ಕೊರೊನಾ ವೈರಸ್ನಿಂದ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ವಿಕೋಪ ನಿರ್ವಹಣೆ ನೀತಿ, 2005ರ ಅಡಿ ಕೇಂದ್ರ ಮತ್ತು ರಾಜ್ಯ ಸರಕಾರ ₹4 ಲಕ್ಷ ಪರಿಹಾರವನ್ನು ಒದಗಿಸಬೇಕು ಮತ್ತು ಮರಣ ಪ್ರಮಾಣ ಪತ್ರ ಒದಗಿಸುವ ವೇಳೆ ಏಕನೀತಿಯನ್ನು ಅನುಸರಿಸಬೇಕು ಎಂದು ಕೋರಿ ಸಲ್ಲಿಕೆಯಾದ ಎರಡು ಪ್ರತ್ಯೇಕ ಅರ್ಜಿಗಳಿಗೆ ಸಂಬಂಧಿಸಿ ಕೇಂದ್ರ ಸರಕಾರ ಪ್ರತಿಕ್ರಿಯೆ ನೀಡಬೇಕು. ಒಂದು ವೇಳೆ ಸರಕಾರ ಪರಿಹಾರ ಒದಗಿಸಿದರೂ, ಏಕರೂಪ ನೀತಿ ಇಲ್ಲದಿದ್ದರೆ ಕೋವಿಡ್ನಿಂದ ಮೃತಪಟ್ಟ ವ್ಯಕ್ತಿಯ ಕುಟುಂಬದವರಿಗೆ ಪರಿಹಾರ ಮೊತ್ತವನ್ನು ಪಡೆಯಲು ಸಾಧ್ಯವಾಗುವುದಿಲ್ಲ ಎಂದು ನ್ಯಾಯಮೂರ್ತಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.