<p><strong>ನವದೆಹಲಿ</strong>: ಪಶ್ಚಿಮ ಬಂಗಾಳದ ಶಿಕ್ಷಕರ ನೇಮಕಾತಿ ಹಗರಣದಲ್ಲಿ ರಾಜ್ಯ ಸರ್ಕಾರದ ಅಧಿಕಾರಿಗಳ ಪಾತ್ರದ ಕುರಿತಂತೆ ಸಿಬಿಐ ತನಿಖೆಗೆ ನಿರ್ದೇಶಿಸಿದ್ದ ಕಲ್ಕತ್ತ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.</p> <p>ಆದರೆ, 25,000ಕ್ಕೂ ಅಧಿಕ ಮಂದಿ ಶಿಕ್ಷಕರು ಮತ್ತು ಸಹಾಯಕ ಸಿಬ್ಬಂದಿ ನೇಮಕಾತಿಯನ್ನು ರದ್ದುಗೊಳಿಸಿದ ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.</p><p>ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ 25,753 ಶಿಕ್ಷಕರು ಮತ್ತು ಸಹಾಯಕ ಸಿಬ್ಬಂದಿಯನ್ನು ನೇಮಕ ಮಾಡಿದ್ದ ಶಾಲಾ ಸೇವಾ ಆಯೋಗದ(ಎಸ್ಎಸ್ಸಿ) ಪ್ರಕ್ರಿಯೆಯನ್ನು ರದ್ದು ಮಾಡಿದ್ದ ಹೈಕೋರ್ಟ್ ಆದೇಶ ಪ್ರಶ್ನಿಸಿ ಪಶ್ಚಿಮ ಬಂಗಾಳ ಸರ್ಕಾರವು ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.</p><p>ನೇಮಕಾತಿ ರದ್ದು ಆದೇಶಕ್ಕೆ ತಡೆ ನೀಡಲು ನಿರಾಕರಿಸಿದ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್, ನ್ಯಾಯಮೂರ್ತಿ ಪರ್ದಿವಾಲಾ ಮತ್ತು ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು, ಮೇ 6ಕ್ಕೆ ಪ್ರಕರಣದ ಮುಂದಿನ ವಿಚಾರಣೆಯನ್ನು ನಿಗದಿ ಮಾಡಿದೆ.</p><p>‘ರಾಜ್ಯ ಸರ್ಕಾರದ ಅಧಿಕಾರಿಗಳ ವಿರುದ್ಧ ಸಿಬಿಐ ಹೆಚ್ಚಿನ ತನಿಖೆಯನ್ನು ಕೈಗೊಳ್ಳಬಹುದು ಎಂಬ ಹೈಕೋರ್ಟ್ ನಿರ್ದೇಶನವನ್ನು ನಾವು ತಡೆಹಿಡಿಯುತ್ತೇವೆ’ಎಂದು ಪೀಠ ಹೇಳಿದೆ.</p><p>25,000 ಜನರ ಉದ್ಯೋಗ ಕಸಿದು ಬೇರೆಯವರಿಗೆ ನೀಡಿರುವುದು ಗಂಭೀರ ವಿಷಯ. ಲಭ್ಯವಿರುವ ಮಾಹಿತಿಗಳನ್ನು ಆಧರಿಸಿ ಮಾನ್ಯ ಮತ್ತು ಅಮಾನ್ಯವಾದ ನೇಮಕಾತಿಗಳನ್ನು ವಿಂಗಡಿಸಲು ಸಾಧ್ಯವೇ ಎಂದು ನ್ಯಾಯಾಲಯ ಕೇಳಿದೆ.</p><p>ಅಕ್ರಮ ನೇಮಕಾತಿಗಳಿಗೆ ಅನುವು ಮಾಡಿಕೊಡಲು ಸೂಪರ್ ನ್ಯೂಮರಿ ಹುದ್ದೆಗಳನ್ನು ಸೃಷ್ಟಿಸಲು ಅನುಮತಿ ನೀಡಿದ ಸರ್ಕಾರದ ಅಧಿಕಾರಿಗಳ ವಿರುದ್ಧ ಸಿಬಿಐ ಹೆಚ್ಚುವರಿ ತನಿಖೆ ನಡೆಸಬಹುದು ಎಂದು ಹೈಕೋರ್ಟ್ ಹೇಳಿತ್ತು.</p><p>ಅಗತ್ಯ ಬಿದ್ದರೆ, ಅಧಿಕಾರಿಗಳನ್ನು ವಶಕ್ಕೆ ಪಡೆದು ಸಹ ವಿಚಾರಣೆ ನಡೆಸಬಹುದು ಎಂದೂ ಹೇಳಿತ್ತು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಪಶ್ಚಿಮ ಬಂಗಾಳದ ಶಿಕ್ಷಕರ ನೇಮಕಾತಿ ಹಗರಣದಲ್ಲಿ ರಾಜ್ಯ ಸರ್ಕಾರದ ಅಧಿಕಾರಿಗಳ ಪಾತ್ರದ ಕುರಿತಂತೆ ಸಿಬಿಐ ತನಿಖೆಗೆ ನಿರ್ದೇಶಿಸಿದ್ದ ಕಲ್ಕತ್ತ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.</p> <p>ಆದರೆ, 25,000ಕ್ಕೂ ಅಧಿಕ ಮಂದಿ ಶಿಕ್ಷಕರು ಮತ್ತು ಸಹಾಯಕ ಸಿಬ್ಬಂದಿ ನೇಮಕಾತಿಯನ್ನು ರದ್ದುಗೊಳಿಸಿದ ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.</p><p>ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ 25,753 ಶಿಕ್ಷಕರು ಮತ್ತು ಸಹಾಯಕ ಸಿಬ್ಬಂದಿಯನ್ನು ನೇಮಕ ಮಾಡಿದ್ದ ಶಾಲಾ ಸೇವಾ ಆಯೋಗದ(ಎಸ್ಎಸ್ಸಿ) ಪ್ರಕ್ರಿಯೆಯನ್ನು ರದ್ದು ಮಾಡಿದ್ದ ಹೈಕೋರ್ಟ್ ಆದೇಶ ಪ್ರಶ್ನಿಸಿ ಪಶ್ಚಿಮ ಬಂಗಾಳ ಸರ್ಕಾರವು ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.</p><p>ನೇಮಕಾತಿ ರದ್ದು ಆದೇಶಕ್ಕೆ ತಡೆ ನೀಡಲು ನಿರಾಕರಿಸಿದ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್, ನ್ಯಾಯಮೂರ್ತಿ ಪರ್ದಿವಾಲಾ ಮತ್ತು ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು, ಮೇ 6ಕ್ಕೆ ಪ್ರಕರಣದ ಮುಂದಿನ ವಿಚಾರಣೆಯನ್ನು ನಿಗದಿ ಮಾಡಿದೆ.</p><p>‘ರಾಜ್ಯ ಸರ್ಕಾರದ ಅಧಿಕಾರಿಗಳ ವಿರುದ್ಧ ಸಿಬಿಐ ಹೆಚ್ಚಿನ ತನಿಖೆಯನ್ನು ಕೈಗೊಳ್ಳಬಹುದು ಎಂಬ ಹೈಕೋರ್ಟ್ ನಿರ್ದೇಶನವನ್ನು ನಾವು ತಡೆಹಿಡಿಯುತ್ತೇವೆ’ಎಂದು ಪೀಠ ಹೇಳಿದೆ.</p><p>25,000 ಜನರ ಉದ್ಯೋಗ ಕಸಿದು ಬೇರೆಯವರಿಗೆ ನೀಡಿರುವುದು ಗಂಭೀರ ವಿಷಯ. ಲಭ್ಯವಿರುವ ಮಾಹಿತಿಗಳನ್ನು ಆಧರಿಸಿ ಮಾನ್ಯ ಮತ್ತು ಅಮಾನ್ಯವಾದ ನೇಮಕಾತಿಗಳನ್ನು ವಿಂಗಡಿಸಲು ಸಾಧ್ಯವೇ ಎಂದು ನ್ಯಾಯಾಲಯ ಕೇಳಿದೆ.</p><p>ಅಕ್ರಮ ನೇಮಕಾತಿಗಳಿಗೆ ಅನುವು ಮಾಡಿಕೊಡಲು ಸೂಪರ್ ನ್ಯೂಮರಿ ಹುದ್ದೆಗಳನ್ನು ಸೃಷ್ಟಿಸಲು ಅನುಮತಿ ನೀಡಿದ ಸರ್ಕಾರದ ಅಧಿಕಾರಿಗಳ ವಿರುದ್ಧ ಸಿಬಿಐ ಹೆಚ್ಚುವರಿ ತನಿಖೆ ನಡೆಸಬಹುದು ಎಂದು ಹೈಕೋರ್ಟ್ ಹೇಳಿತ್ತು.</p><p>ಅಗತ್ಯ ಬಿದ್ದರೆ, ಅಧಿಕಾರಿಗಳನ್ನು ವಶಕ್ಕೆ ಪಡೆದು ಸಹ ವಿಚಾರಣೆ ನಡೆಸಬಹುದು ಎಂದೂ ಹೇಳಿತ್ತು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>