<p><strong>ನವದೆಹಲಿ</strong>: ಎರಡನೇ ಮಗುವಿನ ಆಕಾಂಕ್ಷೆ ಇದ್ದರೂ ಪತ್ನಿಗೆ ಮತ್ತೊಮ್ಮೆ ಗರ್ಭಧರಿಸುವ ಸಾಧ್ಯತೆ ಇಲ್ಲದಿದ್ದಾಗ ಬಾಡಿಗೆ ತಾಯ್ತನದ ಮೂಲಕ ಮಗು ಪಡೆದುಕೊಳ್ಳಲು ಕಾನೂನಿನಲ್ಲಿ ಅವಕಾಶ ಇಲ್ಲದಿರುವ ಬಗ್ಗೆ ಪರಿಶೀಲನೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಬುಧವಾರ ಹೇಳಿದೆ.</p>.<p>ಜೈವಿಕವಾಗಿ ಎರಡನೇ ಮಗು ಪಡೆದುಕೊಳ್ಳಲು ಸಾಧ್ಯವಿಲ್ಲದ ದಂಪತಿಯೊಬ್ಬರು ಈ ಬಗ್ಗೆ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಆರ್. ಮಹದೇವನ್ ಅವರ ಪೀಠವು ಈ ಅರ್ಜಿಯ ವಿಚಾರಣೆ ನಡೆಸಿತು.</p>.<p>‘ದೇಶದಲ್ಲಿ ಜನಸಂಖ್ಯೆ ಅಧಿಕವಾಗುತ್ತಿದೆ. ಈ ದೃಷ್ಟಿಯಿಂದ ಬಾಡಿಗೆ ತಾಯ್ತನದ ಮೂಲಕ ಎರಡನೇ ಮಗು ಪಡೆದುಕೊಳ್ಳಲು ನಿರ್ಬಂಧ ಇರುವುದು ಸರಿಯಾಗಿಯೇ ಇದೆಯಲ್ಲವೇ’ ಎಂದು ನ್ಯಾ. ನಾಗರತ್ನ ಅವರು ಅಭಿಪ್ರಾಯಪಟ್ಟರು.</p>.<p>ದಂಪತಿ ಪರ ಹಾಜರಿದ್ದ ವಕೀಲೆ ಪ್ರತಿಕ್ರಿಯಿಸಿ, ‘ಸರ್ಕಾರವು ವ್ಯಕ್ತಿಯ ವೈಯಕ್ತಿಕ ಬದುಕಿನಲ್ಲಿ ಮತ್ತು ಸಂತಾನೋತ್ಪತ್ತಿಗೆ ಸಂಬಂಧಿಸಿದ ಆಯ್ಕೆಯಲ್ಲಿಯೂ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ’ ಎಂದರು.</p>.<p>‘ಸಂತಾನೋತ್ಪತ್ತಿ ತಂತ್ರಜ್ಞಾನ ಕಾಯ್ದೆ ಮತ್ತು ಬಾಡಿಗೆ ತಾಯ್ತನ ಕಾಯ್ದೆಯಲ್ಲಿ ‘ಬಂಜೆತನ’ ಅಂದರೆ ಏನು ಎಂಬುದನ್ನು ವಿವರಿಸಲಾಗಿದೆ. ಬಾಡಿಗೆ ತಾಯ್ತನದ ಮೂಲಕ ಮೊದಲನೇ ಮಗುವನ್ನು ಮಾತ್ರವೇ ಪಡೆದುಕೊಳ್ಳಬೇಕು ಎಂಬುದಾಗಿ ಈ ಕಾಯ್ದೆಗಳಲ್ಲಿ ವಿವರಿಸಲಾಗಿಲ್ಲ’ ಎಂದು ವಕೀಲೆ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಎರಡನೇ ಮಗುವಿನ ಆಕಾಂಕ್ಷೆ ಇದ್ದರೂ ಪತ್ನಿಗೆ ಮತ್ತೊಮ್ಮೆ ಗರ್ಭಧರಿಸುವ ಸಾಧ್ಯತೆ ಇಲ್ಲದಿದ್ದಾಗ ಬಾಡಿಗೆ ತಾಯ್ತನದ ಮೂಲಕ ಮಗು ಪಡೆದುಕೊಳ್ಳಲು ಕಾನೂನಿನಲ್ಲಿ ಅವಕಾಶ ಇಲ್ಲದಿರುವ ಬಗ್ಗೆ ಪರಿಶೀಲನೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಬುಧವಾರ ಹೇಳಿದೆ.</p>.<p>ಜೈವಿಕವಾಗಿ ಎರಡನೇ ಮಗು ಪಡೆದುಕೊಳ್ಳಲು ಸಾಧ್ಯವಿಲ್ಲದ ದಂಪತಿಯೊಬ್ಬರು ಈ ಬಗ್ಗೆ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಆರ್. ಮಹದೇವನ್ ಅವರ ಪೀಠವು ಈ ಅರ್ಜಿಯ ವಿಚಾರಣೆ ನಡೆಸಿತು.</p>.<p>‘ದೇಶದಲ್ಲಿ ಜನಸಂಖ್ಯೆ ಅಧಿಕವಾಗುತ್ತಿದೆ. ಈ ದೃಷ್ಟಿಯಿಂದ ಬಾಡಿಗೆ ತಾಯ್ತನದ ಮೂಲಕ ಎರಡನೇ ಮಗು ಪಡೆದುಕೊಳ್ಳಲು ನಿರ್ಬಂಧ ಇರುವುದು ಸರಿಯಾಗಿಯೇ ಇದೆಯಲ್ಲವೇ’ ಎಂದು ನ್ಯಾ. ನಾಗರತ್ನ ಅವರು ಅಭಿಪ್ರಾಯಪಟ್ಟರು.</p>.<p>ದಂಪತಿ ಪರ ಹಾಜರಿದ್ದ ವಕೀಲೆ ಪ್ರತಿಕ್ರಿಯಿಸಿ, ‘ಸರ್ಕಾರವು ವ್ಯಕ್ತಿಯ ವೈಯಕ್ತಿಕ ಬದುಕಿನಲ್ಲಿ ಮತ್ತು ಸಂತಾನೋತ್ಪತ್ತಿಗೆ ಸಂಬಂಧಿಸಿದ ಆಯ್ಕೆಯಲ್ಲಿಯೂ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ’ ಎಂದರು.</p>.<p>‘ಸಂತಾನೋತ್ಪತ್ತಿ ತಂತ್ರಜ್ಞಾನ ಕಾಯ್ದೆ ಮತ್ತು ಬಾಡಿಗೆ ತಾಯ್ತನ ಕಾಯ್ದೆಯಲ್ಲಿ ‘ಬಂಜೆತನ’ ಅಂದರೆ ಏನು ಎಂಬುದನ್ನು ವಿವರಿಸಲಾಗಿದೆ. ಬಾಡಿಗೆ ತಾಯ್ತನದ ಮೂಲಕ ಮೊದಲನೇ ಮಗುವನ್ನು ಮಾತ್ರವೇ ಪಡೆದುಕೊಳ್ಳಬೇಕು ಎಂಬುದಾಗಿ ಈ ಕಾಯ್ದೆಗಳಲ್ಲಿ ವಿವರಿಸಲಾಗಿಲ್ಲ’ ಎಂದು ವಕೀಲೆ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>