<p class="title"><strong>ನವದೆಹಲಿ</strong>: ‘ರಾಮ ಸೇತುವೆ’ಯನ್ನು ರಾಷ್ಟ್ರೀಯ ಪಾರಂಪರಿಕ ಸ್ಮಾರಕ ಎಂದು ಘೋಷಿಸಲು ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಅವರು ಸಲ್ಲಿಸಿರುವ ಮನವಿಯನ್ನು ಮಾರ್ಚ್ 9ರಂದು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಬುಧವಾರ ಒಪ್ಪಿಕೊಂಡಿದೆ.</p>.<p class="title">ರಾಮಸೇತುವೆ ಕುರಿತ ಅರ್ಜಿಯು ಕಳೆದ ಹಲವು ತಿಂಗಳುಗಳಿಂದ ವಿಚಾರಣೆಗೆ ಬಂದಿಲ್ಲ. ಈ ಕಾರಣದಿಂದ ಅದನ್ನು ವಿಚಾರಣಾ ಪಟ್ಟಿಯಿಂದ ಅಳಿಸಬೇಡಿ ಎಂದು ಸ್ವಾಮಿ ಅವರು ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ, ನ್ಯಾಯಮೂರ್ತಿಗಳಾದ ಎ.ಎಸ್.ಬೋಪಣ್ಣ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠದ ಎದುರು ಮನವಿ ಮಾಡಿದ್ದರು.</p>.<p class="title">‘ನಾವು ಈ ಅರ್ಜಿಯನ್ನು ಮಾರ್ಚ್ 9ರಂದು ವಿಚಾರಣೆ ನಡೆಸುತ್ತೇವೆ’ ಎಂದು ಪೀಠ ಹೇಳಿದೆ.</p>.<p class="title">ಕಳೆದ ವರ್ಷ ಏಪ್ರಿಲ್ 8 ರಂದು ಅರ್ಜಿಯ ತುರ್ತು ವಿಚಾರಣೆ ನಡೆಸುವಂತೆ ಸ್ವಾಮಿ ಕೋರಿದ್ದರು. ಇದಕ್ಕೂ ಮುನ್ನ ಮೂರು ತಿಂಗಳ ನಂತರ ಅರ್ಜಿಯನ್ನು ಪರಿಗಣಿಸುವುದಾಗಿ 2020ರ ಜನವರಿ 23 ರಂದು ಸುಪ್ರೀಂ ಕೋರ್ಟ್ ಹೇಳಿತ್ತು.</p>.<p class="title"><a href="https://www.prajavani.net/india-news/ed-arrests-maha-minister-nawab-malik-in-connection-with-dawood-ibrahim-money-laundering-case-913594.html" itemprop="url">ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಬಂಧನ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ</strong>: ‘ರಾಮ ಸೇತುವೆ’ಯನ್ನು ರಾಷ್ಟ್ರೀಯ ಪಾರಂಪರಿಕ ಸ್ಮಾರಕ ಎಂದು ಘೋಷಿಸಲು ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಅವರು ಸಲ್ಲಿಸಿರುವ ಮನವಿಯನ್ನು ಮಾರ್ಚ್ 9ರಂದು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಬುಧವಾರ ಒಪ್ಪಿಕೊಂಡಿದೆ.</p>.<p class="title">ರಾಮಸೇತುವೆ ಕುರಿತ ಅರ್ಜಿಯು ಕಳೆದ ಹಲವು ತಿಂಗಳುಗಳಿಂದ ವಿಚಾರಣೆಗೆ ಬಂದಿಲ್ಲ. ಈ ಕಾರಣದಿಂದ ಅದನ್ನು ವಿಚಾರಣಾ ಪಟ್ಟಿಯಿಂದ ಅಳಿಸಬೇಡಿ ಎಂದು ಸ್ವಾಮಿ ಅವರು ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ, ನ್ಯಾಯಮೂರ್ತಿಗಳಾದ ಎ.ಎಸ್.ಬೋಪಣ್ಣ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠದ ಎದುರು ಮನವಿ ಮಾಡಿದ್ದರು.</p>.<p class="title">‘ನಾವು ಈ ಅರ್ಜಿಯನ್ನು ಮಾರ್ಚ್ 9ರಂದು ವಿಚಾರಣೆ ನಡೆಸುತ್ತೇವೆ’ ಎಂದು ಪೀಠ ಹೇಳಿದೆ.</p>.<p class="title">ಕಳೆದ ವರ್ಷ ಏಪ್ರಿಲ್ 8 ರಂದು ಅರ್ಜಿಯ ತುರ್ತು ವಿಚಾರಣೆ ನಡೆಸುವಂತೆ ಸ್ವಾಮಿ ಕೋರಿದ್ದರು. ಇದಕ್ಕೂ ಮುನ್ನ ಮೂರು ತಿಂಗಳ ನಂತರ ಅರ್ಜಿಯನ್ನು ಪರಿಗಣಿಸುವುದಾಗಿ 2020ರ ಜನವರಿ 23 ರಂದು ಸುಪ್ರೀಂ ಕೋರ್ಟ್ ಹೇಳಿತ್ತು.</p>.<p class="title"><a href="https://www.prajavani.net/india-news/ed-arrests-maha-minister-nawab-malik-in-connection-with-dawood-ibrahim-money-laundering-case-913594.html" itemprop="url">ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಬಂಧನ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>