<p><strong>ನವದೆಹಲಿ</strong>: ವಕ್ಫ್ ತಿದ್ದುಪಡಿ ಕಾಯ್ದೆ–2025ರ ಸಿಂಧುತ್ವ ಪ್ರಶ್ನಿಸಿ ಎಐಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ಸೇರಿದಂತೆ 10 ಮಂದಿ ಸಲ್ಲಿಸಿರುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ನ್ಯಾಯಪೀಠ ಏ.16ರಂದು ವಿಚಾರಣೆ ನಡೆಸಲಿದೆ.</p><p>ನ್ಯಾಯಮೂರ್ತಿ ಸಂಜಯ್ ಕುಮಾರ್, ನ್ಯಾಯಮೂರ್ತಿ ಕೆ.ವಿ.ವಿಶ್ವನಾಥ ಅವರನ್ನೂ ಸಿಜೆಐ ನೇತೃತ್ವದ ಪೀಠ ಒಳಗೊಂಡಿರಲಿದೆ. ಓವೈಸಿ ಅವರ ಅರ್ಜಿಯ ಹೊರತಾಗಿ ಆಪ್ ನಾಯಕ ಅಮಾನತ್ ಉಲ್ಲಾ ಖಾನ್, ಆರ್ಜೆಡಿ ನಾಯಕ ಮನೋಜ್ ಕುಮಾರ್ ಜ್ಹಾ, ಕಾಂಗ್ರೆಸ್ ನಾಯಕ ಇಮ್ರಾನ್ ಪ್ರತಾಪ್ಗಢಿ ಅವರ ಅರ್ಜಿಗಳೂ ಈ 10ರಲ್ಲಿ ಸೇರಿವೆ. </p><p>ಇತ್ತ ಕೇಂದ್ರ ಸರ್ಕಾರವೂ ಏ.8ರಂದು ಸುಪ್ರೀಂ ಕೋರ್ಟ್ನಲ್ಲಿ ಕೇವಿಯಟ್ ಅರ್ಜಿ ಸಲ್ಲಿಸಿದ್ದು, ವಕ್ಫ್ ಕಾಯ್ದೆ ವಿಚಾರವಾಗಿ ಯಾವುದೇ ಆದೇಶ ಹೊರಡಿಸುವುದಕ್ಕೆ ಮುನ್ನ ತನ್ನ ವಾದ ಆಲಿಸುವಂತೆ ಕೋರಿದೆ. </p>.ವಕ್ಫ್ ತಿದ್ದುಪಡಿ ಕಾಯ್ದೆ: ಕೇಂದ್ರದಿಂದ ಸುಪ್ರೀಂ ಕೋರ್ಟ್ಗೆ ಕೇವಿಯಟ್.ವಕ್ಫ್ ಕಾಯ್ದೆ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ವಕ್ಫ್ ತಿದ್ದುಪಡಿ ಕಾಯ್ದೆ–2025ರ ಸಿಂಧುತ್ವ ಪ್ರಶ್ನಿಸಿ ಎಐಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ಸೇರಿದಂತೆ 10 ಮಂದಿ ಸಲ್ಲಿಸಿರುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ನ್ಯಾಯಪೀಠ ಏ.16ರಂದು ವಿಚಾರಣೆ ನಡೆಸಲಿದೆ.</p><p>ನ್ಯಾಯಮೂರ್ತಿ ಸಂಜಯ್ ಕುಮಾರ್, ನ್ಯಾಯಮೂರ್ತಿ ಕೆ.ವಿ.ವಿಶ್ವನಾಥ ಅವರನ್ನೂ ಸಿಜೆಐ ನೇತೃತ್ವದ ಪೀಠ ಒಳಗೊಂಡಿರಲಿದೆ. ಓವೈಸಿ ಅವರ ಅರ್ಜಿಯ ಹೊರತಾಗಿ ಆಪ್ ನಾಯಕ ಅಮಾನತ್ ಉಲ್ಲಾ ಖಾನ್, ಆರ್ಜೆಡಿ ನಾಯಕ ಮನೋಜ್ ಕುಮಾರ್ ಜ್ಹಾ, ಕಾಂಗ್ರೆಸ್ ನಾಯಕ ಇಮ್ರಾನ್ ಪ್ರತಾಪ್ಗಢಿ ಅವರ ಅರ್ಜಿಗಳೂ ಈ 10ರಲ್ಲಿ ಸೇರಿವೆ. </p><p>ಇತ್ತ ಕೇಂದ್ರ ಸರ್ಕಾರವೂ ಏ.8ರಂದು ಸುಪ್ರೀಂ ಕೋರ್ಟ್ನಲ್ಲಿ ಕೇವಿಯಟ್ ಅರ್ಜಿ ಸಲ್ಲಿಸಿದ್ದು, ವಕ್ಫ್ ಕಾಯ್ದೆ ವಿಚಾರವಾಗಿ ಯಾವುದೇ ಆದೇಶ ಹೊರಡಿಸುವುದಕ್ಕೆ ಮುನ್ನ ತನ್ನ ವಾದ ಆಲಿಸುವಂತೆ ಕೋರಿದೆ. </p>.ವಕ್ಫ್ ತಿದ್ದುಪಡಿ ಕಾಯ್ದೆ: ಕೇಂದ್ರದಿಂದ ಸುಪ್ರೀಂ ಕೋರ್ಟ್ಗೆ ಕೇವಿಯಟ್.ವಕ್ಫ್ ಕಾಯ್ದೆ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>