<p class="title"><strong>ನವದೆಹಲಿ</strong>: ಬೆಂಗಳೂರಿನಲ್ಲಿ ಗಗನಚುಂಬಿ ಕಟ್ಟಡ ನಿರ್ಮಿಸುವ ಗೋದ್ರೇಜ್ ಪ್ರಾಪರ್ಟೀಸ್ ಲಿಮಿಟೆಡ್ ಮತ್ತು ವಂಡರ್ ಪ್ರಾಜೆಕ್ಟ್ ಡೆವಲಪ್ ಮೆಂಟ್ ಪ್ರೈವೇಟ್ ಲಿಮಿಟೆಡ್ ಯೋಜನೆಗೆ ತಡೆನೀಡಿದ್ದ ಎನ್.ಜಿ.ಟಿ ಆದೇಶವನ್ನು ಪ್ರಶ್ನಿಸಿದ್ದ ಅರ್ಜಿಗೆ ಸಂಬಂಧಿಸಿದ ತೀರ್ಪನ್ನು ಸುಪ್ರೀಂ ಕೋರ್ಟ್ ಶನಿವಾರ ಕಾಯ್ದಿರಿಸಿದೆ.</p>.<p class="title">ಅರ್ಜಿಗೆ ಸಂಬಂಧಿಸಿದ ಪರ, ವಿರೋಧ ವಾದ ಆಲಿಸಿದ ಬಳಿಕ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬಡೆ ಮತ್ತು ನ್ಯಾಯಮೂರ್ತಿ ವಿ.ಬಾಲಸುಬ್ರಹ್ಮಣಿಯನ್ ಅವರಿದ್ದ ಪೀಠವು ಆದೇಶವನ್ನು ಕಾಯ್ದಿರಿಸಿತು. ಅರ್ಜಿ ಸಂಬಂಧ ಸುಪ್ರೀಂ ಕೋರ್ಟ್ ಹಿಂದೆ ಕೇಂದ್ರ, ಕರ್ನಾಟಕ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿತ್ತು.</p>.<p class="title">ಉದ್ದೇಶಿತ ಕಟ್ಟಡದ ನಿರ್ಮಾಣ ಬೆಂಗಳೂರಿನ ಕೈಕೊಂಡರಹಳ್ಳಿ ಕೆರೆಯ ಬಫರ್ ವಲಯ ವ್ಯಾಪ್ತಿಯಲ್ಲಿದೆ. ಇದು, ನಿಯಮದ ಉಲ್ಲಂಘನೆ ಎಂದು ಪ್ರತಿಪಾದಿಸಿದ್ದ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯು (ಎನ್.ಜಿ.ಟಿ) ನಿರ್ಮಾಣ ಕಾರ್ಯಕ್ಕೆ ತಡೆ ನೀಡಿತ್ತು. ಇದನ್ನು ವಂಡರ್ ಪ್ರಾಜೆಕ್ಟ್ಸ್ ಡೆವಲಪಮೆಂಟ್ ಪ್ರೈವೇಟ್ ಲಿಮಿಟೆಡ್ ಪ್ರಶ್ನಿಸಿತ್ತು.</p>.<p class="title">ಬೆಂಗಳೂರು ಗ್ರಾಮಾಂತರ ಜಿಲ್ಲೆ ವರ್ತೂರು ಹೋಬಳಿಯ ಕಸವನಹಳ್ಳಿಯಲ್ಲಿ ಉದ್ದೇಶಿತ ಕಟ್ಟಡ ನಿರ್ಮಾಣಕ್ಕಾಗಿ ಅನುಮೋದನೆ ನೀಡಿದ್ದ (ಎನ್ವಿರಾಮೆಂಟಲ್ ಕ್ಲಿಯರೆನ್ಸ್) ರಾಜ್ಯದ ಪರಿಸರ ಪರಿಣಾಮ ಮೌಲ್ಯಮಾಪನ ಪ್ರಾಧಿಕಾರದ ಆದೇಶವನ್ನು ಪ್ರಶ್ನಿಸಿ ಬೆಂಗಳೂರಿನ ನಿವಾಸಿ ಎಚ್.ಪಿ.ರಾಜಣ್ಣ ಅವರು ಎನ್.ಜಿ.ಟಿಗೆ ಅರ್ಜಿ ಸಲ್ಲಿಸಿದ್ದರು.</p>.<p>ಕಟ್ಟಡ ನಿರ್ಮಾಣ ಬಫರ್ ವಲಯದಲ್ಲಿ ಬರಲಿದೆ. ಅಲ್ಲದೆ, ಒಂದು ಮುಖ್ಯ ಮತ್ತು ಎರಡು ಉಪ ರಾಜಕಾಲುವೆಗಳು ಬರಲಿವೆ ಎಂದು ರಾಜಣ್ಣ ಅರ್ಜಿಯಲ್ಲಿ ಉಲ್ಲೇಖಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ</strong>: ಬೆಂಗಳೂರಿನಲ್ಲಿ ಗಗನಚುಂಬಿ ಕಟ್ಟಡ ನಿರ್ಮಿಸುವ ಗೋದ್ರೇಜ್ ಪ್ರಾಪರ್ಟೀಸ್ ಲಿಮಿಟೆಡ್ ಮತ್ತು ವಂಡರ್ ಪ್ರಾಜೆಕ್ಟ್ ಡೆವಲಪ್ ಮೆಂಟ್ ಪ್ರೈವೇಟ್ ಲಿಮಿಟೆಡ್ ಯೋಜನೆಗೆ ತಡೆನೀಡಿದ್ದ ಎನ್.ಜಿ.ಟಿ ಆದೇಶವನ್ನು ಪ್ರಶ್ನಿಸಿದ್ದ ಅರ್ಜಿಗೆ ಸಂಬಂಧಿಸಿದ ತೀರ್ಪನ್ನು ಸುಪ್ರೀಂ ಕೋರ್ಟ್ ಶನಿವಾರ ಕಾಯ್ದಿರಿಸಿದೆ.</p>.<p class="title">ಅರ್ಜಿಗೆ ಸಂಬಂಧಿಸಿದ ಪರ, ವಿರೋಧ ವಾದ ಆಲಿಸಿದ ಬಳಿಕ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬಡೆ ಮತ್ತು ನ್ಯಾಯಮೂರ್ತಿ ವಿ.ಬಾಲಸುಬ್ರಹ್ಮಣಿಯನ್ ಅವರಿದ್ದ ಪೀಠವು ಆದೇಶವನ್ನು ಕಾಯ್ದಿರಿಸಿತು. ಅರ್ಜಿ ಸಂಬಂಧ ಸುಪ್ರೀಂ ಕೋರ್ಟ್ ಹಿಂದೆ ಕೇಂದ್ರ, ಕರ್ನಾಟಕ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿತ್ತು.</p>.<p class="title">ಉದ್ದೇಶಿತ ಕಟ್ಟಡದ ನಿರ್ಮಾಣ ಬೆಂಗಳೂರಿನ ಕೈಕೊಂಡರಹಳ್ಳಿ ಕೆರೆಯ ಬಫರ್ ವಲಯ ವ್ಯಾಪ್ತಿಯಲ್ಲಿದೆ. ಇದು, ನಿಯಮದ ಉಲ್ಲಂಘನೆ ಎಂದು ಪ್ರತಿಪಾದಿಸಿದ್ದ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯು (ಎನ್.ಜಿ.ಟಿ) ನಿರ್ಮಾಣ ಕಾರ್ಯಕ್ಕೆ ತಡೆ ನೀಡಿತ್ತು. ಇದನ್ನು ವಂಡರ್ ಪ್ರಾಜೆಕ್ಟ್ಸ್ ಡೆವಲಪಮೆಂಟ್ ಪ್ರೈವೇಟ್ ಲಿಮಿಟೆಡ್ ಪ್ರಶ್ನಿಸಿತ್ತು.</p>.<p class="title">ಬೆಂಗಳೂರು ಗ್ರಾಮಾಂತರ ಜಿಲ್ಲೆ ವರ್ತೂರು ಹೋಬಳಿಯ ಕಸವನಹಳ್ಳಿಯಲ್ಲಿ ಉದ್ದೇಶಿತ ಕಟ್ಟಡ ನಿರ್ಮಾಣಕ್ಕಾಗಿ ಅನುಮೋದನೆ ನೀಡಿದ್ದ (ಎನ್ವಿರಾಮೆಂಟಲ್ ಕ್ಲಿಯರೆನ್ಸ್) ರಾಜ್ಯದ ಪರಿಸರ ಪರಿಣಾಮ ಮೌಲ್ಯಮಾಪನ ಪ್ರಾಧಿಕಾರದ ಆದೇಶವನ್ನು ಪ್ರಶ್ನಿಸಿ ಬೆಂಗಳೂರಿನ ನಿವಾಸಿ ಎಚ್.ಪಿ.ರಾಜಣ್ಣ ಅವರು ಎನ್.ಜಿ.ಟಿಗೆ ಅರ್ಜಿ ಸಲ್ಲಿಸಿದ್ದರು.</p>.<p>ಕಟ್ಟಡ ನಿರ್ಮಾಣ ಬಫರ್ ವಲಯದಲ್ಲಿ ಬರಲಿದೆ. ಅಲ್ಲದೆ, ಒಂದು ಮುಖ್ಯ ಮತ್ತು ಎರಡು ಉಪ ರಾಜಕಾಲುವೆಗಳು ಬರಲಿವೆ ಎಂದು ರಾಜಣ್ಣ ಅರ್ಜಿಯಲ್ಲಿ ಉಲ್ಲೇಖಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>