<p><strong>ನವದೆಹಲಿ</strong>: ಉಚಿತ ಕೊಡುಗೆಗಳನ್ನು ನೀಡುವುದಾಗಿ ರಾಜಕೀಯ ಪಕ್ಷಗಳು ಚುನಾವಣೆಗೂ ಮೊದಲು ಭರವಸೆ ನೀಡುವುದನ್ನು ‘ಭ್ರಷ್ಟ ಮಾರ್ಗ’ ಎಂದು ಘೋಷಿಸುವಂತೆ ಕೋರಿರುವ ಹೊಸ ಅರ್ಜಿಯೊಂದನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲು ಸುಪ್ರೀಂ ಕೋರ್ಟ್ ಶುಕ್ರವಾರ ತೀರ್ಮಾನಿಸಿದೆ.</p>.<p>ಬೆಂಗಳೂರಿನ ಲಕ್ಷ್ಮೀದೇವಿ ಎನ್ನುವವರು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿಗೆ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ. ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠವೊಂದು ಸೂಚಿಸಿದೆ.</p>.<p>ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಸಲ್ಲಿಸಿರುವ ಇದೇ ಸ್ವರೂಪದ ಇನ್ನೊಂದು ಅರ್ಜಿಯ ಜೊತೆಯಲ್ಲೇ ಈ ಅರ್ಜಿಯನ್ನೂ ಇರಿಸುವಂತೆ ಕೋರ್ಟ್ ಸೂಚನೆ ನೀಡಿದೆ.</p>.<p>ಚುನಾವಣಾ ಪ್ರಕ್ರಿಯೆಯು ಋಜು ಮಾರ್ಗದಲ್ಲಿ ನಡೆಯುವುದನ್ನು ಖಾತರಿಪಡಿಸಲು, ಸಾರ್ವಜನಿಕ ನಿಧಿಯನ್ನು ಜವಾಬ್ದಾರಿಯಿಂದ ಬಳಕೆ ಮಾಡುವಂತಾಗಲು ಚುನಾವಣಾ ಪ್ರಣಾಳಿಕೆಗಳಿಗೆ ಸಂಬಂಧಿಸಿದಂತೆ ಸ್ಪಷ್ಟ ನಿಯಮಗಳು ಇರಬೇಕು. ಅವಾಸ್ತವಿಕವಾದ ಹಾಗೂ ಹಣಕಾಸಿನ ದೃಷ್ಟಿಯಿಂದ ಹೊರೆಯಂತೆ ಆಗುವ ಭರವಸೆಗಳನ್ನು ನೀಡುವುದನ್ನು ನಿಷೇಧಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.</p>.<p>‘ಇಂತಹ ನಿಯಮಗಳು ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಯ ತತ್ವವನ್ನು ರಕ್ಷಿಸುವಂತೆ ಇರಬೇಕು. ರಾಜ್ಯಗಳ ಹಣಕಾಸಿನ ಆರೋಗ್ಯವನ್ನು ಕಾಯುವಂತೆ ಮತ್ತು ಮತದಾರರ ಹಿತವನ್ನು ಕಾಯುವಂತೆ ಇರಬೇಕು’ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.</p>.<p>ಚುನಾವಣೆ ಸಂದರ್ಭದಲ್ಲಿ ರಾಜಕೀಯ ಪಕ್ಷಗಳು ತಾವು ಅಧಿಕಾರಕ್ಕೆ ಬಂದರೆ ಸರ್ಕಾರದ ಬೊಕ್ಕಸದಿಂದ ಉಚಿತ ಕೊಡುಗೆ ನೀಡಲಾಗುವುದು ಎಂಬ ಭರವಸೆ ಕೊಡುವುದನ್ನು, ಅದರಲ್ಲೂ ಮುಖ್ಯವಾಗಿ ಹಣದ ರೂಪದಲ್ಲಿ ಉಚಿತ ಕೊಡುಗೆ ನೀಡಲಾಗುವುದು ಎಂದು ಹೇಳುವುದನ್ನು, ಪ್ರಜಾ ಪ್ರಾತಿನಿಧ್ಯ ಕಾಯ್ದೆ – 1951ರ ಅಡಿಯಲ್ಲಿ ಭ್ರಷ್ಟ ಮಾರ್ಗ ಎಂದು ಘೋಷಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.</p>.<p>ಕರ್ನಾಟಕದ ಉದಾಹರಣೆಯನ್ನು ನೀಡಿರುವ ಅರ್ಜಿಯು, ಉಚಿತ ಕೊಡುಗೆಗಳನ್ನು ನೀಡುವುದಾಗಿ ಯಾವ ನಿಯಂತ್ರಣವೂ ಇಲ್ಲದೆ ಭರವಸೆ ಕೊಟ್ಟ ಕಾರಣದಿಂದಾಗಿ, ಸರ್ಕಾರದ ಬೊಕ್ಕಸದ ಮೇಲೆ ಗಣನೀಯವಾದ ಹಾಗೂ ಉತ್ತರದಾಯಿತ್ವ ಇಲ್ಲದ ಹೊರೆ ಬಿದ್ದಿದೆ ಎಂದು ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಉಚಿತ ಕೊಡುಗೆಗಳನ್ನು ನೀಡುವುದಾಗಿ ರಾಜಕೀಯ ಪಕ್ಷಗಳು ಚುನಾವಣೆಗೂ ಮೊದಲು ಭರವಸೆ ನೀಡುವುದನ್ನು ‘ಭ್ರಷ್ಟ ಮಾರ್ಗ’ ಎಂದು ಘೋಷಿಸುವಂತೆ ಕೋರಿರುವ ಹೊಸ ಅರ್ಜಿಯೊಂದನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲು ಸುಪ್ರೀಂ ಕೋರ್ಟ್ ಶುಕ್ರವಾರ ತೀರ್ಮಾನಿಸಿದೆ.</p>.<p>ಬೆಂಗಳೂರಿನ ಲಕ್ಷ್ಮೀದೇವಿ ಎನ್ನುವವರು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿಗೆ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ. ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠವೊಂದು ಸೂಚಿಸಿದೆ.</p>.<p>ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಸಲ್ಲಿಸಿರುವ ಇದೇ ಸ್ವರೂಪದ ಇನ್ನೊಂದು ಅರ್ಜಿಯ ಜೊತೆಯಲ್ಲೇ ಈ ಅರ್ಜಿಯನ್ನೂ ಇರಿಸುವಂತೆ ಕೋರ್ಟ್ ಸೂಚನೆ ನೀಡಿದೆ.</p>.<p>ಚುನಾವಣಾ ಪ್ರಕ್ರಿಯೆಯು ಋಜು ಮಾರ್ಗದಲ್ಲಿ ನಡೆಯುವುದನ್ನು ಖಾತರಿಪಡಿಸಲು, ಸಾರ್ವಜನಿಕ ನಿಧಿಯನ್ನು ಜವಾಬ್ದಾರಿಯಿಂದ ಬಳಕೆ ಮಾಡುವಂತಾಗಲು ಚುನಾವಣಾ ಪ್ರಣಾಳಿಕೆಗಳಿಗೆ ಸಂಬಂಧಿಸಿದಂತೆ ಸ್ಪಷ್ಟ ನಿಯಮಗಳು ಇರಬೇಕು. ಅವಾಸ್ತವಿಕವಾದ ಹಾಗೂ ಹಣಕಾಸಿನ ದೃಷ್ಟಿಯಿಂದ ಹೊರೆಯಂತೆ ಆಗುವ ಭರವಸೆಗಳನ್ನು ನೀಡುವುದನ್ನು ನಿಷೇಧಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.</p>.<p>‘ಇಂತಹ ನಿಯಮಗಳು ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಯ ತತ್ವವನ್ನು ರಕ್ಷಿಸುವಂತೆ ಇರಬೇಕು. ರಾಜ್ಯಗಳ ಹಣಕಾಸಿನ ಆರೋಗ್ಯವನ್ನು ಕಾಯುವಂತೆ ಮತ್ತು ಮತದಾರರ ಹಿತವನ್ನು ಕಾಯುವಂತೆ ಇರಬೇಕು’ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.</p>.<p>ಚುನಾವಣೆ ಸಂದರ್ಭದಲ್ಲಿ ರಾಜಕೀಯ ಪಕ್ಷಗಳು ತಾವು ಅಧಿಕಾರಕ್ಕೆ ಬಂದರೆ ಸರ್ಕಾರದ ಬೊಕ್ಕಸದಿಂದ ಉಚಿತ ಕೊಡುಗೆ ನೀಡಲಾಗುವುದು ಎಂಬ ಭರವಸೆ ಕೊಡುವುದನ್ನು, ಅದರಲ್ಲೂ ಮುಖ್ಯವಾಗಿ ಹಣದ ರೂಪದಲ್ಲಿ ಉಚಿತ ಕೊಡುಗೆ ನೀಡಲಾಗುವುದು ಎಂದು ಹೇಳುವುದನ್ನು, ಪ್ರಜಾ ಪ್ರಾತಿನಿಧ್ಯ ಕಾಯ್ದೆ – 1951ರ ಅಡಿಯಲ್ಲಿ ಭ್ರಷ್ಟ ಮಾರ್ಗ ಎಂದು ಘೋಷಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.</p>.<p>ಕರ್ನಾಟಕದ ಉದಾಹರಣೆಯನ್ನು ನೀಡಿರುವ ಅರ್ಜಿಯು, ಉಚಿತ ಕೊಡುಗೆಗಳನ್ನು ನೀಡುವುದಾಗಿ ಯಾವ ನಿಯಂತ್ರಣವೂ ಇಲ್ಲದೆ ಭರವಸೆ ಕೊಟ್ಟ ಕಾರಣದಿಂದಾಗಿ, ಸರ್ಕಾರದ ಬೊಕ್ಕಸದ ಮೇಲೆ ಗಣನೀಯವಾದ ಹಾಗೂ ಉತ್ತರದಾಯಿತ್ವ ಇಲ್ಲದ ಹೊರೆ ಬಿದ್ದಿದೆ ಎಂದು ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>