<p><strong>ನವದೆಹಲಿ</strong>: ಪೂರ್ವಜರ ಆಸ್ತಿಗಳ ಕುರಿತ ವ್ಯಾಜ್ಯಗಳಿಗೆ ಸಂಬಂಧಿಸಿ ಮುಸ್ಲಿಮರಿಗೆ ಶರಿಯಾ ಬದಲು, ಧಾರ್ಮಿಕ ನಂಬಿಕೆಗಳನ್ನು ನಿರಾಕರಿಸದೇ ಅವರಿಗೂ ಜಾತ್ಯತೀತವಾದ ಉತ್ತರಾಧಿಕಾರ ಕಾಯ್ದೆ ಅನ್ವಯಿಸಬೇಕೆ ಎಂಬುದನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿದೆ.</p>.<p>ಕೇರಳದ ತ್ರಿಶ್ಶೂರಿನ ನೌಶಾದ್ ಕೆ.ಕೆ ಎಂಬುವವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಸಂಜೀವ್ ಖನ್ನಾ ಹಾಗೂ ನ್ಯಾಯಮೂರ್ತಿ ಸಂಜಯ ಕುಮಾರ್ ಅವರು ಇದ್ದ ಪೀಠ ಈ ಮಾತು ಹೇಳಿದೆ.</p>.<p>ಈ ಕುರಿತು ಪ್ರತಿಕ್ರಿಯೆ ಸಲ್ಲಿಸುವಂತೆ ಕೇಂದ್ರ ಹಾಗೂ ಕೇರಳ ಸರ್ಕಾರಕ್ಕೆ ಪೀಠ ನೋಟಿಸ್ ಜಾರಿ ಮಾಡಿತು. ಅಲ್ಲದೇ, ಇದೇ ವಿಚಾರಕ್ಕೆ ಸಂಬಂಧಿಸಿ ವಿಚಾರಣೆಗೆ ಬಾಕಿ ಇರುವ ಅರ್ಜಿಗಳೊಂದಿಗೆ ಈ ಮೇಲ್ಮನವಿಯನ್ನು ಸೇರಿಸುವಂತೆಯೂ ಪೀಠ ಆದೇಶಿಸಿದೆ.</p>.<p>‘ನಾನು ಇಸ್ಲಾಂ ತ್ಯಜಿಸಿದ್ದೇನೆ. ಈ ಕಾರಣಕ್ಕೆ ನನಗೆ ಶರಿಯಾ ಬದಲು ಉತ್ತರಾಧಿಕಾರ ಕಾಯ್ದೆ ಅನ್ವಯಿಸಬೇಕು’ ಎಂದು ನೌಶಾದ್ ಕೋರಿದ್ದಾರೆ.</p>.<p>ಅಲಪ್ಪುಳ ನಿವಾಸಿ ಹಾಗೂ ‘ಎಕ್ಸ್ ಮುಸ್ಲಿಮ್ಸ್ ಆಫ್ ಕೇರಳ’ ಸಂಘಟನೆ ಪ್ರಧಾನ ಕಾರ್ಯದರ್ಶಿ ಸಫಿಯ ಪಿ.ಎಂ ಅವರು ಇಂಥದೇ ಬೇಡಿಕೆವುಳ್ಳ ಅರ್ಜಿಯನ್ನು ಸಲ್ಲಿಸಿದ್ದಾರೆ. ‘ಕುರಾನ್ ಸುನ್ನತ್ ಸೊಸೈಟಿ’ ಕೂಡ ಇದೇ ಬೇಡಿಕೆ ಮುಂದಿಟ್ಟುಕೊಂಡು 2016ರಲ್ಲಿ ಮೇಲ್ಮನವಿ ಸಲ್ಲಿಸಿದೆ. ಈ ಮೂರು ಅರ್ಜಿಗಳ ವಿಚಾರಣೆಯನ್ನು ಪೀಠ ನಡೆಸಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಪೂರ್ವಜರ ಆಸ್ತಿಗಳ ಕುರಿತ ವ್ಯಾಜ್ಯಗಳಿಗೆ ಸಂಬಂಧಿಸಿ ಮುಸ್ಲಿಮರಿಗೆ ಶರಿಯಾ ಬದಲು, ಧಾರ್ಮಿಕ ನಂಬಿಕೆಗಳನ್ನು ನಿರಾಕರಿಸದೇ ಅವರಿಗೂ ಜಾತ್ಯತೀತವಾದ ಉತ್ತರಾಧಿಕಾರ ಕಾಯ್ದೆ ಅನ್ವಯಿಸಬೇಕೆ ಎಂಬುದನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿದೆ.</p>.<p>ಕೇರಳದ ತ್ರಿಶ್ಶೂರಿನ ನೌಶಾದ್ ಕೆ.ಕೆ ಎಂಬುವವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಸಂಜೀವ್ ಖನ್ನಾ ಹಾಗೂ ನ್ಯಾಯಮೂರ್ತಿ ಸಂಜಯ ಕುಮಾರ್ ಅವರು ಇದ್ದ ಪೀಠ ಈ ಮಾತು ಹೇಳಿದೆ.</p>.<p>ಈ ಕುರಿತು ಪ್ರತಿಕ್ರಿಯೆ ಸಲ್ಲಿಸುವಂತೆ ಕೇಂದ್ರ ಹಾಗೂ ಕೇರಳ ಸರ್ಕಾರಕ್ಕೆ ಪೀಠ ನೋಟಿಸ್ ಜಾರಿ ಮಾಡಿತು. ಅಲ್ಲದೇ, ಇದೇ ವಿಚಾರಕ್ಕೆ ಸಂಬಂಧಿಸಿ ವಿಚಾರಣೆಗೆ ಬಾಕಿ ಇರುವ ಅರ್ಜಿಗಳೊಂದಿಗೆ ಈ ಮೇಲ್ಮನವಿಯನ್ನು ಸೇರಿಸುವಂತೆಯೂ ಪೀಠ ಆದೇಶಿಸಿದೆ.</p>.<p>‘ನಾನು ಇಸ್ಲಾಂ ತ್ಯಜಿಸಿದ್ದೇನೆ. ಈ ಕಾರಣಕ್ಕೆ ನನಗೆ ಶರಿಯಾ ಬದಲು ಉತ್ತರಾಧಿಕಾರ ಕಾಯ್ದೆ ಅನ್ವಯಿಸಬೇಕು’ ಎಂದು ನೌಶಾದ್ ಕೋರಿದ್ದಾರೆ.</p>.<p>ಅಲಪ್ಪುಳ ನಿವಾಸಿ ಹಾಗೂ ‘ಎಕ್ಸ್ ಮುಸ್ಲಿಮ್ಸ್ ಆಫ್ ಕೇರಳ’ ಸಂಘಟನೆ ಪ್ರಧಾನ ಕಾರ್ಯದರ್ಶಿ ಸಫಿಯ ಪಿ.ಎಂ ಅವರು ಇಂಥದೇ ಬೇಡಿಕೆವುಳ್ಳ ಅರ್ಜಿಯನ್ನು ಸಲ್ಲಿಸಿದ್ದಾರೆ. ‘ಕುರಾನ್ ಸುನ್ನತ್ ಸೊಸೈಟಿ’ ಕೂಡ ಇದೇ ಬೇಡಿಕೆ ಮುಂದಿಟ್ಟುಕೊಂಡು 2016ರಲ್ಲಿ ಮೇಲ್ಮನವಿ ಸಲ್ಲಿಸಿದೆ. ಈ ಮೂರು ಅರ್ಜಿಗಳ ವಿಚಾರಣೆಯನ್ನು ಪೀಠ ನಡೆಸಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>