<p><strong>ನವದೆಹಲಿ</strong>: ಆಧಾರ್ ಕಾಯ್ದೆಯಂತಹ ಕೆಲವೊಂದು ಹಣಕಾಸು ಮಸೂದೆಗಳು ರಾಜ್ಯಸಭೆಯಲ್ಲಿ ಚರ್ಚಿಸಲು ಅವಕಾಶ ಸಿಗದೆ ಅಂಗೀಕಾರವಾದುದರ ಸಿಂಧುತ್ವ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಗಾಗಿ ಸಂವಿಧಾನ ಪೀಠವೊಂದನ್ನು ಸ್ಥಾಪಿಸಬೇಕು ಎಂಬ ಮನವಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ಸೋಮವಾರ ಒಪ್ಪಿಕೊಂಡಿದೆ.</p>.<p>ಸುಪ್ರೀಂ ಕೋರ್ಟ್ನ ವಕೀಲರ ಸಂಘದ ಮುಖ್ಯಸ್ಥರೂ ಆಗಿರುವ ಹಿರಿಯ ವಕೀಲ ಕಪಿಲ್ ಸಿಬಲ್ ಅವರು ಈ ಕುರಿತು ಅರ್ಜಿಗಳನ್ನು ವಿಚಾರಣೆಗೆ ಪಟ್ಟಿ ಮಾಡುವಂತೆ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದೀವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠಕ್ಕೆ ಮನವಿ ಮಾಡಿದರು.</p>.<p>ಸಾಂವಿಧಾನಿಕ ಪೀಠಗಳನ್ನು ರಚಿಸಿದಾಗ ಇದನ್ನು ಪರಿಶೀಲಿಸುವುದಾಗಿ ಈ ವೇಳೆ ಮುಖ್ಯ ನ್ಯಾಯಮೂರ್ತಿ ತಿಳಿಸಿದರು. ಇದಕ್ಕೂ ಮುನ್ನ, ಈ ಕುರಿತು ಏಳು ನ್ಯಾಯಮೂರ್ತಿಗಳ ಪೀಠವನ್ನು ರಚಿಸುವುದಾಗಿ ಪೀಠ ಹೇಳಿತ್ತು. </p>.<p>ಆಧಾರ್ ಕಾಯ್ದೆ, ಹಣ ಅಕ್ರಮ ವರ್ಗಾವಣೆ ಕಾಯ್ದೆ (ಪಿಎಂಎಲ್ಎ) ತಿದ್ದುಪಡಿಗಳನ್ನೂ ಹಣಕಾಸು ಮಸೂದೆಯಾಗಿ ಪರಿವರ್ತಿಸಲಾಗಿತ್ತು. ರಾಜ್ಯಸಭೆಯಲ್ಲಿ ಸರ್ಕಾರಕ್ಕೆ ಬಹುಮತ ಇಲ್ಲದಿದ್ದಾಗ, ಅಲ್ಲಿ ಅಂಗೀಕಾರ ಪಡೆಯುವುದನ್ನು ತಪ್ಪಿಸಲು ಸರ್ಕಾರ ಈ ರೀತಿ ನಡೆದುಕೊಂಡಿದೆ ಎಂಬ ಆರೋಪಗಳಿವೆ.</p>.<p>ಹಣಕಾಸು ಮಸೂದೆಯನ್ನು ಲೋಕಸಭೆಯಲ್ಲಿ ಮಾತ್ರ ಮಂಡಿಸಬೇಕು. ಅದಕ್ಕೆ ತಿದ್ದುಪಡಿ ಮಾಡುವ ಅಥವಾ ತಿರಸ್ಕರಿಸುವ ಅಧಿಕಾರ ರಾಜ್ಯಸಭೆಗೆ ಇಲ್ಲ. ಮೇಲ್ಮನೆಯು ಈ ಮಸೂದೆಗೆ ಶಿಫಾರಸುಗಳನ್ನು ಮಾತ್ರ ಮಾಡಬಹುದು. ಅದನ್ನು ಸ್ವೀಕರಿಸುವ ಅಥವಾ ತಿರಸ್ಕರಿಸುವ ಅಧಿಕಾರ ಕೆಳಮನೆಗೆ ಇರುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಆಧಾರ್ ಕಾಯ್ದೆಯಂತಹ ಕೆಲವೊಂದು ಹಣಕಾಸು ಮಸೂದೆಗಳು ರಾಜ್ಯಸಭೆಯಲ್ಲಿ ಚರ್ಚಿಸಲು ಅವಕಾಶ ಸಿಗದೆ ಅಂಗೀಕಾರವಾದುದರ ಸಿಂಧುತ್ವ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಗಾಗಿ ಸಂವಿಧಾನ ಪೀಠವೊಂದನ್ನು ಸ್ಥಾಪಿಸಬೇಕು ಎಂಬ ಮನವಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ಸೋಮವಾರ ಒಪ್ಪಿಕೊಂಡಿದೆ.</p>.<p>ಸುಪ್ರೀಂ ಕೋರ್ಟ್ನ ವಕೀಲರ ಸಂಘದ ಮುಖ್ಯಸ್ಥರೂ ಆಗಿರುವ ಹಿರಿಯ ವಕೀಲ ಕಪಿಲ್ ಸಿಬಲ್ ಅವರು ಈ ಕುರಿತು ಅರ್ಜಿಗಳನ್ನು ವಿಚಾರಣೆಗೆ ಪಟ್ಟಿ ಮಾಡುವಂತೆ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದೀವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠಕ್ಕೆ ಮನವಿ ಮಾಡಿದರು.</p>.<p>ಸಾಂವಿಧಾನಿಕ ಪೀಠಗಳನ್ನು ರಚಿಸಿದಾಗ ಇದನ್ನು ಪರಿಶೀಲಿಸುವುದಾಗಿ ಈ ವೇಳೆ ಮುಖ್ಯ ನ್ಯಾಯಮೂರ್ತಿ ತಿಳಿಸಿದರು. ಇದಕ್ಕೂ ಮುನ್ನ, ಈ ಕುರಿತು ಏಳು ನ್ಯಾಯಮೂರ್ತಿಗಳ ಪೀಠವನ್ನು ರಚಿಸುವುದಾಗಿ ಪೀಠ ಹೇಳಿತ್ತು. </p>.<p>ಆಧಾರ್ ಕಾಯ್ದೆ, ಹಣ ಅಕ್ರಮ ವರ್ಗಾವಣೆ ಕಾಯ್ದೆ (ಪಿಎಂಎಲ್ಎ) ತಿದ್ದುಪಡಿಗಳನ್ನೂ ಹಣಕಾಸು ಮಸೂದೆಯಾಗಿ ಪರಿವರ್ತಿಸಲಾಗಿತ್ತು. ರಾಜ್ಯಸಭೆಯಲ್ಲಿ ಸರ್ಕಾರಕ್ಕೆ ಬಹುಮತ ಇಲ್ಲದಿದ್ದಾಗ, ಅಲ್ಲಿ ಅಂಗೀಕಾರ ಪಡೆಯುವುದನ್ನು ತಪ್ಪಿಸಲು ಸರ್ಕಾರ ಈ ರೀತಿ ನಡೆದುಕೊಂಡಿದೆ ಎಂಬ ಆರೋಪಗಳಿವೆ.</p>.<p>ಹಣಕಾಸು ಮಸೂದೆಯನ್ನು ಲೋಕಸಭೆಯಲ್ಲಿ ಮಾತ್ರ ಮಂಡಿಸಬೇಕು. ಅದಕ್ಕೆ ತಿದ್ದುಪಡಿ ಮಾಡುವ ಅಥವಾ ತಿರಸ್ಕರಿಸುವ ಅಧಿಕಾರ ರಾಜ್ಯಸಭೆಗೆ ಇಲ್ಲ. ಮೇಲ್ಮನೆಯು ಈ ಮಸೂದೆಗೆ ಶಿಫಾರಸುಗಳನ್ನು ಮಾತ್ರ ಮಾಡಬಹುದು. ಅದನ್ನು ಸ್ವೀಕರಿಸುವ ಅಥವಾ ತಿರಸ್ಕರಿಸುವ ಅಧಿಕಾರ ಕೆಳಮನೆಗೆ ಇರುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>