<p><strong>ನವದೆಹಲಿ:</strong> ವಿಚಾರಣಾ ನ್ಯಾಯಾಲಯವು ವ್ಯಕ್ತಿಗೆ ವಿಧಿಸಿದ್ದ ಮರಣ ದಂಡನೆಯನ್ನು ರದ್ದುಗೊಳಿಸಿರುವ ಸುಪ್ರೀಂಕೋರ್ಟ್, ಪುತ್ರ ಹಾಗೂ ಇಬ್ಬರು ಸಹೋದರರಿಗೆ ಬೆಂಕಿ ಹಚ್ಚಿದ್ದ ಆರೋಪಗಳಿಂದ ಆತನನ್ನು ಮುಕ್ತಗೊಳಿಸಿದೆ.</p>.<p>‘ಸಂತ್ರಸ್ತರ ಪೈಕಿ ಇಬ್ಬರ ಮರಣಪೂರ್ವ ಹೇಳಿಕೆಗಳಿಗೆ ಹಾಗೂ ಪ್ರಮುಖ ಸಾಕ್ಷಿಗಳು ನೀಡಿರುವ ಹೇಳಿಕೆಗಳಿಗೂ ಹೊಂದಿಕೆಯಾಗುತ್ತಿಲ್ಲ’ ಎಂದು ಸುಪ್ರೀಂಕೋರ್ಟ್ ಹೇಳಿದೆ.</p>.<p>ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ, ಜೆ.ಬಿ.ಪಾರ್ದೀವಾಲಾ ಹಾಗೂ ಪಿ.ಕೆ.ಮಿಶ್ರಾ ಅವರಿದ್ದ ನ್ಯಾಯಪೀಠವು ಅರ್ಜಿ ವಿಚಾರಣೆ ನಡೆಸಿ, ಕಳೆದ ಎಂಟು ವರ್ಷಗಳಿಂದ ಸೆರೆವಾಸ ಅನುಭವಿಸುತ್ತಿರುವ ಅರ್ಜಿದಾರ ಇರ್ಫಾನ್ ಅವರನ್ನು ತಕ್ಷಣವೇ ಜೈಲಿನಿಂದ ಬಿಡುಗಡೆ ಮಾಡುವಂತೆ ಆದೇಶಿಸಿದೆ.</p>.<p>‘ವ್ಯಕ್ತಿಯ ಮರಣಪೂರ್ವ ಹೇಳಿಕೆಯ ಸತ್ಯಾಸತ್ಯತೆ ಬಗ್ಗೆ ಸಂಶಯವಿದ್ದಾಗ, ಅದನ್ನು ಪುರಾವೆಯ ಭಾಗವಾಗಿ ಪರಿಗಣಿಸಬಹುದೇ ಹೊರತು ತೀರ್ಪು ನೀಡಲು ಅದೊಂದೇ ಆಧಾರವಾಗದು’ ಎಂದು ನ್ಯಾಯಪೀಠವು ತನ್ನ 36 ಪುಟಗಳ ತೀರ್ಪಿನಲ್ಲಿ ಹೇಳಿದೆ.</p>.<p>ತನ್ನ ಎರಡನೇ ಮದುವೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂಬ ಕಾರಣಕ್ಕೆ ಪುತ್ರ ಇಸ್ಲಾಮುದ್ದೀನ್, ಸಹೋದರರಾದ ಇರ್ಶಾದ್ ಮತ್ತು ನೌಶಾದ್ ಎಂಬುವವರಿಗೆ 2014ರ ಆಗಸ್ಟ್ 5ರ ರಾತ್ರಿ ಇರ್ಫಾನ್ ಬೆಂಕಿ ಹಚ್ಚಿದ್ದ ಎಂದು ಆರೋಪಿಸಲಾಗಿತ್ತು. ನಂತರ, ಮೂವರು ದೆಹಲಿಯ ಡಾ.ರಾಮಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.</p>.<p>ಮೂವರು ನೀಡಿದ್ದ ಮರಣಪೂರ್ವ ಹೇಳಿಕೆಗಳನ್ನು ಪರಿಗಣಿಸಿ, ಇರ್ಫಾನ್ ಅವರಿಗೆ ಗಲ್ಲು ಶಿಕ್ಷೆ ವಿಧಿಸಿ ವಿಚಾರಣಾ ನ್ಯಾಯಾಲಯ ನೀಡಿದ್ದ ತೀರ್ಪನ್ನು ಎತ್ತಿ ಹಿಡಿದು ಅಲಹಾಬಾದ್ ಹೈಕೋರ್ಟ್ 2018ರಲ್ಲಿ ಆದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಇರ್ಫಾನ್, ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ವಿಚಾರಣಾ ನ್ಯಾಯಾಲಯವು ವ್ಯಕ್ತಿಗೆ ವಿಧಿಸಿದ್ದ ಮರಣ ದಂಡನೆಯನ್ನು ರದ್ದುಗೊಳಿಸಿರುವ ಸುಪ್ರೀಂಕೋರ್ಟ್, ಪುತ್ರ ಹಾಗೂ ಇಬ್ಬರು ಸಹೋದರರಿಗೆ ಬೆಂಕಿ ಹಚ್ಚಿದ್ದ ಆರೋಪಗಳಿಂದ ಆತನನ್ನು ಮುಕ್ತಗೊಳಿಸಿದೆ.</p>.<p>‘ಸಂತ್ರಸ್ತರ ಪೈಕಿ ಇಬ್ಬರ ಮರಣಪೂರ್ವ ಹೇಳಿಕೆಗಳಿಗೆ ಹಾಗೂ ಪ್ರಮುಖ ಸಾಕ್ಷಿಗಳು ನೀಡಿರುವ ಹೇಳಿಕೆಗಳಿಗೂ ಹೊಂದಿಕೆಯಾಗುತ್ತಿಲ್ಲ’ ಎಂದು ಸುಪ್ರೀಂಕೋರ್ಟ್ ಹೇಳಿದೆ.</p>.<p>ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ, ಜೆ.ಬಿ.ಪಾರ್ದೀವಾಲಾ ಹಾಗೂ ಪಿ.ಕೆ.ಮಿಶ್ರಾ ಅವರಿದ್ದ ನ್ಯಾಯಪೀಠವು ಅರ್ಜಿ ವಿಚಾರಣೆ ನಡೆಸಿ, ಕಳೆದ ಎಂಟು ವರ್ಷಗಳಿಂದ ಸೆರೆವಾಸ ಅನುಭವಿಸುತ್ತಿರುವ ಅರ್ಜಿದಾರ ಇರ್ಫಾನ್ ಅವರನ್ನು ತಕ್ಷಣವೇ ಜೈಲಿನಿಂದ ಬಿಡುಗಡೆ ಮಾಡುವಂತೆ ಆದೇಶಿಸಿದೆ.</p>.<p>‘ವ್ಯಕ್ತಿಯ ಮರಣಪೂರ್ವ ಹೇಳಿಕೆಯ ಸತ್ಯಾಸತ್ಯತೆ ಬಗ್ಗೆ ಸಂಶಯವಿದ್ದಾಗ, ಅದನ್ನು ಪುರಾವೆಯ ಭಾಗವಾಗಿ ಪರಿಗಣಿಸಬಹುದೇ ಹೊರತು ತೀರ್ಪು ನೀಡಲು ಅದೊಂದೇ ಆಧಾರವಾಗದು’ ಎಂದು ನ್ಯಾಯಪೀಠವು ತನ್ನ 36 ಪುಟಗಳ ತೀರ್ಪಿನಲ್ಲಿ ಹೇಳಿದೆ.</p>.<p>ತನ್ನ ಎರಡನೇ ಮದುವೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂಬ ಕಾರಣಕ್ಕೆ ಪುತ್ರ ಇಸ್ಲಾಮುದ್ದೀನ್, ಸಹೋದರರಾದ ಇರ್ಶಾದ್ ಮತ್ತು ನೌಶಾದ್ ಎಂಬುವವರಿಗೆ 2014ರ ಆಗಸ್ಟ್ 5ರ ರಾತ್ರಿ ಇರ್ಫಾನ್ ಬೆಂಕಿ ಹಚ್ಚಿದ್ದ ಎಂದು ಆರೋಪಿಸಲಾಗಿತ್ತು. ನಂತರ, ಮೂವರು ದೆಹಲಿಯ ಡಾ.ರಾಮಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.</p>.<p>ಮೂವರು ನೀಡಿದ್ದ ಮರಣಪೂರ್ವ ಹೇಳಿಕೆಗಳನ್ನು ಪರಿಗಣಿಸಿ, ಇರ್ಫಾನ್ ಅವರಿಗೆ ಗಲ್ಲು ಶಿಕ್ಷೆ ವಿಧಿಸಿ ವಿಚಾರಣಾ ನ್ಯಾಯಾಲಯ ನೀಡಿದ್ದ ತೀರ್ಪನ್ನು ಎತ್ತಿ ಹಿಡಿದು ಅಲಹಾಬಾದ್ ಹೈಕೋರ್ಟ್ 2018ರಲ್ಲಿ ಆದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಇರ್ಫಾನ್, ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>