<p><strong>ನವದೆಹಲಿ</strong>: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನಾ ನಿಗ್ರಹ ಗಸ್ತು ಸಂದರ್ಭದಲ್ಲಿ ಮೃತಪಟ್ಟ ಯೋಧರೊಬ್ಬರ ಪತ್ನಿಗೆ ಪಿಂಚಣಿ (ಎಲ್ಎಫ್ಪಿ) ನೀಡುವಂತೆ ಸಶಸ್ತ್ರ ಪಡೆಗಳ ನ್ಯಾಯಮಂಡಳಿ ನೀಡಿದ್ದ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ₹50 ಸಾವಿರ ದಂಡ ವಿಧಿಸಿದೆ.</p>.<p>ನ್ಯಾಯಮೂರ್ತಿಗಳಾದ ಅಭಯ್ ಎಸ್. ಓಕ ಮತ್ತು ಆಗಸ್ಟೀನ್ ಜಾರ್ಜ್ ಮಸೀಹ್ ಅವರು ಇರುವ ವಿಭಾಗೀಯ ಪೀಠವು, ವಿಧವೆಯನ್ನು ನ್ಯಾಯಾಲಯಕ್ಕೆ ಎಳೆದು ತರಬಾರದಿತ್ತು ಎಂದು ಹೇಳಿದೆ.</p>.<p>‘ನಿರ್ಧಾರ ಕೈಗೊಳ್ಳುವ ಅಧಿಕಾರಿಗಳು ಕರ್ತವ್ಯದ ವೇಳೆ ಮೃತಪಟ್ಟ ಯೋಧನ ಪತ್ನಿಯ ವಿಚಾರದಲ್ಲಿ ಸಹಾನುಭೂತಿ ಹೊಂದಿರಬೇಕಿತ್ತು. ಹೀಗಾಗಿ ನಾವು ₹50 ಸಾವಿರ ದಂಡ ವಿಧಿಸುತ್ತಿದ್ದೇವೆ. ಈ ಮೊತ್ತವನ್ನು ಯೋಧನ ಪತ್ನಿಗೆ ನೀಡಬೇಕು’ ಎಂದು ಪೀಠವು ಹೇಳಿದೆ. ಮೊತ್ತವನ್ನು ಇನ್ನು ಎರಡು ತಿಂಗಳಲ್ಲಿ ಪಾವತಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಸೂಚಿಸಲಾಗಿದೆ.</p>.<p>ಯೋಧ ನಾಯ್ಕ್ ಇಂದರ್ಜೀತ್ ಸಿಂಗ್ ಅವರು 2013ರ ಜನವರಿಯಲ್ಲಿ ಗಸ್ತು ನಡೆಸುತ್ತಿದ್ದಾಗ ತೀರಾ ವಿಷಮ ಹವಾಮಾನ ಪರಿಸ್ಥಿತಿಯಲ್ಲಿ ಹೃದಯ ಸ್ತಂಭನದಿಂದಾಗಿ ಮೃತಪಟ್ಟಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನಾ ನಿಗ್ರಹ ಗಸ್ತು ಸಂದರ್ಭದಲ್ಲಿ ಮೃತಪಟ್ಟ ಯೋಧರೊಬ್ಬರ ಪತ್ನಿಗೆ ಪಿಂಚಣಿ (ಎಲ್ಎಫ್ಪಿ) ನೀಡುವಂತೆ ಸಶಸ್ತ್ರ ಪಡೆಗಳ ನ್ಯಾಯಮಂಡಳಿ ನೀಡಿದ್ದ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ₹50 ಸಾವಿರ ದಂಡ ವಿಧಿಸಿದೆ.</p>.<p>ನ್ಯಾಯಮೂರ್ತಿಗಳಾದ ಅಭಯ್ ಎಸ್. ಓಕ ಮತ್ತು ಆಗಸ್ಟೀನ್ ಜಾರ್ಜ್ ಮಸೀಹ್ ಅವರು ಇರುವ ವಿಭಾಗೀಯ ಪೀಠವು, ವಿಧವೆಯನ್ನು ನ್ಯಾಯಾಲಯಕ್ಕೆ ಎಳೆದು ತರಬಾರದಿತ್ತು ಎಂದು ಹೇಳಿದೆ.</p>.<p>‘ನಿರ್ಧಾರ ಕೈಗೊಳ್ಳುವ ಅಧಿಕಾರಿಗಳು ಕರ್ತವ್ಯದ ವೇಳೆ ಮೃತಪಟ್ಟ ಯೋಧನ ಪತ್ನಿಯ ವಿಚಾರದಲ್ಲಿ ಸಹಾನುಭೂತಿ ಹೊಂದಿರಬೇಕಿತ್ತು. ಹೀಗಾಗಿ ನಾವು ₹50 ಸಾವಿರ ದಂಡ ವಿಧಿಸುತ್ತಿದ್ದೇವೆ. ಈ ಮೊತ್ತವನ್ನು ಯೋಧನ ಪತ್ನಿಗೆ ನೀಡಬೇಕು’ ಎಂದು ಪೀಠವು ಹೇಳಿದೆ. ಮೊತ್ತವನ್ನು ಇನ್ನು ಎರಡು ತಿಂಗಳಲ್ಲಿ ಪಾವತಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಸೂಚಿಸಲಾಗಿದೆ.</p>.<p>ಯೋಧ ನಾಯ್ಕ್ ಇಂದರ್ಜೀತ್ ಸಿಂಗ್ ಅವರು 2013ರ ಜನವರಿಯಲ್ಲಿ ಗಸ್ತು ನಡೆಸುತ್ತಿದ್ದಾಗ ತೀರಾ ವಿಷಮ ಹವಾಮಾನ ಪರಿಸ್ಥಿತಿಯಲ್ಲಿ ಹೃದಯ ಸ್ತಂಭನದಿಂದಾಗಿ ಮೃತಪಟ್ಟಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>