<p><strong>ನವದೆಹಲಿ</strong>: ‘ಮೈತೇಯಿ ಮತ್ತು ಕುಕಿ ಬುಡಕಟ್ಟು ಸಮುದಾಯದ ನಡುವಣ ಹಿಂಸಾಚಾರದಿಂದ ನಲುಗಿರುವ ಮಣಿಪುರದಲ್ಲಿ ಮತ್ತಷ್ಟು ಹಿಂಸೆ ಉಲ್ಬಣಗೊಳಿಸಲು ನಮ್ಮನ್ನು ವೇದಿಕೆಯಾಗಿ ಬಳಸಿಕೊಳ್ಳಬೇಡಿ. ರಚನಾತ್ಮಕ ಸಲಹೆಗಳನ್ನಷ್ಟೇ ನ್ಯಾಯಾಲಯದ ಮುಂದೆ ಮಂಡಿಸಬೇಕು’ ಎಂದು ಸುಪ್ರೀಂ ಕೋರ್ಟ್ ಸೋಮವಾರ ತಾಕೀತು ಮಾಡಿದೆ.</p>.<p>ಕಣಿವೆ ರಾಜ್ಯದ ಪರಿಸ್ಥಿತಿಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಪಿ.ಎಸ್. ನರಸಿಂಹ ಅವರಿದ್ದ ವಿಭಾಗೀಯ ಪೀಠವು, ನ್ಯಾಯಾಲಯದ ಸಮಯವನ್ನು ವ್ಯರ್ಥಗೊಳಿಸಲು ಯತ್ನಿಸಿದ ಅರ್ಜಿದಾರರಿಗೆ ತಪರಾಕಿ ನೀಡಿತು.</p>.<p>ಮಣಿಪುರ ಬುಡಕಟ್ಟು ವೇದಿಕೆ, ಮಣಿಪುರ ಹೈಕೋರ್ಟ್ ಬಾರ್ ಅಸೋಸಿಯೇಷನ್ ಸೇರಿದಂತೆ ವಿವಿಧ ಸಂಘಟನೆಗಳು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಪೀಠವು, ಸಂಘರ್ಷ ನಿಯಂತ್ರಣಕ್ಕೆ ಪೂರಕವಾಗಿರುವ ಸಲಹೆಗಳನ್ನು ನೀಡುವಂತೆ ಹಾಜರಿದ್ದ ವಕೀಲರಿಗೆ ಸೂಚಿಸಿತು. ಬಳಿಕ ಮಂಗಳವಾರಕ್ಕೆ ವಿಚಾರಣೆಯನ್ನು ಮುಂದೂಡಿತು.</p>.<p>ಜನರ ರಕ್ಷಣೆ ಸರ್ಕಾರದ ಹೊಣೆ: ಹಿಂಸಾಚಾರ ನಿಯಂತ್ರಣಕ್ಕೆ ಸುಪ್ರೀಂ ಕೋರ್ಟ್ ಕಾನೂನು ಮತ್ತು ಸುವ್ಯವಸ್ಥೆಯನ್ನು ಕೈಗೆತ್ತಿಕೊಳ್ಳುವುದಿಲ್ಲ. ಅದು ಕೇಂದ್ರ ಮತ್ತು ಮಣಿಪುರ ಸರ್ಕಾರದ ಹೊಣೆಗಾರಿಕೆಯಾಗಿದೆ ಎಂದು ಪೀಠವು ಒತ್ತಿ ಹೇಳಿತು. </p>.<p>‘ಸಂಘರ್ಷ ತಡೆ ಮತ್ತು ಅಲ್ಲಿನ ಸಮಸ್ಯೆಗಳಿಗೆ ಸಂಬಂಧಿಸಿದಂತೆ ನಮ್ಮನ್ನು ಬಳಸಿಕೊಳ್ಳಬೇಡಿ. ನಾವು ಕಾನೂನನ್ನು ಕೈಗೆತ್ತಿಕೊಳ್ಳುವುದಿಲ್ಲ. ಸಂಘರ್ಷವು ಮಾನವೀಯ ನೆಲೆಗಟ್ಟಿನಲ್ಲಿ ಬಗೆಹರಿಸಬಹುದಾದ ವಿಷಯವಾಗಿದೆ. ಇದರ ಜವಾಬ್ದಾರಿಯನ್ನು ಸರ್ಕಾರಗಳೇ ಹೊರಬೇಕಿದೆ’ ಎಂದು ಪ್ರತಿಪಾದಿಸಿತು. </p>.<p>‘ರಾಜ್ಯದಲ್ಲಿ ಎಲ್ಲರೂ ಕುಕಿ ಬುಡಕಟ್ಟು ಜನರ ವಿರುದ್ಧವಾಗಿದ್ದಾರೆ’ ಎಂಬ ಮಣಿಪುರ ಬುಡಕಟ್ಟು ವೇದಿಕೆ ಪರ ಹಾಜರಿದ್ದ ಹಿರಿಯ ವಕೀಲ ಕಾಲಿನ್ ಗೊನ್ಸಾಲ್ವಿಸ್ ಅವರ ವಾದಕ್ಕೆ ಅರ್ಧದಲ್ಲೇ ತಡೆ ಹಾಕಿದ ಪೀಠವು, ‘ನಿಮ್ಮ ಈ ಶಂಕಾಸ್ಪದ ಮಾಹಿತಿಯಿಂದ ನಾವು ಕಾನೂನು ಕೈಗೆತ್ತಿಕೊಳ್ಳಲು ಆಗುವುದಿಲ್ಲ’ ಎಂದು ಚಾಟಿ ಬೀಸಿತು.</p>.<p>ಮಣಿಪುರ ಸರ್ಕಾರದ ಪರ ಹಾಜರಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ‘ಕೇಂದ್ರ ಮತ್ತು ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳಿಂದ ಸಂಘರ್ಷ ನಿಯಂತ್ರಣಕ್ಕೆ ಬರುತ್ತಿದೆ’ ಎಂದು ತಿಳಿಸಿದರು.</p>.<p>ಸಂಘರ್ಷ ಪೀಡಿತ ನೆಲಕ್ಕೆ ರಾಷ್ಟ್ರೀಯ ಹೆದ್ದಾರಿ ಮೂಲಕವೇ ಅಗತ್ಯ ವಸ್ತುಗಳ ಪೂರೈಕೆಯಾಗಬೇಕಿದೆ. ಹಾಗಾಗಿ, ಹೆದ್ದಾರಿಯಲ್ಲಿ ಯಾವುದೇ ಅಡೆತಡೆ, ಪ್ರತಿಭಟನೆಗಳು ನಡೆಯದಂತೆ ಕಡಿವಾಣ ಹಾಕಬೇಕಿದೆ ಎಂದು ಬಾರ್ ಅಸೋಸಿಯೇಷನ್ ನೀಡಿದ ಸಲಹೆಯನ್ನು ಪೀಠವು ಪುರಸ್ಕರಿಸಿತು.</p>.<p><strong>ಜನರ ರಕ್ಷಣೆಗೆ ಕ್ರಮ</strong>: ಬುಡಕಟ್ಟು ಜನರು ಸೇರಿದಂತೆ ಎಲ್ಲಾ ಜಾತಿ, ಧರ್ಮದವರ ಹಕ್ಕುಗಳ ರಕ್ಷಣೆ ಮತ್ತು ಭದ್ರತೆಗೆ ಸರ್ಕಾರ ಅಗತ್ಯ ಕ್ರಮಕೈಗೊಂಡಿದೆ ಎಂದು ಮಣಿಪುರ ಸರ್ಕಾರ ಸುಪ್ರೀಂ ಕೋರ್ಟ್ಗೆ ವರದಿ ಸಲ್ಲಿಸಿದೆ.</p>.<p>ಒಟ್ಟು 5,995 ಎಫ್ಐಆರ್ ದಾಖಲಾಗಿವೆ. ಆರು ಪ್ರಮುಖ ಪ್ರಕರಣಗಳ ತನಿಖೆಯ ಹೊಣೆಯನ್ನು ಸಿಬಿಐಗೆ ವರ್ಗಾಯಿಸಲಾಗಿದೆ ಎಂದು ರಾಜ್ಯ ಮುಖ್ಯ ಕಾರ್ಯದರ್ಶಿ ಸಲ್ಲಿಸಿರುವ ವರದಿಯಲ್ಲಿ ಹೇಳಲಾಗಿದೆ.</p>.<p><strong>ಗುಂಡಿನ ದಾಳಿ: ಯುವಕ ಸಾವು</strong></p>.<p>ಗುವಾಹಟಿ: ಮಣಿಪುರದ ಇಂಫಾಲ್ ಪೂರ್ವ ಮತ್ತು ಕಾಂಗ್ಪೋಕ್ಪಿ ಜಿಲ್ಲೆಯ ಗಡಿ ಭಾಗಕ್ಕೆ ಹೊಂದಿಕೊಂಡಿರುವ ಹಳ್ಳಿಯಲ್ಲಿ ಸೋಮವಾರ ಅಪರಿಚಿತ ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಗೆ ಯುವಕ ಮೃತಪಟ್ಟಿದ್ದು, ಹತ್ತು ಮಂದಿ ಗಾಯಗೊಂಡಿದ್ದಾರೆ.</p>.<p>ಸೈಖೋಮ್ ಸುಬಾನ್ ಸಿಂಗ್(26) ಎಂಬುವರು ಮೃತಪಟ್ಟಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಭದ್ರತಾ ಪಡೆ ಮೂಲಗಳು ತಿಳಿಸಿವೆ.</p>.<p>ಅಸ್ಸಾಂ ರೈಫಲ್ ಪಡೆಯು ಹೆಚ್ಚಿನ ಅನಾಹುತ ಸಂಭವಿಸದಂತೆ ಮುಂಜಾಗ್ರತಾ ಕ್ರಮಕೈಗೊಂಡಿದೆ. ಇಂಫಾಲ್ ಪೂರ್ವ, ಕಾಂಗ್ಪೋಕ್ಪಿ ಹಾಗೂ ಚುರಚಂದಪುರ ಜಿಲ್ಲೆಯಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ ಎಂದು ತಿಳಿಸಿವೆ. </p>.<p>ಹಲವು ಹಳ್ಳಿಗಳಲ್ಲಿ ಮೈತೇಯಿ ಮತ್ತು ಕುಕಿ ಸಮುದಾಯದವರು ಗುಂಡಿನ ದಾಳಿಯಿಂದ ರಕ್ಷಿಸಿಕೊಳ್ಳಲು ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಬಂಕರ್ಗಳನ್ನು ಯೋಧರು ತೆರವುಗೊಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ಮೈತೇಯಿ ಮತ್ತು ಕುಕಿ ಬುಡಕಟ್ಟು ಸಮುದಾಯದ ನಡುವಣ ಹಿಂಸಾಚಾರದಿಂದ ನಲುಗಿರುವ ಮಣಿಪುರದಲ್ಲಿ ಮತ್ತಷ್ಟು ಹಿಂಸೆ ಉಲ್ಬಣಗೊಳಿಸಲು ನಮ್ಮನ್ನು ವೇದಿಕೆಯಾಗಿ ಬಳಸಿಕೊಳ್ಳಬೇಡಿ. ರಚನಾತ್ಮಕ ಸಲಹೆಗಳನ್ನಷ್ಟೇ ನ್ಯಾಯಾಲಯದ ಮುಂದೆ ಮಂಡಿಸಬೇಕು’ ಎಂದು ಸುಪ್ರೀಂ ಕೋರ್ಟ್ ಸೋಮವಾರ ತಾಕೀತು ಮಾಡಿದೆ.</p>.<p>ಕಣಿವೆ ರಾಜ್ಯದ ಪರಿಸ್ಥಿತಿಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಪಿ.ಎಸ್. ನರಸಿಂಹ ಅವರಿದ್ದ ವಿಭಾಗೀಯ ಪೀಠವು, ನ್ಯಾಯಾಲಯದ ಸಮಯವನ್ನು ವ್ಯರ್ಥಗೊಳಿಸಲು ಯತ್ನಿಸಿದ ಅರ್ಜಿದಾರರಿಗೆ ತಪರಾಕಿ ನೀಡಿತು.</p>.<p>ಮಣಿಪುರ ಬುಡಕಟ್ಟು ವೇದಿಕೆ, ಮಣಿಪುರ ಹೈಕೋರ್ಟ್ ಬಾರ್ ಅಸೋಸಿಯೇಷನ್ ಸೇರಿದಂತೆ ವಿವಿಧ ಸಂಘಟನೆಗಳು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಪೀಠವು, ಸಂಘರ್ಷ ನಿಯಂತ್ರಣಕ್ಕೆ ಪೂರಕವಾಗಿರುವ ಸಲಹೆಗಳನ್ನು ನೀಡುವಂತೆ ಹಾಜರಿದ್ದ ವಕೀಲರಿಗೆ ಸೂಚಿಸಿತು. ಬಳಿಕ ಮಂಗಳವಾರಕ್ಕೆ ವಿಚಾರಣೆಯನ್ನು ಮುಂದೂಡಿತು.</p>.<p>ಜನರ ರಕ್ಷಣೆ ಸರ್ಕಾರದ ಹೊಣೆ: ಹಿಂಸಾಚಾರ ನಿಯಂತ್ರಣಕ್ಕೆ ಸುಪ್ರೀಂ ಕೋರ್ಟ್ ಕಾನೂನು ಮತ್ತು ಸುವ್ಯವಸ್ಥೆಯನ್ನು ಕೈಗೆತ್ತಿಕೊಳ್ಳುವುದಿಲ್ಲ. ಅದು ಕೇಂದ್ರ ಮತ್ತು ಮಣಿಪುರ ಸರ್ಕಾರದ ಹೊಣೆಗಾರಿಕೆಯಾಗಿದೆ ಎಂದು ಪೀಠವು ಒತ್ತಿ ಹೇಳಿತು. </p>.<p>‘ಸಂಘರ್ಷ ತಡೆ ಮತ್ತು ಅಲ್ಲಿನ ಸಮಸ್ಯೆಗಳಿಗೆ ಸಂಬಂಧಿಸಿದಂತೆ ನಮ್ಮನ್ನು ಬಳಸಿಕೊಳ್ಳಬೇಡಿ. ನಾವು ಕಾನೂನನ್ನು ಕೈಗೆತ್ತಿಕೊಳ್ಳುವುದಿಲ್ಲ. ಸಂಘರ್ಷವು ಮಾನವೀಯ ನೆಲೆಗಟ್ಟಿನಲ್ಲಿ ಬಗೆಹರಿಸಬಹುದಾದ ವಿಷಯವಾಗಿದೆ. ಇದರ ಜವಾಬ್ದಾರಿಯನ್ನು ಸರ್ಕಾರಗಳೇ ಹೊರಬೇಕಿದೆ’ ಎಂದು ಪ್ರತಿಪಾದಿಸಿತು. </p>.<p>‘ರಾಜ್ಯದಲ್ಲಿ ಎಲ್ಲರೂ ಕುಕಿ ಬುಡಕಟ್ಟು ಜನರ ವಿರುದ್ಧವಾಗಿದ್ದಾರೆ’ ಎಂಬ ಮಣಿಪುರ ಬುಡಕಟ್ಟು ವೇದಿಕೆ ಪರ ಹಾಜರಿದ್ದ ಹಿರಿಯ ವಕೀಲ ಕಾಲಿನ್ ಗೊನ್ಸಾಲ್ವಿಸ್ ಅವರ ವಾದಕ್ಕೆ ಅರ್ಧದಲ್ಲೇ ತಡೆ ಹಾಕಿದ ಪೀಠವು, ‘ನಿಮ್ಮ ಈ ಶಂಕಾಸ್ಪದ ಮಾಹಿತಿಯಿಂದ ನಾವು ಕಾನೂನು ಕೈಗೆತ್ತಿಕೊಳ್ಳಲು ಆಗುವುದಿಲ್ಲ’ ಎಂದು ಚಾಟಿ ಬೀಸಿತು.</p>.<p>ಮಣಿಪುರ ಸರ್ಕಾರದ ಪರ ಹಾಜರಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ‘ಕೇಂದ್ರ ಮತ್ತು ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳಿಂದ ಸಂಘರ್ಷ ನಿಯಂತ್ರಣಕ್ಕೆ ಬರುತ್ತಿದೆ’ ಎಂದು ತಿಳಿಸಿದರು.</p>.<p>ಸಂಘರ್ಷ ಪೀಡಿತ ನೆಲಕ್ಕೆ ರಾಷ್ಟ್ರೀಯ ಹೆದ್ದಾರಿ ಮೂಲಕವೇ ಅಗತ್ಯ ವಸ್ತುಗಳ ಪೂರೈಕೆಯಾಗಬೇಕಿದೆ. ಹಾಗಾಗಿ, ಹೆದ್ದಾರಿಯಲ್ಲಿ ಯಾವುದೇ ಅಡೆತಡೆ, ಪ್ರತಿಭಟನೆಗಳು ನಡೆಯದಂತೆ ಕಡಿವಾಣ ಹಾಕಬೇಕಿದೆ ಎಂದು ಬಾರ್ ಅಸೋಸಿಯೇಷನ್ ನೀಡಿದ ಸಲಹೆಯನ್ನು ಪೀಠವು ಪುರಸ್ಕರಿಸಿತು.</p>.<p><strong>ಜನರ ರಕ್ಷಣೆಗೆ ಕ್ರಮ</strong>: ಬುಡಕಟ್ಟು ಜನರು ಸೇರಿದಂತೆ ಎಲ್ಲಾ ಜಾತಿ, ಧರ್ಮದವರ ಹಕ್ಕುಗಳ ರಕ್ಷಣೆ ಮತ್ತು ಭದ್ರತೆಗೆ ಸರ್ಕಾರ ಅಗತ್ಯ ಕ್ರಮಕೈಗೊಂಡಿದೆ ಎಂದು ಮಣಿಪುರ ಸರ್ಕಾರ ಸುಪ್ರೀಂ ಕೋರ್ಟ್ಗೆ ವರದಿ ಸಲ್ಲಿಸಿದೆ.</p>.<p>ಒಟ್ಟು 5,995 ಎಫ್ಐಆರ್ ದಾಖಲಾಗಿವೆ. ಆರು ಪ್ರಮುಖ ಪ್ರಕರಣಗಳ ತನಿಖೆಯ ಹೊಣೆಯನ್ನು ಸಿಬಿಐಗೆ ವರ್ಗಾಯಿಸಲಾಗಿದೆ ಎಂದು ರಾಜ್ಯ ಮುಖ್ಯ ಕಾರ್ಯದರ್ಶಿ ಸಲ್ಲಿಸಿರುವ ವರದಿಯಲ್ಲಿ ಹೇಳಲಾಗಿದೆ.</p>.<p><strong>ಗುಂಡಿನ ದಾಳಿ: ಯುವಕ ಸಾವು</strong></p>.<p>ಗುವಾಹಟಿ: ಮಣಿಪುರದ ಇಂಫಾಲ್ ಪೂರ್ವ ಮತ್ತು ಕಾಂಗ್ಪೋಕ್ಪಿ ಜಿಲ್ಲೆಯ ಗಡಿ ಭಾಗಕ್ಕೆ ಹೊಂದಿಕೊಂಡಿರುವ ಹಳ್ಳಿಯಲ್ಲಿ ಸೋಮವಾರ ಅಪರಿಚಿತ ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಗೆ ಯುವಕ ಮೃತಪಟ್ಟಿದ್ದು, ಹತ್ತು ಮಂದಿ ಗಾಯಗೊಂಡಿದ್ದಾರೆ.</p>.<p>ಸೈಖೋಮ್ ಸುಬಾನ್ ಸಿಂಗ್(26) ಎಂಬುವರು ಮೃತಪಟ್ಟಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಭದ್ರತಾ ಪಡೆ ಮೂಲಗಳು ತಿಳಿಸಿವೆ.</p>.<p>ಅಸ್ಸಾಂ ರೈಫಲ್ ಪಡೆಯು ಹೆಚ್ಚಿನ ಅನಾಹುತ ಸಂಭವಿಸದಂತೆ ಮುಂಜಾಗ್ರತಾ ಕ್ರಮಕೈಗೊಂಡಿದೆ. ಇಂಫಾಲ್ ಪೂರ್ವ, ಕಾಂಗ್ಪೋಕ್ಪಿ ಹಾಗೂ ಚುರಚಂದಪುರ ಜಿಲ್ಲೆಯಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ ಎಂದು ತಿಳಿಸಿವೆ. </p>.<p>ಹಲವು ಹಳ್ಳಿಗಳಲ್ಲಿ ಮೈತೇಯಿ ಮತ್ತು ಕುಕಿ ಸಮುದಾಯದವರು ಗುಂಡಿನ ದಾಳಿಯಿಂದ ರಕ್ಷಿಸಿಕೊಳ್ಳಲು ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಬಂಕರ್ಗಳನ್ನು ಯೋಧರು ತೆರವುಗೊಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>