಕರ್ತವ್ಯಗಳಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಫಡ್ನಿಸ್ ದೂರಿದ್ದರು.</p><p>‘ಇಲ್ಲಿ ನಿಮ್ಮ ಯಾವ ಮೂಲಭೂತ ಹಕ್ಕಿನ ಉಲ್ಲಂಘನೆ ಆಗಿದೆ? ಅರ್ಜಿಯನ್ನು ನಾವು ಪರಿಗಣಿಸಲು ಆಗುವುದಿಲ್ಲ’ ಎಂದು ಪೀಠವು ಹೇಳಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>