ಜಾಮೀನು ಪ್ರಕ್ರಿಯೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಗುಜರಾತ್ ಸರ್ಕಾರವು, ‘ಹಿರಿಯ ರಾಜಕೀಯ ನಾಯಕರ ಆಜ್ಞೆಯ ಮೇರೆಗೆ ತೀಸ್ತಾ ಅವರು ಇತರರೊಂದಿಗೆ ಸೇರಿ ‘ಸಂಚು’ ರೂಪಿಸಿದ್ದಾರೆ. ಅಷ್ಟೇ ಅಲ್ಲ, ತೀಸ್ತಾ ಅವರು ಆ ರಾಜಕೀಯ ನಾಯಕರೊಂದಿಗೆ ಸಭೆಯನ್ನೂ ನಡೆಸಿ, ಇದಕ್ಕೆ ಸಂಬಂಧಿಸಿದಂತೆ ಬೃಹತ್ ಮೊತ್ತದ ಹಣವನ್ನೂ ಪಡೆದಿದ್ದಾರೆ’ ಎಂದು ಆರೋಪ ಮಾಡಿದೆ.