ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿರುವ ಅರ್ಜಿಯಲ್ಲಿ ಪಶ್ಚಿಮ ಬಂಗಾಳ ಸರ್ಕಾರವು, ನೇಮಕಾತಿಯನ್ನು ಸಕಾರಣ ಇಲ್ಲದೆಯೇ ರದ್ದುಪಡಿಸಲಾಗಿದೆ ಎಂದು ದೂರಿದೆ. ‘ಇಡೀ ನೇಮಕಾತಿ ಪ್ರಕ್ರಿಯೆಯನ್ನು ರದ್ದುಗೊಳಿಸುವ ಪರಿಣಾಮವನ್ನು ಅರ್ಥಮಾಡಿಕೊಳ್ಳುವಲ್ಲಿ ಹೈಕೋರ್ಟ್ ಸೋತಿದೆ. ಇಂಥದ್ದೊಂದು ಪರಿಸ್ಥಿತಿಯನ್ನು ನಿಭಾಯಿಸಲು ರಾಜ್ಯ ಸರ್ಕಾರಕ್ಕೆ ಅವಕಾಶವನ್ನೇ ನೀಡದೆ ಶಿಕ್ಷಕ, ಶಿಕ್ಷಕೇತರರ ನೇಮಕಾತಿಯನ್ನು ಕೋರ್ಟ್ ರದ್ದುಪಡಿಸಿದೆ. ಇದರಿಂದಾಗಿ ಶಿಕ್ಷಣ ವ್ಯವಸ್ಥೆಯು ನಿಲುಗಡೆಯ ಹಂತಕ್ಕೆ ಬಂದಂತಾಗಿದೆ’ ಎಂದು ಸರ್ಕಾರ ಹೇಳಿದೆ.