ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಂ.ಆರ್. ಶಾ ಮತ್ತು ಸಿ.ಟಿ. ರವಿಕುಮಾರ್ ಅವರಿದ್ದ ಪೀಠವು ಲಲಿತ್ ಮೋದಿ ಅವರ ವಿರುದ್ಧ ಹರಿಹಾಯ್ದಿತು. ಸಾಮಾಜಿಕ ಜಾಲತಾಣಗಳು ಮತ್ತು ದೆಹಲಿ, ಬೆಂಗಳೂರು, ಮುಂಬೈ, ಕೋಲ್ಕತ್ತ, ಚೆನ್ನೈ ನಗರಗಳಲ್ಲಿ ಆವೃತ್ತಿ ಹೊಂದಿರುವ ರಾಷ್ಟ್ರಮಟ್ಟದ ಸುದ್ದಿಪತ್ರಿಕೆಗಳಲ್ಲಿ ಬೇಷರತ್ ಕ್ಷಮೆ ಕೋರುವಂತೆ ಅವರಿಗೆ ನಿರ್ದೇಶಿಸಿತು.