<p><strong>ನವದೆಹಲಿ:</strong> ಹರಿಯಾಣದ ಕಾಂಗ್ರೆಸ್ನ ಮಾಜಿ ಶಾಸಕ ಸುರೇಂದ್ರ ಪನ್ವಾರ್ ಅವರನ್ನು 15 ಗಂಟೆ ವಿಚಾರಣೆಗೆ ಒಳಪಡಿಸಿರುವ ಜಾರಿ ನಿರ್ದೇಶನಾಲಯದ (ಇ.ಡಿ) ‘ದರ್ಪ’ದಿಂದ ಕೂಡಿದೆ ಹಾಗೂ ‘ಅಮಾನವೀಯ’ವಾಗಿದೆ ಎಂದು ಹೇಳಿರುವ ಸುಪ್ರೀಂ ಕೋರ್ಟ್, ಮಾಜಿ ಶಾಸಕನ ಬಂಧನ ಕಾನೂನುಬಾಹಿರ ಎಂದು ಹೇಳಿದೆ.</p>.<p>‘ಪನ್ವಾರ್ ವಿರುದ್ಧ ಮರಳು ಅಕ್ರಮ ಗಣಿಗಾರಿಕೆ ಆರೋಪವಿದೆಯೇ ಹೊರತು, ಅವರ ವಿರುದ್ಧದ ಪ್ರಕರಣ ಯಾವುದೇ ಭಯೋತ್ಪಾದಕ ಚಟುವಟಿಕೆಗೆ ಸಂಬಂಧಿಸಿದ್ದಲ್ಲ. ಈ ವಿಚಾರದಲ್ಲಿ ಇ.ಡಿ ಅಧಿಕಾರಿಗಳು ಅಮಾನವೀಯವಾಗಿ ನಡೆದುಕೊಂಡಿದ್ದಾರೆ’ ಎಂದು ನ್ಯಾಯಮೂರ್ತಿಗಳಾದ ಅಭಯ್ ಎಸ್.ಓಕಾ ಹಾಗೂ ಆಗಸ್ಟಿನ್ ಜಾರ್ಜ್ ಮಸೀಹ್ ಅವರು ಇದ್ದ ಪೀಠ ಹೇಳಿದೆ.</p>.<p>ಪೀಠವು ಈ ಕುರಿತು ಡಿಸೆಂಬರ್ 2ರಂದು ಆದೇಶ ಹೊರಡಿಸಿದೆ.</p>.<p>‘ಇಂತಹ ಪ್ರಕರಣಗಳಲ್ಲಿ ಜನರನ್ನು ನಡೆಸಿಕೊಳ್ಳುವ ರೀತಿ ಇದಲ್ಲ. ಹೇಳಿಕೆ ನೀಡುವಂತೆ ಆ ವ್ಯಕ್ತಿಗೆ ನೀವು ಬಲವಂತ ಮಾಡಿದ್ದೀರಿ’ ಎಂದೂ ಕಟು ಮಾತುಗಳಲ್ಲಿ ಹೇಳಿದೆ.</p>.<p>ಪನ್ವಾರ್ ಅವರ ಬಂಧನ ಕಾನೂನುಬಾಹಿರ ಎಂದು ಹರಿಯಾಣ ಮತ್ತು ಪಂಜಾಬ್ ಹೈಕೋರ್ಟ್ ಆದೇಶಿಸಿತ್ತು. ಹೈಕೋರ್ಟ್ ಆದೇಶ ಪ್ರಶ್ನಿಸಿ ಇ.ಡಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ನ್ಯಾಯಪೀಠ, ‘ಪ್ರತಿವಾದಿಯ ಬಂಧನ ಕಾನೂನುಬಾಹಿರ ಎಂಬ ಹೈಕೋರ್ಟ್ನ ನಿರ್ಣಯದಲ್ಲಿ ನಾವು ಹಸ್ತಕ್ಷೇಪ ಮಾಡಲು ಇಷ್ಟಪಡುವುದಿಲ್ಲ’ ಎಂದು ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಹರಿಯಾಣದ ಕಾಂಗ್ರೆಸ್ನ ಮಾಜಿ ಶಾಸಕ ಸುರೇಂದ್ರ ಪನ್ವಾರ್ ಅವರನ್ನು 15 ಗಂಟೆ ವಿಚಾರಣೆಗೆ ಒಳಪಡಿಸಿರುವ ಜಾರಿ ನಿರ್ದೇಶನಾಲಯದ (ಇ.ಡಿ) ‘ದರ್ಪ’ದಿಂದ ಕೂಡಿದೆ ಹಾಗೂ ‘ಅಮಾನವೀಯ’ವಾಗಿದೆ ಎಂದು ಹೇಳಿರುವ ಸುಪ್ರೀಂ ಕೋರ್ಟ್, ಮಾಜಿ ಶಾಸಕನ ಬಂಧನ ಕಾನೂನುಬಾಹಿರ ಎಂದು ಹೇಳಿದೆ.</p>.<p>‘ಪನ್ವಾರ್ ವಿರುದ್ಧ ಮರಳು ಅಕ್ರಮ ಗಣಿಗಾರಿಕೆ ಆರೋಪವಿದೆಯೇ ಹೊರತು, ಅವರ ವಿರುದ್ಧದ ಪ್ರಕರಣ ಯಾವುದೇ ಭಯೋತ್ಪಾದಕ ಚಟುವಟಿಕೆಗೆ ಸಂಬಂಧಿಸಿದ್ದಲ್ಲ. ಈ ವಿಚಾರದಲ್ಲಿ ಇ.ಡಿ ಅಧಿಕಾರಿಗಳು ಅಮಾನವೀಯವಾಗಿ ನಡೆದುಕೊಂಡಿದ್ದಾರೆ’ ಎಂದು ನ್ಯಾಯಮೂರ್ತಿಗಳಾದ ಅಭಯ್ ಎಸ್.ಓಕಾ ಹಾಗೂ ಆಗಸ್ಟಿನ್ ಜಾರ್ಜ್ ಮಸೀಹ್ ಅವರು ಇದ್ದ ಪೀಠ ಹೇಳಿದೆ.</p>.<p>ಪೀಠವು ಈ ಕುರಿತು ಡಿಸೆಂಬರ್ 2ರಂದು ಆದೇಶ ಹೊರಡಿಸಿದೆ.</p>.<p>‘ಇಂತಹ ಪ್ರಕರಣಗಳಲ್ಲಿ ಜನರನ್ನು ನಡೆಸಿಕೊಳ್ಳುವ ರೀತಿ ಇದಲ್ಲ. ಹೇಳಿಕೆ ನೀಡುವಂತೆ ಆ ವ್ಯಕ್ತಿಗೆ ನೀವು ಬಲವಂತ ಮಾಡಿದ್ದೀರಿ’ ಎಂದೂ ಕಟು ಮಾತುಗಳಲ್ಲಿ ಹೇಳಿದೆ.</p>.<p>ಪನ್ವಾರ್ ಅವರ ಬಂಧನ ಕಾನೂನುಬಾಹಿರ ಎಂದು ಹರಿಯಾಣ ಮತ್ತು ಪಂಜಾಬ್ ಹೈಕೋರ್ಟ್ ಆದೇಶಿಸಿತ್ತು. ಹೈಕೋರ್ಟ್ ಆದೇಶ ಪ್ರಶ್ನಿಸಿ ಇ.ಡಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ನ್ಯಾಯಪೀಠ, ‘ಪ್ರತಿವಾದಿಯ ಬಂಧನ ಕಾನೂನುಬಾಹಿರ ಎಂಬ ಹೈಕೋರ್ಟ್ನ ನಿರ್ಣಯದಲ್ಲಿ ನಾವು ಹಸ್ತಕ್ಷೇಪ ಮಾಡಲು ಇಷ್ಟಪಡುವುದಿಲ್ಲ’ ಎಂದು ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>