<p><strong>ಚೆನ್ನೈ: </strong>‘ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಡಪ್ಪಾಡಿ ಕೆ.ಪಳನಿಸ್ವಾಮಿ ಅವರು ಎಐಎಡಿಎಂಕೆಯ ಹಂಗಾಮಿ ಪ್ರಧಾನ ಕಾರ್ಯದರ್ಶಿಯಾಗಿ ಮುಂದುವರಿಯಲು ಸುಪ್ರೀಂ ಕೋರ್ಟ್ ಸಮ್ಮತಿ ನೀಡಿರುವುದರಿಂದ ನಮಗೆ ಹಿನ್ನಡೆಯಾಗಿಲ್ಲ. ನಾವು ಜನರ ಬಳಿಗೆ ಹೋಗಿ ನ್ಯಾಯ ಕೇಳುತ್ತೇವೆ’ ಎಂದು ಪಕ್ಷದ ಪದಚ್ಯುತ ಮುಖಂಡ ಒ.ಪನ್ನೀರ್ಸೆಲ್ವಂ ಶುಕ್ರವಾರ ಪ್ರತಿಕ್ರಿಯಿಸಿದ್ದಾರೆ.</p>.<p>‘ಧರ್ಮ ಯುದ್ಧ ನಡೆಯುತ್ತಿದೆ. ನಾವು ಧರ್ಮದ ಪರವಾಗಿ ನಿಂತು ನ್ಯಾಯ ಕೇಳಲಿದ್ದೇವೆ. ನಾನು ಮತ್ತು ಬೆಂಬಲಿಗರು ಶೀಘ್ರವೇ ರಾಜ್ಯದ ಪ್ರತಿ ಜಿಲ್ಲೆಗಳಿಗೆ ತೆರಳಿ ಜನರನ್ನು ಭೇಟಿಯಾಗಲಿದ್ದೇವೆ’ ಎಂದೂ ವಿವರಿಸಿದ್ದಾರೆ.</p>.<p>ಆಡಳಿತಾರೂಢ ಡಿಎಂಕೆಯ ‘ಬಿ’ ಟೀಮ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಆರೋಪದ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಪನ್ನೀರ್ಸೆಲ್ವಂ, ‘ಪಳನಿಸ್ವಾಮಿ ಪಾಳಯದವರು ಡಿಎಂಕೆಯ ‘ಎ’ಯಿಂದ ‘ಝೆಡ್’ ಟೀಮ್ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ: </strong>‘ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಡಪ್ಪಾಡಿ ಕೆ.ಪಳನಿಸ್ವಾಮಿ ಅವರು ಎಐಎಡಿಎಂಕೆಯ ಹಂಗಾಮಿ ಪ್ರಧಾನ ಕಾರ್ಯದರ್ಶಿಯಾಗಿ ಮುಂದುವರಿಯಲು ಸುಪ್ರೀಂ ಕೋರ್ಟ್ ಸಮ್ಮತಿ ನೀಡಿರುವುದರಿಂದ ನಮಗೆ ಹಿನ್ನಡೆಯಾಗಿಲ್ಲ. ನಾವು ಜನರ ಬಳಿಗೆ ಹೋಗಿ ನ್ಯಾಯ ಕೇಳುತ್ತೇವೆ’ ಎಂದು ಪಕ್ಷದ ಪದಚ್ಯುತ ಮುಖಂಡ ಒ.ಪನ್ನೀರ್ಸೆಲ್ವಂ ಶುಕ್ರವಾರ ಪ್ರತಿಕ್ರಿಯಿಸಿದ್ದಾರೆ.</p>.<p>‘ಧರ್ಮ ಯುದ್ಧ ನಡೆಯುತ್ತಿದೆ. ನಾವು ಧರ್ಮದ ಪರವಾಗಿ ನಿಂತು ನ್ಯಾಯ ಕೇಳಲಿದ್ದೇವೆ. ನಾನು ಮತ್ತು ಬೆಂಬಲಿಗರು ಶೀಘ್ರವೇ ರಾಜ್ಯದ ಪ್ರತಿ ಜಿಲ್ಲೆಗಳಿಗೆ ತೆರಳಿ ಜನರನ್ನು ಭೇಟಿಯಾಗಲಿದ್ದೇವೆ’ ಎಂದೂ ವಿವರಿಸಿದ್ದಾರೆ.</p>.<p>ಆಡಳಿತಾರೂಢ ಡಿಎಂಕೆಯ ‘ಬಿ’ ಟೀಮ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಆರೋಪದ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಪನ್ನೀರ್ಸೆಲ್ವಂ, ‘ಪಳನಿಸ್ವಾಮಿ ಪಾಳಯದವರು ಡಿಎಂಕೆಯ ‘ಎ’ಯಿಂದ ‘ಝೆಡ್’ ಟೀಮ್ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>