<p><strong>ನವದೆಹಲಿ</strong>: ವಕ್ಫ್ ತಿದ್ದುಪಡಿ ಕಾಯ್ದೆ 2025ರ ಹಲವು ನಿಬಂಧನೆಗಳ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಹೊಸ ಅರ್ಜಿ ವಿಚಾರಣೆಗೆ ಪಟ್ಟಿ ಮಾಡಲು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ.</p><p>ವಕೀಲ ವಿಷ್ಣು ಶಂಕರ್ ಶರ್ಮಾ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆಗೆ ಪಟ್ಟಿ ಮಾಡಲಾಗುವುದು ಎಂದು ಮುಖ್ಯ ನ್ಯಾಯಮೂರ್ತೀ ಸಂಜೀವ್ ಖನ್ನಾ, ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರನ್ನು ಒಳಗೊಂಡ ಪೀಠ ಹೇಳಿದೆ.</p><p>‘ಎಲ್ಲ ವಿಚಾರಗಳನ್ನು ಉಲ್ಲೇಖಿಸಿರುವ ಪಟ್ಟಿ ನೀಡಲಾಗಿದ್ದು, ಬಹುತೇಕ ವಾರದಲ್ಲಿ ದಿನಾಂಕ ನೀಡುತ್ತೇವೆ’ಎಂದು ಸಿಜೆಐ ತಿಳಿಸಿದ್ದಾರೆ.</p><p>ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಸೇರಿದಂತೆ ಇತರರು ಸಲ್ಲಿಸಿರುವ ಸುಮಾರು 10 ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಏಪ್ರಿಲ್ 10ಕ್ಕೆ ನಿಗದಿಪಡಿಸಿದೆ. ಮುಖ್ಯ ನ್ಯಾಯಮೂರ್ತಿ, ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಕೆ.ವಿ. ವಿಶ್ವನಾಥ್ ಅವರನ್ನೊಳಗೊಂಡ ತ್ರಿಸದಸ್ಯ ಪೀಠದ ಮುಂದೆ ಈ ಅರ್ಜಿಗಳು ವಿಚಾರಣೆಗೆ ಬರಲಿವೆ.</p><p> ಹರಿ ಶಂಕರ್ ಜೈನ್ ಮತ್ತು ಮಣಿ ಮುಂಜಾಲ್ ಎಂಬುವವರ ಪರವಾಗಿ ವಕೀಲ ವಿಷ್ಣು ಶಂಕರ್ ಜೈನ್ ಸಲ್ಲಿಸಿರುವ ಹೊಸ ಅರ್ಜಿಯು ಭಾರತ ಸರ್ಕಾರ, ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯ ಮತ್ತು ಕೇಂದ್ರ ವಕ್ಫ್ ಕೌನ್ಸಿಲ್ ವಿರುದ್ಧವಾಗಿದೆ.</p><p>ವಕ್ಫ್ ತಿದ್ದುಪಡಿ ಕಾಯ್ದೆ 2025ರ ನಿಬಂಧನೆಗಳ ಸಾಂವಿಧಾನಿಕ ಸಿಂಧುತ್ವವನ್ನು ಈ ಅರ್ಜಿ ಪ್ರಶ್ನಿಸುತ್ತದೆ.</p><p> ಆ ನಿಬಂಧನೆಗಳು ಭಾರತದ ಸಂವಿಧಾನದ 14, 15, 21, 25,26,27 ಮತ್ತು 300ಎ ವಿಧಿಗಳನ್ನು ಉಲ್ಲಂಘಿಸುತ್ತವೆ. ಇದು ಸಮಾಜದಲ್ಲಿ ಅಸಮತೋಲನ ಮತ್ತು ಕೋಮು ಸೌಹಾರ್ದತೆ ಹದಗೆಡಿಸುತ್ತದೆ ಎಂದು ವಾದಿಸಿದ್ದಾರೆ.</p><p>ವಕ್ಫ್ ಮಂಡಳಿಗಳು, ಈ ಕಾನೂನು ನಿಬಂಧನೆಗಳ ಮೂಲಕ ದೇಶದಾದ್ಯಂತ ಸರ್ಕಾರಿ ಮತ್ತು ಖಾಸಗಿ ಭೂಮಿಯನ್ನು ದೊಡ್ಡ ಪ್ರಮಾಣದಲ್ಲಿ ಆಕ್ರಮಿಸಿಕೊಳ್ಳಲು ಕಾರಣವಾಗುವ ಅತಿಯಾದ ಅಧಿಕಾರವನ್ನು ಪಡೆದಿವೆ ಎಂದು ಅದು ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ವಕ್ಫ್ ತಿದ್ದುಪಡಿ ಕಾಯ್ದೆ 2025ರ ಹಲವು ನಿಬಂಧನೆಗಳ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಹೊಸ ಅರ್ಜಿ ವಿಚಾರಣೆಗೆ ಪಟ್ಟಿ ಮಾಡಲು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ.</p><p>ವಕೀಲ ವಿಷ್ಣು ಶಂಕರ್ ಶರ್ಮಾ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆಗೆ ಪಟ್ಟಿ ಮಾಡಲಾಗುವುದು ಎಂದು ಮುಖ್ಯ ನ್ಯಾಯಮೂರ್ತೀ ಸಂಜೀವ್ ಖನ್ನಾ, ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರನ್ನು ಒಳಗೊಂಡ ಪೀಠ ಹೇಳಿದೆ.</p><p>‘ಎಲ್ಲ ವಿಚಾರಗಳನ್ನು ಉಲ್ಲೇಖಿಸಿರುವ ಪಟ್ಟಿ ನೀಡಲಾಗಿದ್ದು, ಬಹುತೇಕ ವಾರದಲ್ಲಿ ದಿನಾಂಕ ನೀಡುತ್ತೇವೆ’ಎಂದು ಸಿಜೆಐ ತಿಳಿಸಿದ್ದಾರೆ.</p><p>ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಸೇರಿದಂತೆ ಇತರರು ಸಲ್ಲಿಸಿರುವ ಸುಮಾರು 10 ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಏಪ್ರಿಲ್ 10ಕ್ಕೆ ನಿಗದಿಪಡಿಸಿದೆ. ಮುಖ್ಯ ನ್ಯಾಯಮೂರ್ತಿ, ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಕೆ.ವಿ. ವಿಶ್ವನಾಥ್ ಅವರನ್ನೊಳಗೊಂಡ ತ್ರಿಸದಸ್ಯ ಪೀಠದ ಮುಂದೆ ಈ ಅರ್ಜಿಗಳು ವಿಚಾರಣೆಗೆ ಬರಲಿವೆ.</p><p> ಹರಿ ಶಂಕರ್ ಜೈನ್ ಮತ್ತು ಮಣಿ ಮುಂಜಾಲ್ ಎಂಬುವವರ ಪರವಾಗಿ ವಕೀಲ ವಿಷ್ಣು ಶಂಕರ್ ಜೈನ್ ಸಲ್ಲಿಸಿರುವ ಹೊಸ ಅರ್ಜಿಯು ಭಾರತ ಸರ್ಕಾರ, ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯ ಮತ್ತು ಕೇಂದ್ರ ವಕ್ಫ್ ಕೌನ್ಸಿಲ್ ವಿರುದ್ಧವಾಗಿದೆ.</p><p>ವಕ್ಫ್ ತಿದ್ದುಪಡಿ ಕಾಯ್ದೆ 2025ರ ನಿಬಂಧನೆಗಳ ಸಾಂವಿಧಾನಿಕ ಸಿಂಧುತ್ವವನ್ನು ಈ ಅರ್ಜಿ ಪ್ರಶ್ನಿಸುತ್ತದೆ.</p><p> ಆ ನಿಬಂಧನೆಗಳು ಭಾರತದ ಸಂವಿಧಾನದ 14, 15, 21, 25,26,27 ಮತ್ತು 300ಎ ವಿಧಿಗಳನ್ನು ಉಲ್ಲಂಘಿಸುತ್ತವೆ. ಇದು ಸಮಾಜದಲ್ಲಿ ಅಸಮತೋಲನ ಮತ್ತು ಕೋಮು ಸೌಹಾರ್ದತೆ ಹದಗೆಡಿಸುತ್ತದೆ ಎಂದು ವಾದಿಸಿದ್ದಾರೆ.</p><p>ವಕ್ಫ್ ಮಂಡಳಿಗಳು, ಈ ಕಾನೂನು ನಿಬಂಧನೆಗಳ ಮೂಲಕ ದೇಶದಾದ್ಯಂತ ಸರ್ಕಾರಿ ಮತ್ತು ಖಾಸಗಿ ಭೂಮಿಯನ್ನು ದೊಡ್ಡ ಪ್ರಮಾಣದಲ್ಲಿ ಆಕ್ರಮಿಸಿಕೊಳ್ಳಲು ಕಾರಣವಾಗುವ ಅತಿಯಾದ ಅಧಿಕಾರವನ್ನು ಪಡೆದಿವೆ ಎಂದು ಅದು ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>