ನವದೆಹಲಿ: ತಮಿಳುನಾಡಿನ ಬಿಜೆಪಿ ಘಟಕದ ಅಧ್ಯಕ್ಷ ಕೆ. ಅಣ್ಣಾಮಲೈ ಅವರ ವಿರುದ್ಧದ ಕ್ರಿಮಿನಲ್ ಪ್ರಕರಣಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಅಣ್ಣಾಮಲೈ ಅವರು 2022ರ ಅಕ್ಟೋಬರ್ನಲ್ಲಿ ಯೂಟ್ಯೂಬ್ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ, ಪಟಾಕಿ ಸಿಡಿಸುವ ವಿಚಾರವಾಗಿ ಕ್ರೈಸ್ತ ಸಮುದಾಯದ ವಿರುದ್ಧ ದ್ವೇಷದ ಮಾತು ಆಡಿದ್ದರು ಎಂಬ ಆರೋಪ ಇದೆ.