<p><strong>ನವದೆಹಲಿ</strong>: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮೂರನೇ ಒಂದರಷ್ಟು ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಡುವ 2023ರ ‘ನಾರಿ ಶಕ್ತಿ ವಂದನ ಕಾಯ್ದೆ’ಯನ್ನು ಜಾರಿಗೆ ತರುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ಪರಿಶೀಲನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರ ಸರ್ಕಾರದ ಪ್ರತಿಕ್ರಿಯೆ ಕೋರಿದೆ.</p>.<p>ಮಹಿಳೆಯರು ದೇಶದಲ್ಲಿ ಅತಿದೊಡ್ಡ ಅಲ್ಪಸಂಖ್ಯಾತರು ಎಂಬುದನ್ನು ಗಮನಿಸಿದ ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಆರ್. ಮಹಾದೇವನ್ ಅವರ ಪೀಠವು ಕೇಂದ್ರಕ್ಕೆ ನೋಟಿಸ್ ಜಾರಿ ಮಾಡಿದೆ.</p>.<p>‘ದೇಶದ ಎಲ್ಲಾ ನಾಗರಿಕರು ರಾಜಕೀಯ ಮತ್ತು ಸಾಮಾಜಿಕವಾಗಿ ಸಮಾನತೆಗೆ ಅರ್ಹರು ಎಂದು ಸಂವಿಧಾನದ ಪೀಠಿಕೆ ಹೇಳುತ್ತದೆ. ಈ ದೇಶದಲ್ಲಿ ಅತಿದೊಡ್ಡ ಅಲ್ಪಸಂಖ್ಯಾತರು ಯಾರು? ಒಟ್ಟು ಜನಸಂಖ್ಯೆಯಲ್ಲಿ ಶೇ 48ರಷ್ಟಿರುವ ಮಹಿಳೆಯರು ಎಂಬುದರಲ್ಲಿ ಯಾವುದೇ ಅನುಮಾನ ಬೇಡ. ಇದು ಮಹಿಳೆಯರ ರಾಜಕೀಯ ಸಮಾನತೆಗೆ ಸಂಬಂಧಿಸಿದ ವಿಷಯ’ ಎಂದು ನ್ಯಾಯಮೂರ್ತಿ ನಾಗರತ್ನ ಹೇಳಿದರು.</p>.<p>ಅರ್ಜಿದಾರರಾದ ಜಯಾ ಠಾಕೂರ್ ಪರ ಹಾಜರಾದ ಹಿರಿಯ ವಕೀಲೆ ಶೋಭಾ ಗುಪ್ತಾ, ‘ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳು ಕಳೆದರೂ ಮಹಿಳೆಯರು ತಮ್ಮ ಪ್ರಾತಿನಿಧ್ಯಕ್ಕಾಗಿ ನ್ಯಾಯಾಲಯದ ಮೊರೆಹೋಗಬೇಕಾಗಿರುವುದು ದುರದೃಷ್ಟಕರ’ ಎಂದರು.</p>.<p>ದತ್ತಾಂಶಗಳ ಆಧಾರದ ಮೇಲೆ ಲೋಕಸಭೆ ಮತ್ತು ರಾಜ್ಯ ಶಾಸನಸಭೆಗಳಲ್ಲಿನ ಒಟ್ಟು ಸ್ಥಾನಗಳಲ್ಲಿ ಮೂರನೇ ಒಂದು ಭಾಗವನ್ನು ಮಹಿಳೆಯರಿಗೆ ಮೀಸಲಿಡಲಾಗಿದೆ ಎಂದು ಅವರು ವಾದಿಸಿದರು.</p>.<p>ಕಾನೂನನ್ನು ಜಾರಿಗೊಳಿಸುವುದು ಕಾರ್ಯಾಂಗದ ವಿಶೇಷಾಧಿಕಾರವಾಗಿದ್ದು, ಈ ವಿಷಯಲ್ಲಿ ಯಾವುದೇ ಆದೇಶ ಹೊರಡಿಸಲಾಗುವುದಿಲ್ಲ ಎಂದು ಪೀಠ ಹೇಳಿತು. ‘ಇಂತಹ ವಿಷಯಗಳಲ್ಲಿ ಮಧ್ಯಪ್ರವೇಶಿಸುವಾಗ ನ್ಯಾಯಾಲಯಗಳಿಗೆ ಇತಿಮಿತಿಗಳಿವೆ’ ಎಂದು ನ್ಯಾಯಮೂರ್ತಿ ನಾಗರತ್ನ ಹೇಳಿದರು.</p>.<p>‘ನಾರಿ ಶಕ್ತಿ ವಂದನ ಮಸೂದೆ’ಗೆ 2023ರ ಸೆಪ್ಟೆಂಬರ್ 21ರಂದು ಸಂಸತ್ತಿನ ಅಂಗೀಕಾರ ಲಭಿಸಿತ್ತು. ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ಲೋಕಸಭೆಯಲ್ಲಿ ಬಹುತೇಕ ಸರ್ವಾನುಮತದಿಂದ ಹಾಗೂ ರಾಜ್ಯಸಭೆಯಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಗಿತ್ತು. 2023ರ ಸೆಪ್ಟೆಂಬರ್ 28ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಮಸೂದೆಗೆ ಒಪ್ಪಿಗೆ ನೀಡಿದ್ದರು. ಈ ಕಾಯ್ದೆಯು ಲೋಕಸಭೆ ಹಾಗೂ ವಿಧಾನಸಭಾ ಕ್ಷೇತ್ರಗಳಲ್ಲಿ ಶೇಕಡ 33ರಷ್ಟನ್ನು ಮಹಿಳೆಯರಿಗೆ ಮೀಸಲಾಗಿ ಇರಿಸುತ್ತದೆ.</p>.<p>ಲೋಕಸಭೆಗೆ 2029ರಲ್ಲಿ ನಡೆಯಲಿರುವ ಚುನಾವಣೆಗೂ ಮುನ್ನ ಈ ಕಾಯ್ದೆ ಜಾರಿಗೆ ಬರುವ ಸಾಧ್ಯತೆ ಇಲ್ಲ. ಕಾಯ್ದೆಯು ಜಾರಿಗೆ ಬರಬೇಕು ಎಂದಾದರೆ ಕ್ಷೇತ್ರಗಳ ಪುನರ್ ವಿಂಗಡಣೆ ಆಗಬೇಕು ಎಂದು ಕಾಯ್ದೆಯಲ್ಲಿ ಹೇಳಲಾಗಿದೆ. ಪುನರ್ ವಿಂಗಡಣೆಗೆ ಕಾಯದೆಯೇ ಕಾಯ್ದೆ ಜಾರಿಗೊಳಿಸಬೇಕು ಎಂದು ಜಯಾ ಠಾಕೂರ್ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮೂರನೇ ಒಂದರಷ್ಟು ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಡುವ 2023ರ ‘ನಾರಿ ಶಕ್ತಿ ವಂದನ ಕಾಯ್ದೆ’ಯನ್ನು ಜಾರಿಗೆ ತರುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ಪರಿಶೀಲನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರ ಸರ್ಕಾರದ ಪ್ರತಿಕ್ರಿಯೆ ಕೋರಿದೆ.</p>.<p>ಮಹಿಳೆಯರು ದೇಶದಲ್ಲಿ ಅತಿದೊಡ್ಡ ಅಲ್ಪಸಂಖ್ಯಾತರು ಎಂಬುದನ್ನು ಗಮನಿಸಿದ ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಆರ್. ಮಹಾದೇವನ್ ಅವರ ಪೀಠವು ಕೇಂದ್ರಕ್ಕೆ ನೋಟಿಸ್ ಜಾರಿ ಮಾಡಿದೆ.</p>.<p>‘ದೇಶದ ಎಲ್ಲಾ ನಾಗರಿಕರು ರಾಜಕೀಯ ಮತ್ತು ಸಾಮಾಜಿಕವಾಗಿ ಸಮಾನತೆಗೆ ಅರ್ಹರು ಎಂದು ಸಂವಿಧಾನದ ಪೀಠಿಕೆ ಹೇಳುತ್ತದೆ. ಈ ದೇಶದಲ್ಲಿ ಅತಿದೊಡ್ಡ ಅಲ್ಪಸಂಖ್ಯಾತರು ಯಾರು? ಒಟ್ಟು ಜನಸಂಖ್ಯೆಯಲ್ಲಿ ಶೇ 48ರಷ್ಟಿರುವ ಮಹಿಳೆಯರು ಎಂಬುದರಲ್ಲಿ ಯಾವುದೇ ಅನುಮಾನ ಬೇಡ. ಇದು ಮಹಿಳೆಯರ ರಾಜಕೀಯ ಸಮಾನತೆಗೆ ಸಂಬಂಧಿಸಿದ ವಿಷಯ’ ಎಂದು ನ್ಯಾಯಮೂರ್ತಿ ನಾಗರತ್ನ ಹೇಳಿದರು.</p>.<p>ಅರ್ಜಿದಾರರಾದ ಜಯಾ ಠಾಕೂರ್ ಪರ ಹಾಜರಾದ ಹಿರಿಯ ವಕೀಲೆ ಶೋಭಾ ಗುಪ್ತಾ, ‘ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳು ಕಳೆದರೂ ಮಹಿಳೆಯರು ತಮ್ಮ ಪ್ರಾತಿನಿಧ್ಯಕ್ಕಾಗಿ ನ್ಯಾಯಾಲಯದ ಮೊರೆಹೋಗಬೇಕಾಗಿರುವುದು ದುರದೃಷ್ಟಕರ’ ಎಂದರು.</p>.<p>ದತ್ತಾಂಶಗಳ ಆಧಾರದ ಮೇಲೆ ಲೋಕಸಭೆ ಮತ್ತು ರಾಜ್ಯ ಶಾಸನಸಭೆಗಳಲ್ಲಿನ ಒಟ್ಟು ಸ್ಥಾನಗಳಲ್ಲಿ ಮೂರನೇ ಒಂದು ಭಾಗವನ್ನು ಮಹಿಳೆಯರಿಗೆ ಮೀಸಲಿಡಲಾಗಿದೆ ಎಂದು ಅವರು ವಾದಿಸಿದರು.</p>.<p>ಕಾನೂನನ್ನು ಜಾರಿಗೊಳಿಸುವುದು ಕಾರ್ಯಾಂಗದ ವಿಶೇಷಾಧಿಕಾರವಾಗಿದ್ದು, ಈ ವಿಷಯಲ್ಲಿ ಯಾವುದೇ ಆದೇಶ ಹೊರಡಿಸಲಾಗುವುದಿಲ್ಲ ಎಂದು ಪೀಠ ಹೇಳಿತು. ‘ಇಂತಹ ವಿಷಯಗಳಲ್ಲಿ ಮಧ್ಯಪ್ರವೇಶಿಸುವಾಗ ನ್ಯಾಯಾಲಯಗಳಿಗೆ ಇತಿಮಿತಿಗಳಿವೆ’ ಎಂದು ನ್ಯಾಯಮೂರ್ತಿ ನಾಗರತ್ನ ಹೇಳಿದರು.</p>.<p>‘ನಾರಿ ಶಕ್ತಿ ವಂದನ ಮಸೂದೆ’ಗೆ 2023ರ ಸೆಪ್ಟೆಂಬರ್ 21ರಂದು ಸಂಸತ್ತಿನ ಅಂಗೀಕಾರ ಲಭಿಸಿತ್ತು. ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ಲೋಕಸಭೆಯಲ್ಲಿ ಬಹುತೇಕ ಸರ್ವಾನುಮತದಿಂದ ಹಾಗೂ ರಾಜ್ಯಸಭೆಯಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಗಿತ್ತು. 2023ರ ಸೆಪ್ಟೆಂಬರ್ 28ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಮಸೂದೆಗೆ ಒಪ್ಪಿಗೆ ನೀಡಿದ್ದರು. ಈ ಕಾಯ್ದೆಯು ಲೋಕಸಭೆ ಹಾಗೂ ವಿಧಾನಸಭಾ ಕ್ಷೇತ್ರಗಳಲ್ಲಿ ಶೇಕಡ 33ರಷ್ಟನ್ನು ಮಹಿಳೆಯರಿಗೆ ಮೀಸಲಾಗಿ ಇರಿಸುತ್ತದೆ.</p>.<p>ಲೋಕಸಭೆಗೆ 2029ರಲ್ಲಿ ನಡೆಯಲಿರುವ ಚುನಾವಣೆಗೂ ಮುನ್ನ ಈ ಕಾಯ್ದೆ ಜಾರಿಗೆ ಬರುವ ಸಾಧ್ಯತೆ ಇಲ್ಲ. ಕಾಯ್ದೆಯು ಜಾರಿಗೆ ಬರಬೇಕು ಎಂದಾದರೆ ಕ್ಷೇತ್ರಗಳ ಪುನರ್ ವಿಂಗಡಣೆ ಆಗಬೇಕು ಎಂದು ಕಾಯ್ದೆಯಲ್ಲಿ ಹೇಳಲಾಗಿದೆ. ಪುನರ್ ವಿಂಗಡಣೆಗೆ ಕಾಯದೆಯೇ ಕಾಯ್ದೆ ಜಾರಿಗೊಳಿಸಬೇಕು ಎಂದು ಜಯಾ ಠಾಕೂರ್ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>