ಶರದ್ ಪವಾರ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನುಸಿಂಘ್ವಿ, ‘ನಮ್ಮ ಪಕ್ಷಕ್ಕೆ ಪರ್ಯಾಯವಾಗಿ ಯಾವುದೇ ಚಿಹ್ನೆ ನೀಡಿಲ್ಲ. ಇದರಿಂದಾಗಿ ನಮ್ಮ ಪರಿಸ್ಥಿತಿಯು ಉದ್ಧವ್ ಠಾಕ್ರೆ ಅವರ ಪಕ್ಷಕ್ಕಿಂತಲೂ ಶೋಚನೀಯವಾಗಿದೆ. ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ್ ಅವರ ಇತ್ತೀಚಿನ ಆದೇಶದ ಹಿನ್ನೆಲೆಯಲ್ಲಿ ತ್ವರಿತ ವಿಚಾರಣೆ ನಡೆಸಬೇಕು’ ಎಂದು ಸುಪ್ರೀಂ ಕೋರ್ಟ್ಗೆ ಕೋರಿದರು.