<p><strong>ನವದೆಹಲಿ</strong>: ‘ಇಂಡಿಯಾಸ್ ಗಾಟ್ ಲೇಟೆಂಟ್’ ಕಾರ್ಯಕ್ರಮ ನಡೆಸುವ ಸಮಯ್ ರೈನಾ ಸೇರಿದಂತೆ ಸಾಮಾಜಿಕ ಜಾಲತಾಣಗಳ ಮೂಲಕ ಸಾರ್ವಜನಿಕರ ಮೇಲೆ ಪ್ರಭಾವ ಬೀರುವ ಐದು ಮಂದಿಗೆ ವಿಚಾರಣೆಗೆ ಹಾಜರಾಗುವಂತೆ ಸುಪ್ರೀಂ ಕೋರ್ಟ್ ಸೋಮವಾರ ಸೂಚಿಸಿದೆ.</p>.<p>ವಿರಳ ಕಾಯಿಲೆಯಾದ ‘ಎಸ್ಎಂಎ’ಯಿಂದ (ಸ್ಪೈನಲ್ ಮಸ್ಕ್ಯುಲರ್ ಎಟ್ರೋಫಿ) ಬಳಲುತ್ತಿರುವವರನ್ನು ಈ ಐದು ಮಂದಿ ತಮ್ಮ ಕಾರ್ಯಕ್ರಮದಲ್ಲಿ ಗೇಲಿ ಮಾಡಿದ್ದಾರೆ ಎಂದು ಸರ್ಕಾರೇತರ ಸಂಘಟನೆ (ಎನ್ಜಿಒ) ‘ಕ್ಯೂರ್ ಎಸ್ಎಂಎ ಫೌಂಡೇಷನ್ ಆಫ್ ಇಂಡಿಯಾ’ ದೂರಿದೆ.</p>.<p>ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಎನ್. ಕೋಟೀಶ್ವರ ಸಿಂಗ್ ಅವರು ಇರುವ ವಿಭಾಗೀಯ ಪೀಠವು, ಐದು ಮಂದಿಗೆ ನೋಟಿಸ್ ತಲುಪಿಸಬೇಕು ಎಂದು ಮುಂಬೈ ಪೊಲೀಸ್ ಆಯುಕ್ತರಿಗೆ ಸೂಚಿಸಿದೆ. ಈ ಐವರು ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೆ ಇದ್ದರೆ ಕಠಿಣ ಕ್ರಮ ಜರುಗಿಸಬೇಕಾಗುತ್ತದೆ ಎಂದು ಪೀಠವು ಎಚ್ಚರಿಕೆ ನೀಡಿದೆ.</p>.<p class="title">ಅಂಗವಿಕಲರು ಮತ್ತು ವಿರಳ ಕಾಯಿಲೆಗೆ ತುತ್ತಾದವರ ವಿಚಾರದಲ್ಲಿ ಸಾಮಾಜಿಕ ಜಾಲತಾಣಗಳ ವಸ್ತು–ವಿಷಯದ ಮೇಲೆ ನಿಯಂತ್ರಣ ವಿಧಿಸುವ ಸಂಬಂಧ ನಿರ್ದೇಶನ ನೀಡಬೇಕು ಎಂದು ಎನ್ಜಿಒ ಸಲ್ಲಿಸಿರುವ ಅರ್ಜಿಯಲ್ಲಿ ಮನವಿ ಮಾಡಲಾಗಿದೆ. ಈ ದಿಸೆಯಲ್ಲಿ ನೆರವು ಒದಗಿಸಬೇಕು ಎಂದು ಪೀಠವು ಅಟಾರ್ನಿ ಜನರಲ್ ಆರ್. ವೆಂಕಟರಮಣಿ ಅವರನ್ನು ಕೋರಿದೆ.</p>.<p class="title">ಸಾಮಾಜಿಕ ಜಾಲತಾಣಗಳ ಮೂಲಕ ಪ್ರಭಾವ ಬೀರುವ ಶಕ್ತಿ ಹೊಂದಿರುವವರು ಇಂತಹ ವ್ಯಕ್ತಿಗಳನ್ನು ಗೇಲಿ ಮಾಡುವುದು ನೈತಿಕ ಸ್ಥೈರ್ಯವನ್ನು ಕುಗ್ಗಿಸುವಂತಹ ಕೆಲಸ ಎಂದು ಪೀಠವು ಹೇಳಿದೆ. ಇಂತಹ ಪ್ರಕರಣ ಮುಂದೆ ಆಗದಂತೆ ಮಾಡಲು ಶಿಕ್ಷೆಯ ಅಗತ್ಯ ಇದೆ ಎಂದು ಅದು ಹೇಳಿದೆ.</p>.<p class="title">ಅಂಗವಿಕಲರು ಹಾಗೂ ವಿರಳ ಕಾಯಿಲೆಗಳಿಗೆ ತುತ್ತಾದವರ ವಿಚಾರದಲ್ಲಿ ಸಾಮಾಜಿಕ ಜಾಲತಾಣಗಳ ಕಾರ್ಯಕ್ರಮಗಳು, ಬರಹಗಳು ಹೇಗಿರಬೇಕು ಎಂಬುದಕ್ಕೆ ಸಂಬಂಧಿಸಿದಂತೆ ಮಾರ್ಗಸೂಚಿಯನ್ನು ರೂಪಿಸುವ ಇರಾದೆಯನ್ನು ಪೀಠವು ವ್ಯಕ್ತಪಡಿಸಿದೆ.</p>.ಯೂಟ್ಯೂಬ್ ಶೋ ವಿವಾದ: ಸೈಬರ್ ಅಧಿಕಾರಿಗಳ ಮುಂದೆ ಸಮಯ್ ರೈನಾ ಹಾಜರು .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ಇಂಡಿಯಾಸ್ ಗಾಟ್ ಲೇಟೆಂಟ್’ ಕಾರ್ಯಕ್ರಮ ನಡೆಸುವ ಸಮಯ್ ರೈನಾ ಸೇರಿದಂತೆ ಸಾಮಾಜಿಕ ಜಾಲತಾಣಗಳ ಮೂಲಕ ಸಾರ್ವಜನಿಕರ ಮೇಲೆ ಪ್ರಭಾವ ಬೀರುವ ಐದು ಮಂದಿಗೆ ವಿಚಾರಣೆಗೆ ಹಾಜರಾಗುವಂತೆ ಸುಪ್ರೀಂ ಕೋರ್ಟ್ ಸೋಮವಾರ ಸೂಚಿಸಿದೆ.</p>.<p>ವಿರಳ ಕಾಯಿಲೆಯಾದ ‘ಎಸ್ಎಂಎ’ಯಿಂದ (ಸ್ಪೈನಲ್ ಮಸ್ಕ್ಯುಲರ್ ಎಟ್ರೋಫಿ) ಬಳಲುತ್ತಿರುವವರನ್ನು ಈ ಐದು ಮಂದಿ ತಮ್ಮ ಕಾರ್ಯಕ್ರಮದಲ್ಲಿ ಗೇಲಿ ಮಾಡಿದ್ದಾರೆ ಎಂದು ಸರ್ಕಾರೇತರ ಸಂಘಟನೆ (ಎನ್ಜಿಒ) ‘ಕ್ಯೂರ್ ಎಸ್ಎಂಎ ಫೌಂಡೇಷನ್ ಆಫ್ ಇಂಡಿಯಾ’ ದೂರಿದೆ.</p>.<p>ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಎನ್. ಕೋಟೀಶ್ವರ ಸಿಂಗ್ ಅವರು ಇರುವ ವಿಭಾಗೀಯ ಪೀಠವು, ಐದು ಮಂದಿಗೆ ನೋಟಿಸ್ ತಲುಪಿಸಬೇಕು ಎಂದು ಮುಂಬೈ ಪೊಲೀಸ್ ಆಯುಕ್ತರಿಗೆ ಸೂಚಿಸಿದೆ. ಈ ಐವರು ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೆ ಇದ್ದರೆ ಕಠಿಣ ಕ್ರಮ ಜರುಗಿಸಬೇಕಾಗುತ್ತದೆ ಎಂದು ಪೀಠವು ಎಚ್ಚರಿಕೆ ನೀಡಿದೆ.</p>.<p class="title">ಅಂಗವಿಕಲರು ಮತ್ತು ವಿರಳ ಕಾಯಿಲೆಗೆ ತುತ್ತಾದವರ ವಿಚಾರದಲ್ಲಿ ಸಾಮಾಜಿಕ ಜಾಲತಾಣಗಳ ವಸ್ತು–ವಿಷಯದ ಮೇಲೆ ನಿಯಂತ್ರಣ ವಿಧಿಸುವ ಸಂಬಂಧ ನಿರ್ದೇಶನ ನೀಡಬೇಕು ಎಂದು ಎನ್ಜಿಒ ಸಲ್ಲಿಸಿರುವ ಅರ್ಜಿಯಲ್ಲಿ ಮನವಿ ಮಾಡಲಾಗಿದೆ. ಈ ದಿಸೆಯಲ್ಲಿ ನೆರವು ಒದಗಿಸಬೇಕು ಎಂದು ಪೀಠವು ಅಟಾರ್ನಿ ಜನರಲ್ ಆರ್. ವೆಂಕಟರಮಣಿ ಅವರನ್ನು ಕೋರಿದೆ.</p>.<p class="title">ಸಾಮಾಜಿಕ ಜಾಲತಾಣಗಳ ಮೂಲಕ ಪ್ರಭಾವ ಬೀರುವ ಶಕ್ತಿ ಹೊಂದಿರುವವರು ಇಂತಹ ವ್ಯಕ್ತಿಗಳನ್ನು ಗೇಲಿ ಮಾಡುವುದು ನೈತಿಕ ಸ್ಥೈರ್ಯವನ್ನು ಕುಗ್ಗಿಸುವಂತಹ ಕೆಲಸ ಎಂದು ಪೀಠವು ಹೇಳಿದೆ. ಇಂತಹ ಪ್ರಕರಣ ಮುಂದೆ ಆಗದಂತೆ ಮಾಡಲು ಶಿಕ್ಷೆಯ ಅಗತ್ಯ ಇದೆ ಎಂದು ಅದು ಹೇಳಿದೆ.</p>.<p class="title">ಅಂಗವಿಕಲರು ಹಾಗೂ ವಿರಳ ಕಾಯಿಲೆಗಳಿಗೆ ತುತ್ತಾದವರ ವಿಚಾರದಲ್ಲಿ ಸಾಮಾಜಿಕ ಜಾಲತಾಣಗಳ ಕಾರ್ಯಕ್ರಮಗಳು, ಬರಹಗಳು ಹೇಗಿರಬೇಕು ಎಂಬುದಕ್ಕೆ ಸಂಬಂಧಿಸಿದಂತೆ ಮಾರ್ಗಸೂಚಿಯನ್ನು ರೂಪಿಸುವ ಇರಾದೆಯನ್ನು ಪೀಠವು ವ್ಯಕ್ತಪಡಿಸಿದೆ.</p>.ಯೂಟ್ಯೂಬ್ ಶೋ ವಿವಾದ: ಸೈಬರ್ ಅಧಿಕಾರಿಗಳ ಮುಂದೆ ಸಮಯ್ ರೈನಾ ಹಾಜರು .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>