<p><strong>ನವದೆಹಲಿ</strong>: ಕಾರ್ಯಾಂಗ ಮತ್ತು ಪ್ರಧಾನಿ ಮಾತ್ರವೇ ಮಹಾಲೇಖಪಾಲರನ್ನು (ಸಿಎಜಿ) ನೇಮಕ ಮಾಡುವ ಈಗಿನ ವ್ಯವಸ್ಥೆಯು ಸಂವಿಧಾನದ ಉಲ್ಲಂಘನೆ ಎಂದು ಘೋಷಿಸಬೇಕು ಎಂಬ ಕೋರಿಕೆ ಇರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ (ಪಿಐಎಲ್) ಪ್ರತಿಕ್ರಿಯೆ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.</p>.<p>ಸೆಂಟರ್ ಫಾರ್ ಪಬ್ಲಿಕ್ ಇಂಟರೆಸ್ಟ್ ಲಿಟಿಗೇಷನ್ ಹೆಸರಿನ ಸರ್ಕಾರೇತರ ಸಂಘಟನೆಯೊಂದು ಈ ಪಿಐಎಲ್ ಸಲ್ಲಿಸಿದೆ. ಈ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಎನ್. ಕೋಟೀಶ್ವರ ಸಿಂಗ್ ಅವರು ಇರುವ ವಿಭಾಗೀಯ ಪೀಠವು ಇದೇ ವಿಚಾರವಾಗಿ ವಿಚಾರಣೆಯ ಹಂತದಲ್ಲಿ ಇರುವ ಇನ್ನೊಂದು ಅರ್ಜಿಯೊಂದಿಗೆ ಜೋಡಿಸಿದೆ.</p>.<p>ಎನ್ಜಿಒ ಪರವಾಗಿ ಹಾಜರಿದ್ದ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರು, ಇಲ್ಲಿ ಇರುವ ಪ್ರಶ್ನೆ ಮಹಾಲೇಖಪಾಲ ಸಂಸ್ಥೆಯ ಸ್ವಾತಂತ್ರ್ಯಕ್ಕೆ ಸಂಬಂಧಿಸಿದೆ ಎಂದರು. ಬಿಜೆಪಿಯು ಆಡಳಿತದಲ್ಲಿ ಇರುವ ಮಹಾರಾಷ್ಟ್ರದಂತಹ ರಾಜ್ಯಗಳಲ್ಲಿ ಲೆಕ್ಕಪರಿಶೋಧನೆಯನ್ನು ತಡೆಯಲಾಗುತ್ತಿದೆ ಎಂದು ದೂರಿದರು.</p>.<p class="title">ಪ್ರಧಾನಿ, ಲೋಕಸಭೆಯ ವಿರೋಧ ಪಕ್ಷದ ನಾಯಕ, ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಇರುವ ಸ್ವತಂತ್ರ ಹಾಗೂ ತಟಸ್ಥ ಸಮಿತಿಯ ಜೊತೆ ಸಮಾಲೋಚನೆ ನಡೆಸಿ ರಾಷ್ಟ್ರಪತಿಯವರು ಮಹಾಲೇಖಪಾಲರನ್ನು ನೇಮಕ ಮಾಡುವ ವ್ಯವಸ್ಥೆ ಜಾರಿಗೆ ಬರಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕಾರ್ಯಾಂಗ ಮತ್ತು ಪ್ರಧಾನಿ ಮಾತ್ರವೇ ಮಹಾಲೇಖಪಾಲರನ್ನು (ಸಿಎಜಿ) ನೇಮಕ ಮಾಡುವ ಈಗಿನ ವ್ಯವಸ್ಥೆಯು ಸಂವಿಧಾನದ ಉಲ್ಲಂಘನೆ ಎಂದು ಘೋಷಿಸಬೇಕು ಎಂಬ ಕೋರಿಕೆ ಇರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ (ಪಿಐಎಲ್) ಪ್ರತಿಕ್ರಿಯೆ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.</p>.<p>ಸೆಂಟರ್ ಫಾರ್ ಪಬ್ಲಿಕ್ ಇಂಟರೆಸ್ಟ್ ಲಿಟಿಗೇಷನ್ ಹೆಸರಿನ ಸರ್ಕಾರೇತರ ಸಂಘಟನೆಯೊಂದು ಈ ಪಿಐಎಲ್ ಸಲ್ಲಿಸಿದೆ. ಈ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಎನ್. ಕೋಟೀಶ್ವರ ಸಿಂಗ್ ಅವರು ಇರುವ ವಿಭಾಗೀಯ ಪೀಠವು ಇದೇ ವಿಚಾರವಾಗಿ ವಿಚಾರಣೆಯ ಹಂತದಲ್ಲಿ ಇರುವ ಇನ್ನೊಂದು ಅರ್ಜಿಯೊಂದಿಗೆ ಜೋಡಿಸಿದೆ.</p>.<p>ಎನ್ಜಿಒ ಪರವಾಗಿ ಹಾಜರಿದ್ದ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರು, ಇಲ್ಲಿ ಇರುವ ಪ್ರಶ್ನೆ ಮಹಾಲೇಖಪಾಲ ಸಂಸ್ಥೆಯ ಸ್ವಾತಂತ್ರ್ಯಕ್ಕೆ ಸಂಬಂಧಿಸಿದೆ ಎಂದರು. ಬಿಜೆಪಿಯು ಆಡಳಿತದಲ್ಲಿ ಇರುವ ಮಹಾರಾಷ್ಟ್ರದಂತಹ ರಾಜ್ಯಗಳಲ್ಲಿ ಲೆಕ್ಕಪರಿಶೋಧನೆಯನ್ನು ತಡೆಯಲಾಗುತ್ತಿದೆ ಎಂದು ದೂರಿದರು.</p>.<p class="title">ಪ್ರಧಾನಿ, ಲೋಕಸಭೆಯ ವಿರೋಧ ಪಕ್ಷದ ನಾಯಕ, ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಇರುವ ಸ್ವತಂತ್ರ ಹಾಗೂ ತಟಸ್ಥ ಸಮಿತಿಯ ಜೊತೆ ಸಮಾಲೋಚನೆ ನಡೆಸಿ ರಾಷ್ಟ್ರಪತಿಯವರು ಮಹಾಲೇಖಪಾಲರನ್ನು ನೇಮಕ ಮಾಡುವ ವ್ಯವಸ್ಥೆ ಜಾರಿಗೆ ಬರಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>