<p><strong>ನವದೆಹಲಿ</strong>: ಮದುವೆಗೂ ಮುನ್ನ ಜೋಡಿಗೆ ಜನಿಸಿದ ಮಕ್ಕಳಿಗೆ ಹಿಂದೂ ಉತ್ತರಾಧಿಕಾರ ಕಾಯ್ದೆಯಡಿ ಪಿತ್ರಾರ್ಜಿತ ಆಸ್ತಿ ಹಕ್ಕು ಕುರಿತ ಅರ್ಜಿಗೆ ಸಂಬಂಧಿಸಿದ ತೀರ್ಪನ್ನು ಸುಪ್ರೀಂಕೋರ್ಟ್ ಶುಕ್ರವಾರ ಕಾಯ್ದಿರಿಸಿತು.</p>.<p>ಅರ್ಜಿಗೆ ಸಂಬಂಧಿಸಿ ಹಲವು ವಕೀಲರು ಮಂಡಿಸಿದ ವಾದಗಳನ್ನು ಮುಖ್ಯನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆ.ಬಿ.ಪಾರ್ದೀವಾಲಾ ಹಾಗೂ ಮನೋಜ್ ಮಿಶ್ರಾ ಅವರಿದ್ದ ನ್ಯಾಯಪೀಠ ಆಲಿಸಿತು.</p>.<p>‘ವಿವಾಹವಾಗುವುದಕ್ಕೂ ಮುನ್ನ ಜೋಡಿಗೆ ಜನಿಸಿದ ಮಕ್ಕಳು ಹಿಂದೂ ವಿವಾಹ ಕಾಯ್ದೆ ಸೆಕ್ಷನ್ 16(3)ರಡಿ ಪಾಲಕರ ಸ್ವಯಾರ್ಜಿತ ಆಸ್ತಿ ಮೇಲಷ್ಟೆ ಹಕ್ಕು ಹೊಂದಿದ್ದಾರೆಯೇ ಎಂಬ ಬಗ್ಗೆಯೂ ನ್ಯಾಯಪೀಠ ನಿರ್ಧಾರ ಪ್ರಕಟಿಸಲಿದೆ.</p>.<p>ಈ ವಿಷಯ ಕುರಿತ ಅರ್ಜಿ 2011ರಿಂದ ಬಾಕಿ ಉಳಿದಿದೆ. ವಿಚಾರಣೆ ನಡೆಸಿದ್ದ ಇಬ್ಬರು ನ್ಯಾಯಮೂರ್ತಿಗಳಿದ್ದ ನ್ಯಾಯಪೀಠ, ಅರ್ಜಿಯನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿ 2011ರ ಮಾರ್ಚ್ 31ರಂದು ಆದೇಶಿಸಿತ್ತು.</p>.<p>‘ಕಾನೂನುಸಮ್ಮತ ವಿವಾಹಸಂಬಂಧದಲ್ಲಿ ಜನಿಸದ ಮಕ್ಕಳಿಗೆ ಪೂರ್ವಿಕರ ಆಸ್ತಿಯಲ್ಲಿ ಪಾಲು ಪಡೆಯಲು ಹಕ್ಕಿದೆಯೇ ಅಥವಾ ಹಿಂದೂ ವಿವಾಹ ಕಾಯ್ದೆ ಸೆಕ್ಷನ್ 16(3) ಅಡಿ ತಮ್ಮ ಪಾಲಕರ ಸ್ವಯಾರ್ಜಿತ ಆಸ್ತಿ ಮೇಲಷ್ಟೆ ಹಕ್ಕಿದೆಯೇ ಎಂಬುದೇ ಈ ಪ್ರಕರಣದ ಮುಖ್ಯ ಪ್ರಶ್ನೆಯಾಗಿದೆ’ ಎಂದು ಇಬ್ಬರು ನ್ಯಾಯಮೂರ್ತಿಗಳಿದ್ದ ಪೀಠ ಹೇಳಿತ್ತು.</p>.<p>‘ರದ್ದುಗೊಳಿಸಲಾದ ಅಥವಾ ರದ್ದುಗೊಳಿಸಬಹುದಾದ ವಿವಾಹಸಂಬಂಧದಲ್ಲಿ ಜನಿಸಿದ ಮಕ್ಕಳಿಗೆ ಮಾತ್ರ ತಮ್ಮ ಪಾಲಕರ ಆಸ್ತಿ ಮೇಲೆ ಹಕ್ಕಿದೆ ಎಂದು ಕಾಯ್ದೆಯಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ’ ಎಂದೂ ಪೀಠ ಹೇಳಿತ್ತು.</p>.<p>‘ಪ್ರತಿ ಸಮಾಜದಲ್ಲಿ ಅಸಹಜ ಸಂಪ್ರದಾಯಗಳು ಬದಲಾಗುತ್ತವೆ. ಇದಕ್ಕೆ ನಮ್ಮ ಸಮಾಜವೂ ಹೊರತಲ್ಲ. ಹಿಂದೆ ಯಾವುದು ನ್ಯಾಯಸಮ್ಮತವಲ್ಲ ಎಂದು ಪರಿಗಣಿಸಲಾಗುತ್ತಿತ್ತೊ ಅದು ಈಗಿನ ದಿನಮಾನದಲ್ಲಿ ನ್ಯಾಯಸಮ್ಮತವಾಗಬಹುದು. ಹೀಗಾಗಿ, ಸಾಮಾಜಿಕ ಅನುಮೋದನೆಯಿಂದಲೇ ನ್ಯಾಯಸಮ್ಮತ ಎಂಬ ಪರಿಕಲ್ಪನೆ ಹೊರಹೊಮ್ಮುತ್ತದೆ’ ಎಂದು ಹೇಳಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಮದುವೆಗೂ ಮುನ್ನ ಜೋಡಿಗೆ ಜನಿಸಿದ ಮಕ್ಕಳಿಗೆ ಹಿಂದೂ ಉತ್ತರಾಧಿಕಾರ ಕಾಯ್ದೆಯಡಿ ಪಿತ್ರಾರ್ಜಿತ ಆಸ್ತಿ ಹಕ್ಕು ಕುರಿತ ಅರ್ಜಿಗೆ ಸಂಬಂಧಿಸಿದ ತೀರ್ಪನ್ನು ಸುಪ್ರೀಂಕೋರ್ಟ್ ಶುಕ್ರವಾರ ಕಾಯ್ದಿರಿಸಿತು.</p>.<p>ಅರ್ಜಿಗೆ ಸಂಬಂಧಿಸಿ ಹಲವು ವಕೀಲರು ಮಂಡಿಸಿದ ವಾದಗಳನ್ನು ಮುಖ್ಯನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆ.ಬಿ.ಪಾರ್ದೀವಾಲಾ ಹಾಗೂ ಮನೋಜ್ ಮಿಶ್ರಾ ಅವರಿದ್ದ ನ್ಯಾಯಪೀಠ ಆಲಿಸಿತು.</p>.<p>‘ವಿವಾಹವಾಗುವುದಕ್ಕೂ ಮುನ್ನ ಜೋಡಿಗೆ ಜನಿಸಿದ ಮಕ್ಕಳು ಹಿಂದೂ ವಿವಾಹ ಕಾಯ್ದೆ ಸೆಕ್ಷನ್ 16(3)ರಡಿ ಪಾಲಕರ ಸ್ವಯಾರ್ಜಿತ ಆಸ್ತಿ ಮೇಲಷ್ಟೆ ಹಕ್ಕು ಹೊಂದಿದ್ದಾರೆಯೇ ಎಂಬ ಬಗ್ಗೆಯೂ ನ್ಯಾಯಪೀಠ ನಿರ್ಧಾರ ಪ್ರಕಟಿಸಲಿದೆ.</p>.<p>ಈ ವಿಷಯ ಕುರಿತ ಅರ್ಜಿ 2011ರಿಂದ ಬಾಕಿ ಉಳಿದಿದೆ. ವಿಚಾರಣೆ ನಡೆಸಿದ್ದ ಇಬ್ಬರು ನ್ಯಾಯಮೂರ್ತಿಗಳಿದ್ದ ನ್ಯಾಯಪೀಠ, ಅರ್ಜಿಯನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿ 2011ರ ಮಾರ್ಚ್ 31ರಂದು ಆದೇಶಿಸಿತ್ತು.</p>.<p>‘ಕಾನೂನುಸಮ್ಮತ ವಿವಾಹಸಂಬಂಧದಲ್ಲಿ ಜನಿಸದ ಮಕ್ಕಳಿಗೆ ಪೂರ್ವಿಕರ ಆಸ್ತಿಯಲ್ಲಿ ಪಾಲು ಪಡೆಯಲು ಹಕ್ಕಿದೆಯೇ ಅಥವಾ ಹಿಂದೂ ವಿವಾಹ ಕಾಯ್ದೆ ಸೆಕ್ಷನ್ 16(3) ಅಡಿ ತಮ್ಮ ಪಾಲಕರ ಸ್ವಯಾರ್ಜಿತ ಆಸ್ತಿ ಮೇಲಷ್ಟೆ ಹಕ್ಕಿದೆಯೇ ಎಂಬುದೇ ಈ ಪ್ರಕರಣದ ಮುಖ್ಯ ಪ್ರಶ್ನೆಯಾಗಿದೆ’ ಎಂದು ಇಬ್ಬರು ನ್ಯಾಯಮೂರ್ತಿಗಳಿದ್ದ ಪೀಠ ಹೇಳಿತ್ತು.</p>.<p>‘ರದ್ದುಗೊಳಿಸಲಾದ ಅಥವಾ ರದ್ದುಗೊಳಿಸಬಹುದಾದ ವಿವಾಹಸಂಬಂಧದಲ್ಲಿ ಜನಿಸಿದ ಮಕ್ಕಳಿಗೆ ಮಾತ್ರ ತಮ್ಮ ಪಾಲಕರ ಆಸ್ತಿ ಮೇಲೆ ಹಕ್ಕಿದೆ ಎಂದು ಕಾಯ್ದೆಯಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ’ ಎಂದೂ ಪೀಠ ಹೇಳಿತ್ತು.</p>.<p>‘ಪ್ರತಿ ಸಮಾಜದಲ್ಲಿ ಅಸಹಜ ಸಂಪ್ರದಾಯಗಳು ಬದಲಾಗುತ್ತವೆ. ಇದಕ್ಕೆ ನಮ್ಮ ಸಮಾಜವೂ ಹೊರತಲ್ಲ. ಹಿಂದೆ ಯಾವುದು ನ್ಯಾಯಸಮ್ಮತವಲ್ಲ ಎಂದು ಪರಿಗಣಿಸಲಾಗುತ್ತಿತ್ತೊ ಅದು ಈಗಿನ ದಿನಮಾನದಲ್ಲಿ ನ್ಯಾಯಸಮ್ಮತವಾಗಬಹುದು. ಹೀಗಾಗಿ, ಸಾಮಾಜಿಕ ಅನುಮೋದನೆಯಿಂದಲೇ ನ್ಯಾಯಸಮ್ಮತ ಎಂಬ ಪರಿಕಲ್ಪನೆ ಹೊರಹೊಮ್ಮುತ್ತದೆ’ ಎಂದು ಹೇಳಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>