<p><strong>ಮುಂಬೈ:</strong> ಹಿಂದೂ, ಬೌದ್ಧ ಅಥವಾ ಸಿಖ್ ಧರ್ಮೀಯರ ಹೊರತಾಗಿ ಬೇರೆಯವರು ಪರಿಶಿಷ್ಟ ಜಾತಿಯ(ಎಸ್ಸಿ) ಪ್ರಮಾಣಪತ್ರ ಹೊಂದಿದ್ದರೆ ಅದನ್ನು ರದ್ದುಗೊಳಿಸಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಪಢಣವೀಸ್ ಅವರು ಗುರುವಾರ ಹೇಳಿದ್ದಾರೆ.</p>.<p>‘ಅಂತಹ ವ್ಯಕ್ತಿಗಳು ಸರ್ಕಾರಿ ನೌಕರಿ ಅಥವಾ ಇತರ ಸೌಲಭ್ಯಗಳನ್ನು ಎಸ್ಸಿ ಮೀಸಲಾತಿಯಡಿ ಪಡೆದಿದ್ದರೆ ಕ್ರಮ ಕೈಗೊಳ್ಳಲಾಗುವುದು. ಅಕ್ರಮವಾಗಿ ಪರಿಶಿಷ್ಟ ಜಾತಿಯ ಪ್ರಮಾಣಪತ್ರ ಪಡೆದು ಚುನಾವಣೆಯಲ್ಲಿ ಗೆಲುವು ಪಡೆದಿದ್ದರೆ ಅದನ್ನೂ ಅನೂರ್ಜಿತಗೊಳಿಸಲಾಗುವುದು’ ಎಂದು ಪಢಣವೀಸ್ ಅವರು ವಿಧಾನಪರಿಷತ್ನಲ್ಲಿ ಹೇಳಿದ್ದಾರೆ.</p>.<p>‘ಬಲವಂತವಾಗಿ ಅಥವಾ ವಂಚಿಸಿ ಮತಾಂತರ ನಡೆಸುವವರ ವಿರುದ್ಧ ಕ್ರಮಕ್ಕೆ ಕಠಿಣ ಕಾನೂನುಗಳನ್ನು ಜಾರಿಗೊಳಿಸುತ್ತೇವೆ’ ಎಂದು ತಿಳಿಸಿದ್ದಾರೆ.</p>.<p>‘ಕ್ರಿಪ್ಟೊ ಕ್ರಿಶ್ಚಿಯನ್’ಗಳಿಂದ (ದಾಖಲೆಗಳ ಪ್ರಕಾರ ಬೇರೆ ಧರ್ಮದಲ್ಲಿದ್ದು, ಕ್ರಿಶ್ಚಿಯನ್ ಧರ್ಮವನ್ನು ಪಾಲಿಸುವವರು) ಧಾರ್ಮಿಕ ಸ್ವಾತಂತ್ರ್ಯದ ದುರುಪಯೋಗವಾಗುತ್ತಿದೆ. ಅವರು ಎಸ್ಸಿ ಮೀಸಲಾತಿಯಡಿ ಸೌಲಭ್ಯಗಳನ್ನು ಪಡೆಯುತ್ತಿದ್ದಾರೆ’ ಎಂದು ಬಿಜೆಪಿ ಶಾಸಕ ಅಮಿತ್ ಗೊರ್ಖೆ ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಹಿಂದೂ, ಬೌದ್ಧ ಅಥವಾ ಸಿಖ್ ಧರ್ಮೀಯರ ಹೊರತಾಗಿ ಬೇರೆಯವರು ಪರಿಶಿಷ್ಟ ಜಾತಿಯ(ಎಸ್ಸಿ) ಪ್ರಮಾಣಪತ್ರ ಹೊಂದಿದ್ದರೆ ಅದನ್ನು ರದ್ದುಗೊಳಿಸಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಪಢಣವೀಸ್ ಅವರು ಗುರುವಾರ ಹೇಳಿದ್ದಾರೆ.</p>.<p>‘ಅಂತಹ ವ್ಯಕ್ತಿಗಳು ಸರ್ಕಾರಿ ನೌಕರಿ ಅಥವಾ ಇತರ ಸೌಲಭ್ಯಗಳನ್ನು ಎಸ್ಸಿ ಮೀಸಲಾತಿಯಡಿ ಪಡೆದಿದ್ದರೆ ಕ್ರಮ ಕೈಗೊಳ್ಳಲಾಗುವುದು. ಅಕ್ರಮವಾಗಿ ಪರಿಶಿಷ್ಟ ಜಾತಿಯ ಪ್ರಮಾಣಪತ್ರ ಪಡೆದು ಚುನಾವಣೆಯಲ್ಲಿ ಗೆಲುವು ಪಡೆದಿದ್ದರೆ ಅದನ್ನೂ ಅನೂರ್ಜಿತಗೊಳಿಸಲಾಗುವುದು’ ಎಂದು ಪಢಣವೀಸ್ ಅವರು ವಿಧಾನಪರಿಷತ್ನಲ್ಲಿ ಹೇಳಿದ್ದಾರೆ.</p>.<p>‘ಬಲವಂತವಾಗಿ ಅಥವಾ ವಂಚಿಸಿ ಮತಾಂತರ ನಡೆಸುವವರ ವಿರುದ್ಧ ಕ್ರಮಕ್ಕೆ ಕಠಿಣ ಕಾನೂನುಗಳನ್ನು ಜಾರಿಗೊಳಿಸುತ್ತೇವೆ’ ಎಂದು ತಿಳಿಸಿದ್ದಾರೆ.</p>.<p>‘ಕ್ರಿಪ್ಟೊ ಕ್ರಿಶ್ಚಿಯನ್’ಗಳಿಂದ (ದಾಖಲೆಗಳ ಪ್ರಕಾರ ಬೇರೆ ಧರ್ಮದಲ್ಲಿದ್ದು, ಕ್ರಿಶ್ಚಿಯನ್ ಧರ್ಮವನ್ನು ಪಾಲಿಸುವವರು) ಧಾರ್ಮಿಕ ಸ್ವಾತಂತ್ರ್ಯದ ದುರುಪಯೋಗವಾಗುತ್ತಿದೆ. ಅವರು ಎಸ್ಸಿ ಮೀಸಲಾತಿಯಡಿ ಸೌಲಭ್ಯಗಳನ್ನು ಪಡೆಯುತ್ತಿದ್ದಾರೆ’ ಎಂದು ಬಿಜೆಪಿ ಶಾಸಕ ಅಮಿತ್ ಗೊರ್ಖೆ ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>