<p><strong>ನವದೆಹಲಿ:</strong> ಕಾರ್ಖಾನೆಗಳಿಗೆ ಕಬ್ಬು ಪೂರೈಸಿದ 14 ದಿನಗಳ ಒಳಗಾಗಿ ರೈತರಿಗೆ ಬಾಕಿ ಹಣ ಪಾವತಿಸುವ ವ್ಯವಸ್ಥೆಯನ್ನು ಜಾರಿಗೊಳಿಸಬೇಕು ಎಂಬ ಬೇಡಿಕೆ ಕುರಿತು ಪ್ರತಿಕ್ರಿಯೆ ಸಲ್ಲಿಸುವಂತೆ ಕೇಂದ್ರ ಸರ್ಕಾರ ಹಾಗೂ ಕಬ್ಬು ಬೆಳೆಯುವ 11 ರಾಜ್ಯಗಳಿಗೆ ಸುಪ್ರೀಂಕೋರ್ಟ್ ಬುಧವಾರ ನೋಟಿಸ್ ಜಾರಿ ಮಾಡಿತು.</p>.<p>ಮಹಾರಾಷ್ಟ್ರದ ಮಾಜಿ ಸಂಸದ ರಾಜು ಅಣ್ಣಾ ಶೆಟ್ಟಿ ಪರ ಹಿರಿಯ ವಕೀಲ ಆನಂದ್ ಗ್ರೋವರ್ ಈ ಸಂಬಂಧ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಮುಖ್ಯನ್ಯಾಯಮೂರ್ತಿ ಎನ್.ವಿ.ರಮಣ, ನ್ಯಾಯಮೂರ್ತಿ ಸೂರ್ಯಕಾಂತ್ ಅವರಿರುವ ನ್ಯಾಯಪೀಠ ಈ ಅರ್ಜಿ ವಿಚಾರಣೆ ನಡೆಸಿತು.</p>.<p>‘ಬೆಳೆಗಾರರು ಪೂರೈಕೆ ಮಾಡಿದ ಕಬ್ಬು ಕಾರ್ಖಾನೆಗಳಿಗೆ ತಲುಪಿದ 14 ದಿನಗಳ ಒಳಗಾಗಿ ರೈತರಿಗೆ ಬಾಕಿ ಹಣವನ್ನು ಪಾವತಿಸಬೇಕು ಎಂದು ಅಲಹಾಬಾದ್ ಹೈಕೋರ್ಟ್ ಈ ಹಿಂದೆ ನೀಡಿರುವ ತನ್ನ ತೀರ್ಪಿನಲ್ಲಿ ಹೇಳಿದೆ. ಹೀಗಾಗಿ, ಬಾಕಿ ಹಣ ಪಾವತಿಗೆ ವ್ಯವಸ್ಥೆಯೊಂದನ್ನು ಜಾರಿಗೊಳಿಸಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ.</p>.<p>‘ಹಲವು ರಾಜ್ಯಗಳು ರೈತರಿಗೆ ಭಾರಿ ಮೊತ್ತದ ಬಾಕಿ ಉಳಿಸಿಕೊಂಡಿವೆ’ ಎಂದೂ ವಕೀಲ ಗ್ರೋವರ್ ಅವರು ನ್ಯಾಯಪೀಠದ ಗಮನಕ್ಕೆ ತಂದರು.</p>.<p>ಕೇಂದ್ರ ಹಾಗೂ ಕರ್ನಾಟಕ ಸೇರಿದಂತೆ 11 ರಾಜ್ಯಗಳಿಗೆ ನೋಟಿಸ್ ಜಾರಿ ಮಾಡಲು ಸೂಚಿಸಿದ ನ್ಯಾಯಪೀಠ, ವಿಚಾರಣೆಯನ್ನು ಮೂರು ವಾರಗಳ ನಂತರ ಕೈಗೆತ್ತಿಕೊಳ್ಳುವುದಾಗಿ ಹೇಳಿತು.</p>.<p><a href="https://www.prajavani.net/karnataka-news/list-of-karnataka-ministers-in-basavaraj-bommai-cabinet-bjp-854558.html" itemprop="url">ಬೊಮ್ಮಾಯಿ ಸಂಪುಟ: 29 ಮಂದಿ ನೂತನ ಸಚಿವರ ಪಟ್ಟಿ ಇಲ್ಲಿದೆ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕಾರ್ಖಾನೆಗಳಿಗೆ ಕಬ್ಬು ಪೂರೈಸಿದ 14 ದಿನಗಳ ಒಳಗಾಗಿ ರೈತರಿಗೆ ಬಾಕಿ ಹಣ ಪಾವತಿಸುವ ವ್ಯವಸ್ಥೆಯನ್ನು ಜಾರಿಗೊಳಿಸಬೇಕು ಎಂಬ ಬೇಡಿಕೆ ಕುರಿತು ಪ್ರತಿಕ್ರಿಯೆ ಸಲ್ಲಿಸುವಂತೆ ಕೇಂದ್ರ ಸರ್ಕಾರ ಹಾಗೂ ಕಬ್ಬು ಬೆಳೆಯುವ 11 ರಾಜ್ಯಗಳಿಗೆ ಸುಪ್ರೀಂಕೋರ್ಟ್ ಬುಧವಾರ ನೋಟಿಸ್ ಜಾರಿ ಮಾಡಿತು.</p>.<p>ಮಹಾರಾಷ್ಟ್ರದ ಮಾಜಿ ಸಂಸದ ರಾಜು ಅಣ್ಣಾ ಶೆಟ್ಟಿ ಪರ ಹಿರಿಯ ವಕೀಲ ಆನಂದ್ ಗ್ರೋವರ್ ಈ ಸಂಬಂಧ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಮುಖ್ಯನ್ಯಾಯಮೂರ್ತಿ ಎನ್.ವಿ.ರಮಣ, ನ್ಯಾಯಮೂರ್ತಿ ಸೂರ್ಯಕಾಂತ್ ಅವರಿರುವ ನ್ಯಾಯಪೀಠ ಈ ಅರ್ಜಿ ವಿಚಾರಣೆ ನಡೆಸಿತು.</p>.<p>‘ಬೆಳೆಗಾರರು ಪೂರೈಕೆ ಮಾಡಿದ ಕಬ್ಬು ಕಾರ್ಖಾನೆಗಳಿಗೆ ತಲುಪಿದ 14 ದಿನಗಳ ಒಳಗಾಗಿ ರೈತರಿಗೆ ಬಾಕಿ ಹಣವನ್ನು ಪಾವತಿಸಬೇಕು ಎಂದು ಅಲಹಾಬಾದ್ ಹೈಕೋರ್ಟ್ ಈ ಹಿಂದೆ ನೀಡಿರುವ ತನ್ನ ತೀರ್ಪಿನಲ್ಲಿ ಹೇಳಿದೆ. ಹೀಗಾಗಿ, ಬಾಕಿ ಹಣ ಪಾವತಿಗೆ ವ್ಯವಸ್ಥೆಯೊಂದನ್ನು ಜಾರಿಗೊಳಿಸಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ.</p>.<p>‘ಹಲವು ರಾಜ್ಯಗಳು ರೈತರಿಗೆ ಭಾರಿ ಮೊತ್ತದ ಬಾಕಿ ಉಳಿಸಿಕೊಂಡಿವೆ’ ಎಂದೂ ವಕೀಲ ಗ್ರೋವರ್ ಅವರು ನ್ಯಾಯಪೀಠದ ಗಮನಕ್ಕೆ ತಂದರು.</p>.<p>ಕೇಂದ್ರ ಹಾಗೂ ಕರ್ನಾಟಕ ಸೇರಿದಂತೆ 11 ರಾಜ್ಯಗಳಿಗೆ ನೋಟಿಸ್ ಜಾರಿ ಮಾಡಲು ಸೂಚಿಸಿದ ನ್ಯಾಯಪೀಠ, ವಿಚಾರಣೆಯನ್ನು ಮೂರು ವಾರಗಳ ನಂತರ ಕೈಗೆತ್ತಿಕೊಳ್ಳುವುದಾಗಿ ಹೇಳಿತು.</p>.<p><a href="https://www.prajavani.net/karnataka-news/list-of-karnataka-ministers-in-basavaraj-bommai-cabinet-bjp-854558.html" itemprop="url">ಬೊಮ್ಮಾಯಿ ಸಂಪುಟ: 29 ಮಂದಿ ನೂತನ ಸಚಿವರ ಪಟ್ಟಿ ಇಲ್ಲಿದೆ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>