ಕಾಳ್ಗಿಚ್ಚು ನಂದಿಸಲು ಹಲವು ಕಾರ್ಯ ಯೋಜನೆಗಳು ಸಿದ್ಧವಾಗಿವೆಯಾದರೂ, ಅವುಗಳ ಜಾರಿಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ನ್ಯಾಯಪೀಠ ಅಸಮಾಧಾನ ವ್ಯಕ್ತಪಡಿಸಿದೆ. ರಾಜ್ಯದ ಅರಣ್ಯ ಇಲಾಖೆಯಲ್ಲಿ ಭರ್ತಿಯಾಗದೆ ಖಾಲಿ ಇರುವ ಹಲವು ಹುದ್ದೆಗಳ ಬಗ್ಗೆ ಪ್ರಸ್ತಾಪಿಸಿದ ಪೀಠವು, ಈ ಸಮಸ್ಯೆಯನ್ನು ಪರಿಹರಿಸಿಕೊಳ್ಳಬೇಕು ಎಂದು ಸಲಹೆ ನೀಡಿದೆ.