<p class="title"><strong>ನವದೆಹಲಿ</strong>: ಕೋವಿಡ್ ಪರಿಸ್ಥಿತಿ ರಾಜಧಾನಿ ನವದೆಹಲಿಯಲ್ಲಿ ಬಿಗಡಾಯಿಸುತ್ತಿದೆ ಎಂದು ಕಳವಳ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ಕೇಂದ್ರ ಮತ್ತು ಎಲ್ಲ ರಾಜ್ಯ ಸರ್ಕಾರಗಳು ಎರಡು ದಿನಗಳಲ್ಲಿ ವಸ್ತು ಸ್ಥಿತಿ ವರದಿ ದಾಖಲಿಸಬೇಕು ಎಂದು ಸೂಚಿಸಿದೆ.</p>.<p class="title">ದೆಹಲಿ ಮತ್ತು ಗುಜರಾತ್ನಲ್ಲಿ ಪರಿಸ್ಥಿತಿಯು ಹದಗೆಡುತ್ತಿದೆ. ಎಲ್ಲ ರಾಜ್ಯಗಳು ಸದ್ಯದ ಪರಿಸ್ಥಿತಿ, ನಿರ್ವಹಣೆ ಮತ್ತು ಕಡಿವಾಣಕ್ಕೆ ಕೈಗೊಂಡಿರುವ ಕ್ರಮಗಳನ್ನು ಕುರಿತು ಸಮಗ್ರ ವರದಿಯನ್ನು ದಾಖಲಿಸಬೇಕು ಕೋರ್ಟ್ ಸೋಮವಾರ ಆದೇಶಿಸಿತು.</p>.<p class="title">‘ದೆಹಲಿಯಲ್ಲಿ ಮುಖ್ಯವಾಗಿ ನವೆಂಬರ್ ತಿಂಗಳಲ್ಲಿ ಸ್ಥಿತಿ ಹದಗೆಟ್ಟಿದೆ’ ಎಂದು ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ನ್ಯಾಯಪೀಠ ದೆಹಲಿ ಸರ್ಕಾರ ಪ್ರತಿನಿಧಿಸಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಸಂಜಯ್ ಜೈನ್ ಅವರಿಗ ತಿಳಿಸಿತು.</p>.<p>ಕೋವಿಡ್ ಪರಿಸ್ಥಿತಿಯನ್ನು ನಿಯಂತ್ರಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎಲ್ಲ ರೀತಿಯ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕ ಹಾಗೂ ಸೋಂಕು ಹೆಚ್ಚಳವಾಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು ಎಂದು ಸೂಚಿಸಿತು.</p>.<p>ನ್ಯಾಯಮೂರ್ತಿಗಳಾದ ಆರ್.ಎಸ್.ರೆಡ್ಡಿ ಮತ್ತು ಎಂ.ಆರ್.ಶಾ ಅವರೂ ಪೀಠದಲ್ಲಿ ಇದ್ದರು.</p>.<p>ಕೋವಿಡ್ ಪೀಡಿತರಿಗೆ ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲ ಹಾಗೂ ಸೋಂಕಿನಿಂದ ಮೃತಪಟ್ಟವರಿಗೆ ಗೌರವಯುತ ಅಂತ್ಯಕ್ರಿಯೆ ಆಗುತ್ತಿಲ್ಲ ಎಂಬುದನ್ನು ಗಣನೆಗೆ ತೆಗೆದುಕೊಂಡ ನ್ಯಾಯಪೀಠ ವಿಚಾರಣೆಯನ್ನು ನವೆಂಬರ್ 27ಕ್ಕೆ ಮುಂದೂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ</strong>: ಕೋವಿಡ್ ಪರಿಸ್ಥಿತಿ ರಾಜಧಾನಿ ನವದೆಹಲಿಯಲ್ಲಿ ಬಿಗಡಾಯಿಸುತ್ತಿದೆ ಎಂದು ಕಳವಳ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ಕೇಂದ್ರ ಮತ್ತು ಎಲ್ಲ ರಾಜ್ಯ ಸರ್ಕಾರಗಳು ಎರಡು ದಿನಗಳಲ್ಲಿ ವಸ್ತು ಸ್ಥಿತಿ ವರದಿ ದಾಖಲಿಸಬೇಕು ಎಂದು ಸೂಚಿಸಿದೆ.</p>.<p class="title">ದೆಹಲಿ ಮತ್ತು ಗುಜರಾತ್ನಲ್ಲಿ ಪರಿಸ್ಥಿತಿಯು ಹದಗೆಡುತ್ತಿದೆ. ಎಲ್ಲ ರಾಜ್ಯಗಳು ಸದ್ಯದ ಪರಿಸ್ಥಿತಿ, ನಿರ್ವಹಣೆ ಮತ್ತು ಕಡಿವಾಣಕ್ಕೆ ಕೈಗೊಂಡಿರುವ ಕ್ರಮಗಳನ್ನು ಕುರಿತು ಸಮಗ್ರ ವರದಿಯನ್ನು ದಾಖಲಿಸಬೇಕು ಕೋರ್ಟ್ ಸೋಮವಾರ ಆದೇಶಿಸಿತು.</p>.<p class="title">‘ದೆಹಲಿಯಲ್ಲಿ ಮುಖ್ಯವಾಗಿ ನವೆಂಬರ್ ತಿಂಗಳಲ್ಲಿ ಸ್ಥಿತಿ ಹದಗೆಟ್ಟಿದೆ’ ಎಂದು ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ನ್ಯಾಯಪೀಠ ದೆಹಲಿ ಸರ್ಕಾರ ಪ್ರತಿನಿಧಿಸಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಸಂಜಯ್ ಜೈನ್ ಅವರಿಗ ತಿಳಿಸಿತು.</p>.<p>ಕೋವಿಡ್ ಪರಿಸ್ಥಿತಿಯನ್ನು ನಿಯಂತ್ರಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎಲ್ಲ ರೀತಿಯ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕ ಹಾಗೂ ಸೋಂಕು ಹೆಚ್ಚಳವಾಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು ಎಂದು ಸೂಚಿಸಿತು.</p>.<p>ನ್ಯಾಯಮೂರ್ತಿಗಳಾದ ಆರ್.ಎಸ್.ರೆಡ್ಡಿ ಮತ್ತು ಎಂ.ಆರ್.ಶಾ ಅವರೂ ಪೀಠದಲ್ಲಿ ಇದ್ದರು.</p>.<p>ಕೋವಿಡ್ ಪೀಡಿತರಿಗೆ ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲ ಹಾಗೂ ಸೋಂಕಿನಿಂದ ಮೃತಪಟ್ಟವರಿಗೆ ಗೌರವಯುತ ಅಂತ್ಯಕ್ರಿಯೆ ಆಗುತ್ತಿಲ್ಲ ಎಂಬುದನ್ನು ಗಣನೆಗೆ ತೆಗೆದುಕೊಂಡ ನ್ಯಾಯಪೀಠ ವಿಚಾರಣೆಯನ್ನು ನವೆಂಬರ್ 27ಕ್ಕೆ ಮುಂದೂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>