ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರ ನೇತೃತ್ವದ ಏಳು ನ್ಯಾಯಮೂರ್ತಿಗಳ ಪೀಠವು ವಾದಿ–ಪ್ರತಿವಾದಿಗಳ (ಉಭಯ ಪಕ್ಷಗಳ?) ವಾದಗಳನ್ನು ಕಳೆದ ಎಂಟು ದಿನಗಳಿಂದ ಆಲಿಸಿದೆ. ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ಸೂರ್ಯಕಾಂತ್, ಜೆ.ಬಿ. ಪಾರ್ದಿವಾಲ, ದೀಪಂಕರ್ ದತ್ತಾ, ಮನೋಜ್ ಮಿಶ್ರಾ ಹಾಗೂ ಸತೀಶ್ ಚಂದ್ರ ಶರ್ಮಾ ಪೀಠದಲ್ಲಿದ್ದಾರೆ.