ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀಕೃಷ್ಣ ಜನ್ಮಭೂಮಿ–ಶಾಹಿ ಈದ್ಗಾ ವಿವಾದ: ನ. 10ಕ್ಕೆ ವಿಚಾರಣೆ

Published 30 ಅಕ್ಟೋಬರ್ 2023, 14:37 IST
Last Updated 30 ಅಕ್ಟೋಬರ್ 2023, 14:37 IST
ಅಕ್ಷರ ಗಾತ್ರ

ನವದೆಹಲಿ: ಉತ್ತರ ಪ್ರದೇಶದ ಶ್ರೀಕೃಷ್ಣ ಜನ್ಮಭೂಮಿ–ಶಾಹಿ ಈದ್ಗಾ ವಿವಾದ ಪ್ರಕರಣದ ವಿಚಾರಣೆಯನ್ನು ಮಥುರಾ ಕೋರ್ಟ್‌ಗೆ ವರ್ಗಾಯಿಸಿರುವ ಅಲಹಾಬಾದ್‌ ಹೈಕೋರ್ಟ್‌ನ ಆದೇಶ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನವೆಂಬರ್‌ 10ರಂದು ನಡೆಸುವುದಾಗಿ ಸುಪ್ರೀಂ ಕೋರ್ಟ್‌, ಸೋಮವಾರ ಹೇಳಿದೆ. 

ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಸುಧಾಂಶು ಧುಲಿಯಾ ಅವರಿದ್ದ ವಿಭಾಗೀಯ ನ್ಯಾಯಪೀಠವು, ಹೈಕೋರ್ಟ್‌ನ ಆದೇಶ ಪ್ರಶ್ನಿಸಿ ಶಾಹಿ ಮಸೀದಿ ಈದ್ಗಾ ಟ್ರಸ್ಟ್‌ನ ನಿರ್ವಹಣಾ ಸಮಿತಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿತು. 

ಅಕ್ಟೋಬರ್‌ 3ರಂದು ನಡೆದ ವಿಚಾರಣೆ ವೇಳೆ, ವಿವಾದಕ್ಕೆ ಸಂಬಂಧಿಸಿದ ಮಾಹಿತಿ ಹಾಗೂ ದಾಖಲೆ ಪತ್ರಗಳನ್ನು ನ್ಯಾಯಪೀಠದ ಮುಂದೆ ಸಲ್ಲಿಸುವಂತೆ ಅಲಹಾಬಾದ್‌ ಹೈಕೋರ್ಟ್‌ನ ರಿಜಿಸ್ಟ್ರಾರ್‌ಗೆ ಸೂಚಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT