ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಮತ್ತು ಬೇಲಾ ಎಂ.ತ್ರಿವೇದಿ ನೇತೃತ್ವದ ರಜೆ ಕಾಲದ ಪೀಠವು, ‘ಮೇಲ್ನೋಟಕ್ಕೆ ಜಾಮೀನು ಮಂಜೂರು ಮಾಡಲು ಹೈಕೋರ್ಟ್ ವಿಧಿಸಿರುವ ಷರತ್ತುಗಳು ಅಸಮಂಜಸವಾಗಿವೆ. ಆರೋಪಿಯ ಉಪಸ್ಥಿತಿ ಮತ್ತು ವಿಚಾರಣೆಯ ನ್ಯಾಯಸಮ್ಮತತೆಯನ್ನು ಖಚಿತಪಡಿಸಿಕೊಳ್ಳಲು ವಿಧಿಸಬೇಕಾದ ಷರತ್ತುಗಳೊಂದಿಗೆ ಸಮಂಜಸ ಸಂಬಂಧವನ್ನು ಹೊಂದಿಲ್ಲ. ಇದು ಸಿವಿಲ್ ನ್ಯಾಯಾಲಯದ ತೀರ್ಪಿನಂತೆ ಧ್ವನಿಸುತ್ತಿದೆ’ ಎಂದು ಚಾಟಿ ಬೀಸಿದೆ.