ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರು ನ್ಯಾಯಾಧೀಶೆಯರ ವಜಾ: ಸುಪ್ರೀಂ ಕೋರ್ಟ್‌ನಿಂದ ಪರಿಶೀಲನೆ

Published 12 ಜನವರಿ 2024, 13:40 IST
Last Updated 12 ಜನವರಿ 2024, 13:40 IST
ಅಕ್ಷರ ಗಾತ್ರ

ನವದೆಹಲಿ: ಆರು ಮಂದಿ ನ್ಯಾಯಾಧೀಶೆಯರ ಕಾರ್ಯ ತೃಪ್ತಿಕರವಾಗಿಲ್ಲ ಎಂದು ಮಧ್ಯಪ್ರದೇಶ ಸರ್ಕಾರ, ಅವರನ್ನು ಸೇವೆಯಿಂದ ವಜಾಗೊಳಿಸಿರುವುದರ ವಿರುದ್ಧ ಸಲ್ಲಿಸಲಾದ ಅರ್ಜಿಯನ್ನು ವಿಚಾರಣೆಗೆ ಪರಿಶೀಲಿಸುವುದಾಗಿ ಸುಪ್ರೀಂ ಕೋರ್ಟ್‌ ಹೇಳಿದೆ.

ನ್ಯಾಯಮೂರ್ತಿ ಬಿ.ವಿ.ನಾಗರತ್ನ ಮತ್ತು ಸಂಜಯ್‌ ಕರೋಲ್‌ ಅವರನ್ನು ಒಳಗೊಂಡ ನ್ಯಾಯಪೀಠವು, ಮೂವರು ಮಾಜಿ ನ್ಯಾಯಾಧೀಶೆಯರು ಸಲ್ಲಿಸಿದ ಅರ್ಜಿಯನ್ನು ಸ್ವೀಕರಿಸಿದೆ ಮತ್ತು ಅದನ್ನು ರಿಟ್‌ ಅರ್ಜಿಯಾಗಿ ಪರಿಗಣಿಸಲು ತೀರ್ಮಾನಿಸಿದೆ.

ಈ ವಿಷಯದಲ್ಲಿ ನೆರವು ನೀಡಲು ವಕೀಲ ಗೌರವ್‌ ಅಗರ್ವಾಲ್‌ ಅವರನ್ನು ಅಮಿಕಸ್‌ ಕ್ಯೂರಿಯಾಗಿ (ನ್ಯಾಯಾಲಯಕ್ಕೆ ನೆರವಾಗಲು ನೇಮಕವಾಗುವ ವಕೀಲ) ನೇಮಿಸಿದೆ. 

ಈ ಆರು ಮಂದಿ ಮಾಜಿ ನ್ಯಾಯಾಧೀಶೆಯರು ಪ್ರೊಬೆಷನರಿ ಸಮಯದಲ್ಲಿ ನಿರ್ವಹಿಸಿದ ಕಾರ್ಯವು ತೃಪ್ತಿಕರವಾಗಿಲ್ಲ ಎಂದು ಅವರನ್ನು ವಜಾಗೊಳಿಸಿ ಜೂನ್‌ 2023ರಲ್ಲಿ  ರಾಜ್ಯ ಕಾನೂನು ಇಲಾಖೆ ಆದೇಶ ಹೊರಡಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT